Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...