Homeಅಂತರಾಷ್ಟ್ರೀಯಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

- Advertisement -
- Advertisement -

ಚಿಲಿ ರಾಜಧಾನಿ ಸ್ಯಾಂಟಿಯಾಗೋದಲ್ಲಿ ಪ್ರತಿಭಟನೆ ಭುಗಿಲೆದ್ದಿದ್ದು, ಪ್ರತಿಭಟನಾಕಾರರು 19 ನೇ ಶತಮಾನದ ಹಳೆಯ ಚರ್ಚು ಸೇರಿದಂತೆ ಎರಡು ಚರ್ಚುಗಳನ್ನು ಸುಟ್ಟುಹಾಕಿದ್ದಾರೆ. ಭಾನುವಾರ ಶಾಂತಿಯುತವಾಗಿ ರ್‍ಯಾಲಿಗಳು ನಡೆದಿದ್ದು, ನಂತರ ಈ ಪ್ರತಿಭಟನೆ ಗಲಭೆಗೆ ತಿರುಗಿದೆ. ಕಳೆದ ವರ್ಷ ನಡೆದ ಪ್ರತಿಭಟನೆಯಲ್ಲಿ 30 ಜನರು ಮೃತಪಟ್ಟಿದ್ದು ಸಾವಿರಾರು ಜನರು ಗಾಯಗೊಂಡಿದ್ದರು. ಈಗ ಈ ಪ್ರತಿಭಟನೆಯ ವರ್ಷಾಚರಣೆಯಲ್ಲಿ ಮತ್ತೆ ಗಲಭೆ ಭುಗಿಲೆದ್ದಿದೆ.

2019 ರ ಪ್ರತಿಭಟನೆಯ ಪ್ರಮುಖ ಬೇಡಿಕೆಯಾದ ದೇಶದ ಸರ್ವಾಧಿಕಾರ-ಯುಗದ ಸಂವಿಧಾನವನ್ನು ರದ್ದುಗೊಳಿಸಬೇಕೆ ಎಂಬ ಜನಾಭಿಪ್ರಾಯ ಸಂಗ್ರಹಣೆಯಲ್ಲಿ “ಹೌದು” ಎಂದು ಮತ ಚಲಾಯಿಸುಂತೆ ಕರೆ ಕೊಡುವ ಘೋಷಣಾ ಪತ್ರವನ್ನು ಪ್ರತಿಭಟನಾಗಾರರು ಹಿಡಿದಿದ್ದರು. ಅಕ್ಟೋಬರ್ 25 ರ ರಂದು ಅಲ್ಲಿ ಜನಾಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಇದನ್ನೂ ಓದಿ: ಬೊಲಿವಿಯಾ ಚುನಾವಣೆ: ಅಮೆರಿಕಾ ಪ್ರೇರಿತ ದಂಗೆಯ ಹೊರತಾಗಿಯೂ ಎಡಪಕ್ಷಕ್ಕೆ ಭರ್ಜರಿ ಜಯ!

PC: AFP

ಪ್ರತಿಭಟನೆಗಳು ಆರಂಭದಲ್ಲಿ ಶಾಂತಿಯುತವಾಗಿದ್ದರೂ ನಂತರ ಹಿಂಸಾಚಾರ ಘಟನೆಗಳು ನಡೆದವು, ಸೂಪರ್‌ರ್ಮಾರ್ಕೆಟ್‌‌ಗಳನ್ನು ಲೂಟಿ ಮಾಡುವುದು ಸೇರಿದಂತೆ ರಾಜಧಾನಿಯಾದ್ಯಂತ ಪೊಲೀಸರೊಂದಿಗೆ ಘರ್ಷಣೆಗಳು ಸಂಭವಿಸಿದವು.

ಹಿಂಸಾಚಾರಗಳು ಭುಗಿಲೇಳುವ ಮೊದಲು ಮಾತನಾಡಿದ ಆಂತರಿಕ ವ್ಯವಹಾರಗಳ ಸಚಿವ ವಿಕ್ಟರ್ ಪೆರೆಜ್ ಮಾತನಾಡಿ, ಶಾಂತಿಯುತ ರ್‍ಯಾಲಿಗಳನ್ನು ಶ್ಲಾಘಿಸಿದ್ದರು. ಮುಂಬರುವ ಅಕ್ಟೋಬರ್ 25 ರ ಸಾಂವಿಧಾನಿಕ ಜನಾಭಿಪ್ರಾಯ ಸಂಗ್ರಹಣೆಯಲ್ಲಿ ಮತದಾನ ಮಾಡುವ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಬೇಕೆಂದು ಅವರು ಚಿಲಿಯನ್ನರಿಗೆ ಕರೆ ನೀಡಿದ್ದರು.

PC: Getty

“ಹಿಂಸಾಚಾರ ನಡೆಸುವವರು ಚಿಲಿಯ ಸಮಸ್ಯೆಗಳನ್ನು ಪ್ರಜಾಪ್ರಭುತ್ವದ ವಿಧಾನಗಳ ಮೂಲಕ ಪರಿಹರಿಸುವುದನ್ನು ಬಯಸುವುದಿಲ್ಲ” ಎಂದು ಪೆರೆಜ್ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದ್ದು, ಭಾನುವಾರ ನಡೆಯುವ ಜನಾಭಿಪ್ರಾಯ ಸಂಗ್ರಹಣಾ ಸಮಯದಲ್ಲಿ ಕಾನೂನು ಉಲ್ಲಂಘಿಸಿದರೆ ಶಿಕ್ಷೆ ವಿಧಿಸುವುದಾಗಿ ಹೇಳಿದರು.

ಇದನ್ನೂ ಓದಿ: ಸೋಶಿಯಲಿಸಂ-ಕಮ್ಯುನಿಸಂ ವಿರುದ್ಧದ ಹೋರಾಟದಲ್ಲಿ ಭಾರತ-ಅಮೇರಿಕಾ ಒಂದಾಗಬೇಕು: Jr. ಟ್ರಂಪ್

ಮುಂಜಾನೆ ಉದ್ರಿಕ್ತ ಜನರ ಗುಂಪು ಕಮ್ಯುನಿಸ್ಟ್ ಪಕ್ಷದ ಮೇಯರ್‌ಗೆ ಬೆದರಿಕೆ ಹಾಕಿದ್ದರು. ನಂತರ ಮುಖವಾಡ ಧರಿಸಿದ ವ್ಯಕ್ತಿಗಳು ಪೊಲೀಸ್ ಪ್ರಧಾನ ಕಚೇರಿ ಮತ್ತು ಚರ್ಚ್‌ಗೆ ಬೆಂಕಿ ಹಚ್ಚಿದರು. ಈ ಅಶಾಂತಿಯಿಂದಾಗಿ 15 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ.

ಕಳೆದ ವರ್ಷ ಅಕ್ಟೋಬರ್ 18 ರಿಂದ ಪ್ರಾರಂಭವಾದ ಪ್ರತಿಭಟನೆಗಳು ಡಿಸೆಂಬರ್ ಮಧ್ಯಭಾಗದವರೆಗೆ ಚಿಲಿ ದೇಶಾದ್ಯಂತ ಪಿಂಚಣಿ, ಆರೋಗ್ಯ ಮತ್ತು ಶಿಕ್ಷಣ ವ್ಯವಸ್ಥೆಗಳಲ್ಲಿ ಸುಧಾರಣೆಗಳನ್ನು ತರಲು ಒತ್ತಾಯಿಸುತ್ತಿದ್ದವು. ಅಂದು ನಡೆದಿದ್ದ ಗಲಭೆ ಮತ್ತು ಲೂಟಿಯಿಂದಾಗಿ ದೇಶದ ವ್ಯವಹಾರಗಳು ಮತ್ತು ಮೂಲಸೌಕರ್ಯಗಳಿಗೆ ಶತಕೋಟಿ ಡಾಲರ್ ನಷ್ಟ ಉಂಟಾಗಿತ್ತು.

ಸ್ಯಾಂಟಿಯಾಗೊದಲ್ಲಿ ನಡೆದ ಭಾನುವಾರದ ರ್‍ಯಾಲಿಯಲ್ಲಿ ಸಂಜೆ 6 ರ ಹೊತ್ತಿಗೆ ಸುಮಾರು 25 ಸಾವಿರ ಜನರು ಸೇರಿದ್ದರು ಎಂದು ಪೊಲೀಸರು ಅಂದಾಜಿಸಿದ್ದಾರೆ. ಇದು 2019 ರ ಪ್ರತಿಭಟನೆಗಿಂತ ಚಿಕ್ಕ ಪ್ರತಿಭಟನೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ.

ಇದನ್ನೂ ಓದಿ: ನ್ಯೂಜಿಲೆಂಡ್ ಚುನಾವಣೆ: ಪ್ರಧಾನಿ ಜಸಿಂಡಾ ಅರ್ಡೆರ್ನ್‌ರ ಲೇಬರ್ ಪಕ್ಷಕ್ಕೆ ಭರ್ಜರಿ ಜಯ!

ಕಳೆದ ಕೆಲವು ದಿನಗಳಿಂದ ಸಣ್ಣಪುಟ್ಟ ಪ್ರತಿಭಟನೆಗಳು ಸೇರಿದಂತೆ ಹಲವು ಹಿಂಸಾಚಾರಗಳು ಚಿಲಿಯಲ್ಲಿ ಪ್ರಾರಂಭವಾಗಿದೆ. 60 ಲಕ್ಷ ಜನಸಂಖ್ಯೆಯಿರುವ ರಾಜಧಾನಿಯು ಕೊರೊನಾದಿಂದ ತಿಂಗಳುಗಳ ಕಾಲ ಲಾಕ್‌ಡೌನ್ ಆಗಿತ್ತು. ಭಾನುವಾರದ ಪ್ರತಿಭಟನೆಯಲ್ಲಿ ಹೆಚ್ಚಿನ ಪ್ರತಿಭಟನಾಕಾರರು ಮುಖವಾಡಗಳನ್ನು ಧರಿಸಿದ್ದರು ಎಂದು ಟೆಲಿಗ್ರಾಫ್ ಬರೆದಿದೆ.

ಇದನ್ನೂ ಓದಿ: ಪೋಲೆಂಡ್: 2ನೇ ಮಹಾಯುದ್ಧದ ಅತಿದೊಡ್ಡ ಬಾಂಬ್ ಸ್ಫೋಟ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...