Homeಮುಖಪುಟದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

- Advertisement -
- Advertisement -

ತಪ್ಪುದಾರಿಗೆಳೆಯುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬೌರ್ನ್‌ವಿಟಾವನ್ನು ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಆಯೋಗ ಈ ಸೂಚನೆಯನ್ನು ಬೌರ್ನ್‌‌ವಿಟಾ ಸಂಸ್ಥೆಗೆ ನೀಡಿದೆ.

“ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರ ನೋಟೀಸ್‌ನಲ್ಲಿ ತಿಳಿಸಿದೆ.

“ನಿಮ್ಮ ಉತ್ಪನ್ನದ ಲೇಬಲಿಂಗ್, ಪ್ಯಾಕೇಜಿಂಗ್, ಪ್ರದರ್ಶನ ಮತ್ತು ಜಾಹೀರಾತುಗಳನ್ನು ಆಯೋಗವು ಗಮನಿಸುತ್ತದೆ. ನೀವು ಮಾಡುತ್ತಿರುವ ಪ್ರತಿಪಾದನೆಗಳು ಸಾಮಾನ್ಯ ಜನರನ್ನು ತಪ್ಪುದಾರಿಗೆಳೆಯುವಂತಿವೆ” ಎಂದು ಎಚ್ಚರಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪವನ್ನು ಪ್ರಸ್ತಾಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೊವೊಂದನ್ನು ಹಂಚಿಕೊಂಡಿದ್ದರು. “ಮಕ್ಕಳ ಪಾನೀಯವೆಂದೇ ಜನಪ್ರಿಯತೆ ಗಳಿಸಿರುವ ಇದರಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ವಿಡಿಯೊದಲ್ಲಿ ಆರೋಪಿಸಿದ್ದರು. ನಂತರ ವಿವಾದವು ಭುಗಿಲೆದ್ದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ 12 ಮಿಲಿಯನ್ ವೀವ್ಸ್‌ ಬಂದಿವೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವೀಡಿಯೊವನ್ನು ಡಿಲೀಟ್ ಮಾಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವೀಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದೆ. ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಬೋರ್ನ್‌ವಿಟಾವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

“ಪ್ರತಿ 20 ಗ್ರಾಂ ಬೌರ್ನ್‌ವಿಟಾ ಸೇವೆಯು 7.5 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಇದು ಸರಿಸುಮಾರು ಒಂದೂವರೆ ಟೀ ಚಮಚಗಳಷ್ಟು ಇರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಮಕ್ಕಳಿಗೆ ದಿನನಿತ್ಯ ಶಿಫಾರಸು ಮಾಡಲಾದ ಸಕ್ಕರೆ ಸೇವನೆಯ ಮಿತಿಗಿಂತ ಕಡಿಮೆ ಇದೆ” ಎಂದು ಸ್ಪಷ್ಟಪಡಿಸಲಾಗಿದೆ.

ಶುಕ್ರವಾರ ಆಯೋಗ ನೀಡಿರುವ ನೋಟೀಸ್‌ನಲ್ಲಿ, “ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರ ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆಯ ಪ್ರಕಾರ ಕಡ್ಡಾಯವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ. ಆದರೆ ಸಂಸ್ಥೆಯ ಉತ್ಪನ್ನಗಳು ಈ ವಿಚಾರದಲ್ಲಿ ವಿಫಲವಾಗಿವೆ” ಎಂದು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...