Homeಮುಖಪುಟದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

- Advertisement -
- Advertisement -

ತಪ್ಪುದಾರಿಗೆಳೆಯುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬೌರ್ನ್‌ವಿಟಾವನ್ನು ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಆಯೋಗ ಈ ಸೂಚನೆಯನ್ನು ಬೌರ್ನ್‌‌ವಿಟಾ ಸಂಸ್ಥೆಗೆ ನೀಡಿದೆ.

“ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರ ನೋಟೀಸ್‌ನಲ್ಲಿ ತಿಳಿಸಿದೆ.

“ನಿಮ್ಮ ಉತ್ಪನ್ನದ ಲೇಬಲಿಂಗ್, ಪ್ಯಾಕೇಜಿಂಗ್, ಪ್ರದರ್ಶನ ಮತ್ತು ಜಾಹೀರಾತುಗಳನ್ನು ಆಯೋಗವು ಗಮನಿಸುತ್ತದೆ. ನೀವು ಮಾಡುತ್ತಿರುವ ಪ್ರತಿಪಾದನೆಗಳು ಸಾಮಾನ್ಯ ಜನರನ್ನು ತಪ್ಪುದಾರಿಗೆಳೆಯುವಂತಿವೆ” ಎಂದು ಎಚ್ಚರಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪವನ್ನು ಪ್ರಸ್ತಾಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೊವೊಂದನ್ನು ಹಂಚಿಕೊಂಡಿದ್ದರು. “ಮಕ್ಕಳ ಪಾನೀಯವೆಂದೇ ಜನಪ್ರಿಯತೆ ಗಳಿಸಿರುವ ಇದರಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ವಿಡಿಯೊದಲ್ಲಿ ಆರೋಪಿಸಿದ್ದರು. ನಂತರ ವಿವಾದವು ಭುಗಿಲೆದ್ದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ 12 ಮಿಲಿಯನ್ ವೀವ್ಸ್‌ ಬಂದಿವೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವೀಡಿಯೊವನ್ನು ಡಿಲೀಟ್ ಮಾಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವೀಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದೆ. ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಬೋರ್ನ್‌ವಿಟಾವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

“ಪ್ರತಿ 20 ಗ್ರಾಂ ಬೌರ್ನ್‌ವಿಟಾ ಸೇವೆಯು 7.5 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಇದು ಸರಿಸುಮಾರು ಒಂದೂವರೆ ಟೀ ಚಮಚಗಳಷ್ಟು ಇರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಮಕ್ಕಳಿಗೆ ದಿನನಿತ್ಯ ಶಿಫಾರಸು ಮಾಡಲಾದ ಸಕ್ಕರೆ ಸೇವನೆಯ ಮಿತಿಗಿಂತ ಕಡಿಮೆ ಇದೆ” ಎಂದು ಸ್ಪಷ್ಟಪಡಿಸಲಾಗಿದೆ.

ಶುಕ್ರವಾರ ಆಯೋಗ ನೀಡಿರುವ ನೋಟೀಸ್‌ನಲ್ಲಿ, “ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರ ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆಯ ಪ್ರಕಾರ ಕಡ್ಡಾಯವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ. ಆದರೆ ಸಂಸ್ಥೆಯ ಉತ್ಪನ್ನಗಳು ಈ ವಿಚಾರದಲ್ಲಿ ವಿಫಲವಾಗಿವೆ” ಎಂದು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...