Homeಅಂತರಾಷ್ಟ್ರೀಯಬಲಪಂಥೀಯ ಪ್ರತಿಸ್ಪರ್ಧಿಯನ್ನು ಸೋಲಿಸಿ ‘ಚಿಲಿ’ ಅಧ್ಯಕ್ಷನಾಗಲಿರುವ ಎಡಪಂಥೀಯ ವಿದ್ಯಾರ್ಥಿ ನಾಯಕ!

ಬಲಪಂಥೀಯ ಪ್ರತಿಸ್ಪರ್ಧಿಯನ್ನು ಸೋಲಿಸಿ ‘ಚಿಲಿ’ ಅಧ್ಯಕ್ಷನಾಗಲಿರುವ ಎಡಪಂಥೀಯ ವಿದ್ಯಾರ್ಥಿ ನಾಯಕ!

35 ವರ್ಷದ ಗೇಬ್ರಿಯಲ್‌‌ ಬೋರಿಕ್‌ ಅವರು ದೇಶದ ಇದುವರೆಗಿನ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ

- Advertisement -
- Advertisement -

ಎಡಪಂಥೀಯ ಮಾಜಿ ವಿದ್ಯಾರ್ಥಿ ನಾಯಕ ಗೇಬ್ರಿಯಲ್ ಬೋರಿಕ್ ಅವರು ಚಿಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ವಿಜಯವನ್ನು ಸಾಧಿಸಿದ್ದು, ದೇಶದ ಇದುವರೆಗಿನ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ. ಅವರ ವಿರುದ್ದ ಬಲಪಂಥೀಯ ಅಭ್ಯರ್ಥಿ ಜೋಸ್ ಆಂಟೋನಿಯೊ ಕಾಸ್ಟ್ ಸ್ಪರ್ಧಿಸಿದ್ದರು.

ಸುಮಾರು 97% ಮತ ಎಣಿಕೆ ನಡೆದಿದ್ದು, ಗೇಬ್ರಿಯಲ್‌‌‌‌ ಬೋರಿಕ್‌ 55.8% ರಷ್ಟು ಮತಗಳನ್ನು ಪಡೆದು, ತಮ್ಮ ಎದುರಾಳಿಗಿಮತ 12% ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರ ಎದುರಾಳಿ ಜೋಸ್‌ ಆಂಟೋನಿಯೊ ತಮ್ಮ ಸೋಲನ್ನು ಒಪ್ಪಿಕೊಂಡು ಗೇಬ್ರಿಯಲ್‌‌ ಬೋರಿಕ್ ಅವರನ್ನು ಅಭಿನಂಧಿಸಿದ್ದಾರೆ.

ಇದನ್ನೂ ಓದಿ:ಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

“ನಾವು ನಮ್ಮ ಹಕ್ಕುಗಳನ್ನು ಗ್ರಾಹಕ ಸರಕುಗಳು ಅಥವಾ ವ್ಯಾಪಾರದಂತೆ ಪರಿಗಣಿಸಬಾರದು, ಅದನ್ನು ಹಕ್ಕುಗಳಾಗಿಯೆ ಗೌರವಿಸಬೇಕು ಎಂದು ಬೇಡಿಕೆಯಿಡುತ್ತಾ ಸಾರ್ವಜನಿಕ ಜೀವನದಲ್ಲಿ ಹೊರಹೊಮ್ಮಿದ ತಲೆಮಾರಾಗಿದ್ದೇವೆ. ಚಿಲಿಯ ಅಸಮಾನತೆಗೆ ಬಡವರು ಬೆಲೆತೆರುವುದನ್ನು ಇನ್ನು ಮುಂದೆನಾವು ಅನುಮತಿಸುವುದಿಲ್ಲ” ಎಂದು ಗೇಬ್ರಿಯಲ್‌ ಬೋರಿಕ್‌ ಸ್ಯಾಂಟಿಯಾಗೊ ಬೌಲೆವಾರ್ಡ್‌ನಲ್ಲಿ ತುಂಬಿದ ಅಪಾರ ಜನಸಮೂಹದ ಮುಂದೆ ಹೇಳಿದ್ದಾರೆ.

ಗೇಬ್ರಿಯಲ್‌ ಬೋರಿಕ್

ಆಗಸ್ಟೋ ಪಿನೋಚೆಟ್ ಸರ್ವಾಧಿಕಾರದ ಅವಧಿಯಲ್ಲಿ ಹೇರಲಾದ ಮುಕ್ತ ಮಾರುಕಟ್ಟೆ ಆರ್ಥಿಕ ಮಾದರಿಯನ್ನು ಉಲ್ಲೇಖಿಸಿದ ಅವರು, ಬಡತನ ಮತ್ತು ಅಸಮಾನತೆಯ ಮೇಲೆ ದಾಳಿ ಮಾಡಿದ್ದಾರೆ. ಯುವ ನೇತೃತ್ವದ ಸರ್ಕಾರವನ್ನು ರಚಿಸುವುದಾಗಿ ಗೇಬ್ರಿಯಲ್‌ ಬೋರಿಕ್ ಪ್ರತಿಜ್ಞೆ ಮಾಡಿದ್ದಾರೆ.

ಗೇಬ್ರಿಯಲ್‌‌ ಬೋರಿಕ್‌ ಅವರ ವಿಜಯವನ್ನು ಅವರ ಬೆಂಬಲಿಗರು ಭಾನುವಾರ ರಾತ್ರಿಯಿಂದಲೇ ಆಚರಿಸುತ್ತಿದ್ದಾರೆ. “ಇದೊಂದು ಐತಿಹಾಸಿಕ ದಿನ. ನಾವು ಫ್ಯಾಸಿಸಂ ಮತ್ತು ಬಲಪಂಥೀಯರನ್ನು ಮಾತ್ರವಲ್ಲದೆ ಭಯವನ್ನೂ ಸೋಲಿಸಿದ್ದೇವೆ” ಎಂದು ಶಿಕ್ಷಕರಾಗಿರುವ ಬೋರಿಸ್ ಸೊಟೊ ಹೇಳಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ:ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಇದೀಗ ಚಿಲಿಯ ಅಧ್ಯಕ್ಷರಾಗಲಿರುವ ಗೇಬ್ರಿಯಲ್‌ ಬೋರಿಕ್, ವಿದ್ಯಾರ್ಥಿ ಚಳವಳಿಯ ನಾಯಕರಾಗಿದ್ದು, 2011 ರ ವಿದ್ಯಾರ್ಥಿ ಚಳುವಳಿಯಲ್ಲಿ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಕ್ಕಿಂಲೂ ಮೊದಲು ಅವರು ದೇಶದ ಸಂಸದರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ಯುವ ನಾಯಕರಾಗಿದ್ದಾರೆ.

ಗೇಬ್ರಿಯಲ್‌ ಬೋರಿಕ್

35 ವರ್ಷದ ಅವರು ಮಾರ್ಚ್ 11 ರಂದು ದೇಶದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಹೊರಹೊಮ್ಮಲಿದ್ದಾರೆ. ಅಧ್ಯಕ್ಷರಾಗಿ ಅವರ ಅವಧಿಯು 2026 ರವರೆಗೆ ಇರುತ್ತದೆ.

2019 ರಲ್ಲಿ ಚಿಲಿಯಲ್ಲಿ ನಡೆದ ಭಾರಿ ಪ್ರತಿಭಟನೆಯಿಂದಾಗಿ ಅಲ್ಲಿನ ಸಂವಿಧಾನವನ್ನು ಪುನಃ ಬರೆಯಲಾಗುತ್ತಿದೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...