Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...