Homeಮುಖಪುಟದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

- Advertisement -
- Advertisement -

ತಪ್ಪುದಾರಿಗೆಳೆಯುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬೌರ್ನ್‌ವಿಟಾವನ್ನು ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಆಯೋಗ ಈ ಸೂಚನೆಯನ್ನು ಬೌರ್ನ್‌‌ವಿಟಾ ಸಂಸ್ಥೆಗೆ ನೀಡಿದೆ.

“ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರ ನೋಟೀಸ್‌ನಲ್ಲಿ ತಿಳಿಸಿದೆ.

“ನಿಮ್ಮ ಉತ್ಪನ್ನದ ಲೇಬಲಿಂಗ್, ಪ್ಯಾಕೇಜಿಂಗ್, ಪ್ರದರ್ಶನ ಮತ್ತು ಜಾಹೀರಾತುಗಳನ್ನು ಆಯೋಗವು ಗಮನಿಸುತ್ತದೆ. ನೀವು ಮಾಡುತ್ತಿರುವ ಪ್ರತಿಪಾದನೆಗಳು ಸಾಮಾನ್ಯ ಜನರನ್ನು ತಪ್ಪುದಾರಿಗೆಳೆಯುವಂತಿವೆ” ಎಂದು ಎಚ್ಚರಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪವನ್ನು ಪ್ರಸ್ತಾಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೊವೊಂದನ್ನು ಹಂಚಿಕೊಂಡಿದ್ದರು. “ಮಕ್ಕಳ ಪಾನೀಯವೆಂದೇ ಜನಪ್ರಿಯತೆ ಗಳಿಸಿರುವ ಇದರಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ವಿಡಿಯೊದಲ್ಲಿ ಆರೋಪಿಸಿದ್ದರು. ನಂತರ ವಿವಾದವು ಭುಗಿಲೆದ್ದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ 12 ಮಿಲಿಯನ್ ವೀವ್ಸ್‌ ಬಂದಿವೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವೀಡಿಯೊವನ್ನು ಡಿಲೀಟ್ ಮಾಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವೀಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದೆ. ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಬೋರ್ನ್‌ವಿಟಾವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

“ಪ್ರತಿ 20 ಗ್ರಾಂ ಬೌರ್ನ್‌ವಿಟಾ ಸೇವೆಯು 7.5 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಇದು ಸರಿಸುಮಾರು ಒಂದೂವರೆ ಟೀ ಚಮಚಗಳಷ್ಟು ಇರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಮಕ್ಕಳಿಗೆ ದಿನನಿತ್ಯ ಶಿಫಾರಸು ಮಾಡಲಾದ ಸಕ್ಕರೆ ಸೇವನೆಯ ಮಿತಿಗಿಂತ ಕಡಿಮೆ ಇದೆ” ಎಂದು ಸ್ಪಷ್ಟಪಡಿಸಲಾಗಿದೆ.

ಶುಕ್ರವಾರ ಆಯೋಗ ನೀಡಿರುವ ನೋಟೀಸ್‌ನಲ್ಲಿ, “ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರ ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆಯ ಪ್ರಕಾರ ಕಡ್ಡಾಯವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ. ಆದರೆ ಸಂಸ್ಥೆಯ ಉತ್ಪನ್ನಗಳು ಈ ವಿಚಾರದಲ್ಲಿ ವಿಫಲವಾಗಿವೆ” ಎಂದು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...