Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...