Homeಮುಖಪುಟದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

- Advertisement -
- Advertisement -

ತಪ್ಪುದಾರಿಗೆಳೆಯುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬೌರ್ನ್‌ವಿಟಾವನ್ನು ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಆಯೋಗ ಈ ಸೂಚನೆಯನ್ನು ಬೌರ್ನ್‌‌ವಿಟಾ ಸಂಸ್ಥೆಗೆ ನೀಡಿದೆ.

“ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರ ನೋಟೀಸ್‌ನಲ್ಲಿ ತಿಳಿಸಿದೆ.

“ನಿಮ್ಮ ಉತ್ಪನ್ನದ ಲೇಬಲಿಂಗ್, ಪ್ಯಾಕೇಜಿಂಗ್, ಪ್ರದರ್ಶನ ಮತ್ತು ಜಾಹೀರಾತುಗಳನ್ನು ಆಯೋಗವು ಗಮನಿಸುತ್ತದೆ. ನೀವು ಮಾಡುತ್ತಿರುವ ಪ್ರತಿಪಾದನೆಗಳು ಸಾಮಾನ್ಯ ಜನರನ್ನು ತಪ್ಪುದಾರಿಗೆಳೆಯುವಂತಿವೆ” ಎಂದು ಎಚ್ಚರಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪವನ್ನು ಪ್ರಸ್ತಾಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೊವೊಂದನ್ನು ಹಂಚಿಕೊಂಡಿದ್ದರು. “ಮಕ್ಕಳ ಪಾನೀಯವೆಂದೇ ಜನಪ್ರಿಯತೆ ಗಳಿಸಿರುವ ಇದರಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ವಿಡಿಯೊದಲ್ಲಿ ಆರೋಪಿಸಿದ್ದರು. ನಂತರ ವಿವಾದವು ಭುಗಿಲೆದ್ದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ 12 ಮಿಲಿಯನ್ ವೀವ್ಸ್‌ ಬಂದಿವೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವೀಡಿಯೊವನ್ನು ಡಿಲೀಟ್ ಮಾಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವೀಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದೆ. ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಬೋರ್ನ್‌ವಿಟಾವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

“ಪ್ರತಿ 20 ಗ್ರಾಂ ಬೌರ್ನ್‌ವಿಟಾ ಸೇವೆಯು 7.5 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಇದು ಸರಿಸುಮಾರು ಒಂದೂವರೆ ಟೀ ಚಮಚಗಳಷ್ಟು ಇರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಮಕ್ಕಳಿಗೆ ದಿನನಿತ್ಯ ಶಿಫಾರಸು ಮಾಡಲಾದ ಸಕ್ಕರೆ ಸೇವನೆಯ ಮಿತಿಗಿಂತ ಕಡಿಮೆ ಇದೆ” ಎಂದು ಸ್ಪಷ್ಟಪಡಿಸಲಾಗಿದೆ.

ಶುಕ್ರವಾರ ಆಯೋಗ ನೀಡಿರುವ ನೋಟೀಸ್‌ನಲ್ಲಿ, “ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರ ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆಯ ಪ್ರಕಾರ ಕಡ್ಡಾಯವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ. ಆದರೆ ಸಂಸ್ಥೆಯ ಉತ್ಪನ್ನಗಳು ಈ ವಿಚಾರದಲ್ಲಿ ವಿಫಲವಾಗಿವೆ” ಎಂದು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...