Homeಅಂತರಾಷ್ಟ್ರೀಯಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

- Advertisement -
- Advertisement -

ಚಿಲಿ ರಾಜಧಾನಿ ಸ್ಯಾಂಟಿಯಾಗೋದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು 19 ನೇ ಶತಮಾನದ ಹಳೆಯ ಚರ್ಚು ಸೇರಿದಂತೆ ಎರಡು ಚರ್ಚುಗಳನ್ನು ಸುಟ್ಟುಹಾಕಿದ್ದಾರೆ. ಭಾನುವಾರ ಶಾಂತಿಯುತವಾಗಿ ರ್‍ಯಾಲಿಗಳು ನಡೆದಿದ್ದು, ನಂತರ ಈ ಪ್ರತಿಭಟನೆ ಗಲಭೆಗೆ ತಿರುಗಿದೆ. ಕಳೆದ ವರ್ಷ ನಡೆದ ಪ್ರತಿಭಟನೆಯಲ್ಲಿ 30 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದರು. ಈಗ ಈ ಪ್ರತಿಭಟನೆಯ ವರ್ಷಾಚರಣೆಯಲ್ಲಿ ಮತ್ತೆ ಗಲಭೆ ಭುಗಿಲೆದ್ದಿದೆ.

2019 ರ ಪ್ರತಿಭಟನೆಯ ಪ್ರಮುಖ ಬೇಡಿಕೆಯಾದ ದೇಶದ ಸರ್ವಾಧಿಕಾರ-ಯುಗದ ಸಂವಿಧಾನವನ್ನು ರದ್ದುಗೊಳಿಸಬೇಕೆ ಎಂಬ ಜನಾಭಿಪ್ರಾಯ ಸಂಗ್ರಹಣೆಯಲ್ಲಿ “ಹೌದು” ಎಂದು ಮತ ಚಲಾಯಿಸುಂತೆ ಕರೆ ಕೊಡುವ ಘೋಷಣಾ ಪತ್ರವನ್ನು ಪ್ರತಿಭಟನಾಗಾರರು ಹಿಡಿದಿದ್ದರು. ಅಕ್ಟೋಬರ್ 25 ರ ರಂದು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

PC: AFP

ಪ್ರತಿಭಟನೆಗಳು ಆರಂಭದಲ್ಲಿ ಶಾಂತಿಯುತವಾಗಿದ್ದರೂ ನಂತರ ಹಿಂಸಾಚಾರ ಘಟನೆಗಳು ನಡೆದವು, ಸೂಪರ್‌ರ್ಮಾರ್ಕೆಟ್‌‌ಗಳನ್ನು ಲೂಟಿ ಮಾಡುವುದು ಸೇರಿದಂತೆ ರಾಜಧಾನಿಯಾದ್ಯಂತ ಪೊಲೀಸರೊಂದಿಗೆ ಘರ್ಷಣೆಗಳು ಸಂಭವಿಸಿದವು.

ಹಿಂಸಾಚಾರಗಳು ಭುಗಿಲೇಳುವ ಮೊದಲು ಮಾತನಾಡಿದ ಆಂತರಿಕ ವ್ಯವಹಾರಗಳ ಸಚಿವ ವಿಕ್ಟರ್ ಪೆರೆಜ್ ಮಾತನಾಡಿ, ಶಾಂತಿಯುತ ರ್‍ಯಾಲಿಗಳನ್ನು ಶ್ಲಾಘಿಸಿದ್ದರು. ಮುಂಬರುವ ಅಕ್ಟೋಬರ್ 25 ರ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಅವರು ಚಿಲಿಯನ್ನರಿಗೆ ಕರೆ ನೀಡಿದ್ದರು.

PC: Getty

“ಹಿಂಸಾಚಾರ ನಡೆಸುವವರು ಚಿಲಿಯ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಪರಿಹರಿಸುವುದನ್ನು ಬಯಸುವುದಿಲ್ಲ” ಎಂದು ಪೆರೆಜ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದು, ಭಾನುವಾರ ನಡೆಯುವ ಜನಾಭಿಪ್ರಾಯ ಸಂಗ್ರಹಣಾ ಸಮಯದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವುದಾಗಿ ಹೇಳಿದರು.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಮುಂಜಾನೆ ಉದ್ರಿಕ್ತ ಜನರ ಗುಂಪು ಕಮ್ಯುನಿಸ್ಟ್ ಪಕ್ಷದ ಮೇಯರ್‌ಗೆ ಬೆದರಿಕೆ ಹಾಕಿದ್ದರು. ನಂತರ ಮುಖವಾಡ ಧರಿಸಿದ ವ್ಯಕ್ತಿಗಳು ಪೊಲೀಸ್ ಪ್ರಧಾನ ಕಚೇರಿ ಮತ್ತು ಚರ್ಚ್‌ಗೆ ಬೆಂಕಿ ಹಚ್ಚಿದರು. ಈ ಅಶಾಂತಿಯಿಂದಾಗಿ 15 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಳೆದ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭವಾದ ಪ್ರತಿಭಟನೆಗಳು ಡಿಸೆಂಬರ್ ಮಧ್ಯಭಾಗದವರೆಗೆ ಚಿಲಿ ದೇಶಾದ್ಯಂತ ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆಗಳನ್ನು ತರಲು ಒತ್ತಾಯಿಸುತ್ತಿದ್ದವು. ಅಂದು ನಡೆದಿದ್ದ ಗಲಭೆ ಮತ್ತು ಲೂಟಿಯಿಂದಾಗಿ ದೇಶದ ವ್ಯವಹಾರಗಳು ಮತ್ತು ಮೂಲಸೌಕರ್ಯಗಳಿಗೆ ಶತಕೋಟಿ ಡಾಲರ್ ನಷ್ಟ ಉಂಟಾಗಿತ್ತು.

ಸ್ಯಾಂಟಿಯಾಗೊದಲ್ಲಿ ನಡೆದ ಭಾನುವಾರದ ರ್‍ಯಾಲಿಯಲ್ಲಿ ಸಂಜೆ 6 ರ ಹೊತ್ತಿಗೆ ಸುಮಾರು 25 ಸಾವಿರ ಜನರು ಸೇರಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದು 2019 ರ ಪ್ರತಿಭಟನೆಗಿಂತ ಚಿಕ್ಕ ಪ್ರತಿಭಟನೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಪ್ರತಿಭಟನೆಗಳು ಸೇರಿದಂತೆ ಹಲವು ಹಿಂಸಾಚಾರಗಳು ಚಿಲಿಯಲ್ಲಿ ಪ್ರಾರಂಭವಾಗಿದೆ. 60 ಲಕ್ಷ ಜನಸಂಖ್ಯೆಯಿರುವ ರಾಜಧಾನಿಯು ಕೊರೊನಾದಿಂದ ತಿಂಗಳುಗಳ ಕಾಲ ಲಾಕ್‌ಡೌನ್ ಆಗಿತ್ತು. ಭಾನುವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರತಿಭಟನಾಕಾರರು ಮುಖವಾಡಗಳನ್ನು ಧರಿಸಿದ್ದರು ಎಂದು ಟೆಲಿಗ್ರಾಫ್ ಬರೆದಿದೆ.

ಇದನ್ನೂ ಓದಿ: ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....