Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....