Homeಮುಖಪುಟಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

ಮಕ್ಕಳಿಗೆ ಉಚಿತವಾಗಿ ‘ಗಂಧದಗುಡಿ’ ತೋರಿಸಬೇಕು, ಏಕೆಂದರೆ..,: ಮಂಸೋರೆ ಮನದ ಮಾತು

- Advertisement -
- Advertisement -

“ಕರ್ನಾಟಕದ ಪ್ರತೀ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಉಚಿತವಾಗಿ ‘ಗಂಧದಗುಡಿ’ ಡಾಕ್ಯೂಡ್ರಾಮಾ ತೋರಿಸಬೇಕು. ಕರ್ನಾಟಕದ ಭೌಗೋಳಿಕ ವೈಭವವನ್ನು ಮುಂದಿನ ಪೀಳಿಗೆ ಅರಿಯುವಂತಾಗಲಿ. ಹತ್ತಾರು ಪುಸ್ತಕ ಓದುವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಸಿನೆಮಾ ಅರ್ಥವಾಗುತ್ತದೆ” ಎಂದು ನಿರ್ದೇಶಕರಾದ ಮಂಸೋರೆ ತಿಳಿಸಿದ್ದಾರೆ.

ಕರ್ನಾಟಕರತ್ನ ಪುನೀತ್‌ ರಾಜ್‌ಕುಮಾರ್‌ ಅವರ ‘ಗಂಧದಗುಡಿ’ ಸಾಕ್ಷ್ಯಾಚಿತ್ರ ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನವಾಗುತ್ತಿದೆ. “ಪುನೀತ್ ಅವರ ಕೊನೆಯ ಚಿತ್ರವೂ ಇದಾಗಿದ್ದು, ಅತ್ಯುತ್ತಮ ಸಂದೇಶವನ್ನೂ ಸಾರುತ್ತಿದೆ. ಹೀಗಾಗಿ ಶಾಲಾ ಮಕ್ಕಳಿಗೆ ಉಚಿತವಾಗಿ ಈ ಚಿತ್ರವನ್ನು ತೋರಿಸಬೇಕು” ಎಂದು ‘ಹರಿವು’, ‘ನಾತಿಚರಾಮಿ’, ‘ಆಕ್ಟ್‌-1978′ ಸಿನಿಮಾಗಳ ನಿರ್ದೇಶಕ ಮಂಸೋರೆ ಮನವಿ ಮಾಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಅವರು, ‘ಗಂಧದಗುಡಿ’ ಚಿತ್ರದ ವೈಶಿಷ್ಟ್ಯಗಳನ್ನು ಹಂಚಿಕೊಂಡರು. “ಒಳ್ಳೆಯ ಸಿನಿಮಾಗಳು ಸಾಕಷ್ಟು ಬರುತ್ತವೆ, ಹೋಗುತ್ತವೆ. ವಾರ್ತಾ ಮತ್ತು ಪ್ರಸಾರ ಇಲಾಖೆಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕ್ಷ್ಯಚಿತ್ರಗಳನ್ನೂ ನಿರ್ಮಿಸಲಾಗುತ್ತದೆ. ಆದರೆ ಇಲ್ಲಿಯವರೆಗೆ ಕನ್ನಡದಲ್ಲಿ ಬಂದಿರುವ ಸಾಕ್ಷ್ಯಾಚಿತ್ರಗಳಿಗಿಂತ ಗಂಧದಗುಡಿ ವಿಭಿನ್ನವಾಗಿದೆ. ಕರ್ನಾಟಕದ ವೈವಿಧ್ಯತೆಯನ್ನು ಕಟ್ಟಿಕೊಟ್ಟಿದೆ. ಪುನೀತ್ ರಾಜ್‌ಕುಮಾರ್‌ ಅವರು ಇಲ್ಲಿ ಪ್ರಯಾಣಿಸಿ, ಚಿಂತನೆಗಳನ್ನು ಬಿತ್ತಿದ್ದಾರೆ” ಎಂದರು.

“ಮಕ್ಕಳಿಗೆ ಹೊಸ ಮಾದರಿಯ ಶಿಕ್ಷಣ ನೀಡಬೇಕು ಎಂಬ ಪ್ರಯತ್ನಗಳು ಈಗ ನಡೆಯುತ್ತಿವೆ. ಇಂತಹ ಸಮಯದಲ್ಲಿ ಗಂಧದಗುಡಿ ಪ್ರದರ್ಶನವಾಗುತ್ತಿರುವುದು ಬಹಳ ಮುಖ್ಯವಾಗಿದೆ. ಇದರಲ್ಲಿ ಅತ್ಯುತ್ತಮ ದೃಶ್ಯಗಳಿವೆ. ಅವುಗಳನ್ನು ಟಿವಿಯಲ್ಲಿ ತೋರಿಸುವುದಕ್ಕಿಂತ ಚಿತ್ರಮಂದಿರದಲ್ಲಿ ಮಕ್ಕಳಿಗೆ ಪ್ರದರ್ಶಿಸಿದರೆ ಉತ್ತಮ ಪರಿಣಾಮ ಬೀರುತ್ತದೆ” ಎಂದು ಅಭಿಪ್ರಾಯಪಟ್ಟರು.

“ಧರ್ಮ, ಹಿಜಾಬ್‌, ಕೇಸರಿಶಾಲು ಇತ್ಯಾದಿ ಗಲಾಟೆಯಾಚೆಗೆ ಕರ್ನಾಟಕವಿದೆ. ನಮ್ಮ ಅಸ್ಮಿತೆ ವಿನೂತನವಾದದ್ದು ಎಂಬುದನ್ನು ಗಂಧದಗುಡಿ ಸಾರುತ್ತದೆ. ಭೌಗೋಳಿಕವಾಗಿ ವಿಶಿಷ್ಟವಾದ ರಾಜ್ಯ ಕರ್ನಾಟಕ ಎಂಬುದನ್ನು ಒಂದೂವರೆ ಗಂಟೆಯಲ್ಲಿ ಪರಿಚಯಿಸಿಕೊಡಲಾಗಿದೆ. ಇದನ್ನು ಮಕ್ಕಳಿಗೆ ತೋರಿಸಿದರೆ ಹಿಜಾಬ್‌, ಕೇಸರಿಶಾಲಿನಂತಹ ಬೇಡವಾದ ವಿಷಯಗಳನ್ನು ಬಿಟ್ಟು ಕರ್ನಾಟಕದ ಬಗ್ಗೆ ಪ್ರಜ್ಞೆ ಬೆಳೆಸಿಕೊಳ್ಳುತ್ತಾರೆ” ಎಂದು ಆಶಿಸಿದರು.

“ಮಕ್ಕಳಿಗಾಗಿ ಪ್ರದರ್ಶನಗಳನ್ನು ಆಯೋಜಿಸುವುದು ಸರ್ಕಾರಕ್ಕೆ ಸವಾಲಿನ ವಿಷಯವೇನೂ ಅಲ್ಲ. ನಾವು ಚಿಕ್ಕವಯಸ್ಸಿನಲ್ಲಿದ್ದಾಗ ಸಾಕಷ್ಟು ಸಿನಿಮಾಗಳನ್ನು ತೋರಿಸುತ್ತಿದ್ದರು. ಸರ್ಕಾರ ಯಾವುದ್ಯಾವುದೋ ವಿಷಯಕ್ಕೆ ಹಣವನ್ನು ಖರ್ಚು ಮಾಡುತ್ತದೆ. ಇಂತಹ ಒಳ್ಳೆಯ ಸಂಗತಿಗೆ ಹಣ ವಿನಿಯೋಗಿಸುವುದು ಸೂಕ್ತ” ಎಂದು ಹೇಳಿದರು.

“ಬಡಮಕ್ಕಳಿಗೆ ಹಣ ನೀಡುವುದು ಕಷ್ಟವಾಗುತ್ತದೆ. ಟಿಕೆಟ್ ವಸೂಲಿ ಮಾಡದೆ, ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು. ಟಿಕೆಟ್ ಎಂದಾಕ್ಷಣ ಸ್ಥಳೀಯವಾಗಿ ಹಣ ವಸೂಲಿ ಮಾಡುವವರು ಇರುತ್ತಾರೆ. ಯಾವುದೇ ಗೊಂದಲವಿಲ್ಲದೆ ಉಚಿತವಾಗಿ ಪ್ರದರ್ಶನಗಳನ್ನು ಆಯೋಜಿಸಬೇಕು” ಎಂದು ಕೋರಿದರು.

ಇದನ್ನೂ ಓದಿರಿ: ಕನ್ನಡ ರಾಜ್ಯೋತ್ಸವದಂದು ‘ಪುನೀತ್ ರಾಜ್‌ಕುಮಾರ್‌‌’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ

“ಕರ್ನಾಟಕ ವೈವಿಧ್ಯತೆಯನ್ನು ಈ ಸಾಕ್ಷ್ಯಾಚಿತ್ರದಲ್ಲಿ ಚೆನ್ನಾಗಿ ಕಟ್ಟಿಕೊಟ್ಟಿದ್ದಾರೆ. ಇದು ಎಲ್ಲ ಮಕ್ಕಳಿಗೂ ತಲುಪಬೇಕಿದೆ. ಇದರ ಜೊತೆಗೆ ಪುನೀತ್ ರಾಜ್‌ಕುಮಾರ್‌ ಅವರ ವ್ಯಕ್ತಿತ್ವ ಮಕ್ಕಳ ಮನಸ್ಸಿನಲ್ಲಿ ಉಳಿಯುತ್ತದೆ. ಗಂಧದಗುಡಿ ನೋಡಿದವರಲ್ಲಿ ಶೇ.10ರಷ್ಟು ಮಕ್ಕಳಾದರೂ ವಿಭಿನ್ನವಾಗಿ ಆಲೋಚನೆ ಬೆಳೆಸಿಕೊಳ್ಳಬಲ್ಲರು” ಎಂದು ತಿಳಿಸಿದರು.

“ದಸರಾಕ್ಕಾಗಿ ಖರ್ಚು ಮಾಡಿದ ಹಣದಲ್ಲಿ ಶೇ.10ರಷ್ಟು ಹಣವನ್ನಾದರೂ ಈ ಕಾರ್ಯಕ್ಕೆ ಖರ್ಚು ಮಾಡಿದರೆ ಸಾಕು, ಎಲ್ಲ ಮಕ್ಕಳಿಗೆ ಸಿನಿಮಾ ತೋರಿಸಬಹುದು. ತಾಲ್ಲೂಕು, ಹೋಬಳಿ ಮಟ್ಟದಲ್ಲಿರುವ ಚಿತ್ರಮಂದಿರಗಳಲ್ಲಿ ಮಕ್ಕಳಿಗಾಗಿ ಮಾರ್ನಿಂಗ್ ಷೋ ಮೀಸಲಿಡಬೇಕು” ಎಂದು ಒತ್ತಾಯಿಸಿದರು.

“ರಾಜ್ಯ ಸರ್ಕಾರ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡುತ್ತಿದೆ. ಮಕ್ಕಳಿಗೆ ಗಂಧದಗುಡಿ ಉಚಿತವಾಗಿ ತೋರಿಸಿದರೆ ಕರ್ನಾಟಕ ರತ್ನವನ್ನು ನೀಡಿದಷ್ಟೇ ಗೌರವವನ್ನು ಅಪ್ಪು ಅವರಿಗೆ ನೀಡಿದಂತಾಗುತ್ತದೆ” ಎಂದು ಅಭಿಪ್ರಾಯಪಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ನ ಸಿಯುಟಾಕ್ಕೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....