Homeಅಂತರಾಷ್ಟ್ರೀಯಬಲಪಂಥೀಯ ಪ್ರತಿಸ್ಪರ್ಧಿಯನ್ನು ಸೋಲಿಸಿ ‘ಚಿಲಿ’ ಅಧ್ಯಕ್ಷನಾಗಲಿರುವ ಎಡಪಂಥೀಯ ವಿದ್ಯಾರ್ಥಿ ನಾಯಕ!

ಬಲಪಂಥೀಯ ಪ್ರತಿಸ್ಪರ್ಧಿಯನ್ನು ಸೋಲಿಸಿ ‘ಚಿಲಿ’ ಅಧ್ಯಕ್ಷನಾಗಲಿರುವ ಎಡಪಂಥೀಯ ವಿದ್ಯಾರ್ಥಿ ನಾಯಕ!

35 ವರ್ಷದ ಗೇಬ್ರಿಯಲ್‌‌ ಬೋರಿಕ್‌ ಅವರು ದೇಶದ ಇದುವರೆಗಿನ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ

- Advertisement -
- Advertisement -

ಎಡಪಂಥೀಯ ಮಾಜಿ ವಿದ್ಯಾರ್ಥಿ ನಾಯಕ ಗೇಬ್ರಿಯಲ್ ಬೋರಿಕ್ ಅವರು ಚಿಲಿ ಅಧ್ಯಕ್ಷೀಯ ಚುನಾವಣೆಯಲ್ಲಿ ಭಾರಿ ವಿಜಯವನ್ನು ಸಾಧಿಸಿದ್ದು, ದೇಶದ ಇದುವರೆಗಿನ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಲಿದ್ದಾರೆ. ಅವರ ವಿರುದ್ದ ಬಲಪಂಥೀಯ ಅಭ್ಯರ್ಥಿ ಜೋಸ್ ಆಂಟೋನಿಯೊ ಕಾಸ್ಟ್ ಸ್ಪರ್ಧಿಸಿದ್ದರು.

ಸುಮಾರು 97% ಮತ ಎಣಿಕೆ ನಡೆದಿದ್ದು, ಗೇಬ್ರಿಯಲ್‌‌‌‌ ಬೋರಿಕ್‌ 55.8% ರಷ್ಟು ಮತಗಳನ್ನು ಪಡೆದು, ತಮ್ಮ ಎದುರಾಳಿಗಿಮತ 12% ಮತಗಳ ಮುನ್ನಡೆ ಸಾಧಿಸಿದ್ದಾರೆ. ಅವರ ಎದುರಾಳಿ ಜೋಸ್‌ ಆಂಟೋನಿಯೊ ತಮ್ಮ ಸೋಲನ್ನು ಒಪ್ಪಿಕೊಂಡು ಗೇಬ್ರಿಯಲ್‌‌ ಬೋರಿಕ್ ಅವರನ್ನು ಅಭಿನಂಧಿಸಿದ್ದಾರೆ.

ಇದನ್ನೂ ಓದಿ:ಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

“ನಾವು ನಮ್ಮ ಹಕ್ಕುಗಳನ್ನು ಗ್ರಾಹಕ ಸರಕುಗಳು ಅಥವಾ ವ್ಯಾಪಾರದಂತೆ ಪರಿಗಣಿಸಬಾರದು, ಅದನ್ನು ಹಕ್ಕುಗಳಾಗಿಯೆ ಗೌರವಿಸಬೇಕು ಎಂದು ಬೇಡಿಕೆಯಿಡುತ್ತಾ ಸಾರ್ವಜನಿಕ ಜೀವನದಲ್ಲಿ ಹೊರಹೊಮ್ಮಿದ ತಲೆಮಾರಾಗಿದ್ದೇವೆ. ಚಿಲಿಯ ಅಸಮಾನತೆಗೆ ಬಡವರು ಬೆಲೆತೆರುವುದನ್ನು ಇನ್ನು ಮುಂದೆನಾವು ಅನುಮತಿಸುವುದಿಲ್ಲ” ಎಂದು ಗೇಬ್ರಿಯಲ್‌ ಬೋರಿಕ್‌ ಸ್ಯಾಂಟಿಯಾಗೊ ಬೌಲೆವಾರ್ಡ್‌ನಲ್ಲಿ ತುಂಬಿದ ಅಪಾರ ಜನಸಮೂಹದ ಮುಂದೆ ಹೇಳಿದ್ದಾರೆ.

ಗೇಬ್ರಿಯಲ್‌ ಬೋರಿಕ್

ಆಗಸ್ಟೋ ಪಿನೋಚೆಟ್ ಸರ್ವಾಧಿಕಾರದ ಅವಧಿಯಲ್ಲಿ ಹೇರಲಾದ ಮುಕ್ತ ಮಾರುಕಟ್ಟೆ ಆರ್ಥಿಕ ಮಾದರಿಯನ್ನು ಉಲ್ಲೇಖಿಸಿದ ಅವರು, ಬಡತನ ಮತ್ತು ಅಸಮಾನತೆಯ ಮೇಲೆ ದಾಳಿ ಮಾಡಿದ್ದಾರೆ. ಯುವ ನೇತೃತ್ವದ ಸರ್ಕಾರವನ್ನು ರಚಿಸುವುದಾಗಿ ಗೇಬ್ರಿಯಲ್‌ ಬೋರಿಕ್ ಪ್ರತಿಜ್ಞೆ ಮಾಡಿದ್ದಾರೆ.

ಗೇಬ್ರಿಯಲ್‌‌ ಬೋರಿಕ್‌ ಅವರ ವಿಜಯವನ್ನು ಅವರ ಬೆಂಬಲಿಗರು ಭಾನುವಾರ ರಾತ್ರಿಯಿಂದಲೇ ಆಚರಿಸುತ್ತಿದ್ದಾರೆ. “ಇದೊಂದು ಐತಿಹಾಸಿಕ ದಿನ. ನಾವು ಫ್ಯಾಸಿಸಂ ಮತ್ತು ಬಲಪಂಥೀಯರನ್ನು ಮಾತ್ರವಲ್ಲದೆ ಭಯವನ್ನೂ ಸೋಲಿಸಿದ್ದೇವೆ” ಎಂದು ಶಿಕ್ಷಕರಾಗಿರುವ ಬೋರಿಸ್ ಸೊಟೊ ಹೇಳಿದ್ದಾರೆ ಎಂದು ಗಾರ್ಡಿಯನ್ ವರದಿ ಮಾಡಿದೆ.

ಇದನ್ನೂ ಓದಿ:ಚಿಲಿ: ಭುಗಿಲೆದ್ದ ಪ್ರತಿಭಟನೆ; ಪೊಲೀಸ್ ಪ್ರಧಾನ ಕಚೇರಿ ಸೇರಿದಂತೆ 2 ಚರ್ಚುಗಳಿಗೆ ಬೆಂಕಿ!

ಇದೀಗ ಚಿಲಿಯ ಅಧ್ಯಕ್ಷರಾಗಲಿರುವ ಗೇಬ್ರಿಯಲ್‌ ಬೋರಿಕ್, ವಿದ್ಯಾರ್ಥಿ ಚಳವಳಿಯ ನಾಯಕರಾಗಿದ್ದು, 2011 ರ ವಿದ್ಯಾರ್ಥಿ ಚಳುವಳಿಯಲ್ಲಿ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿದ್ದರು. ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವುದಕ್ಕಿಂಲೂ ಮೊದಲು ಅವರು ದೇಶದ ಸಂಸದರಾಗಿ ಎರಡು ಅವಧಿಗೆ ಸೇವೆ ಸಲ್ಲಿಸಿದ್ದ ಯುವ ನಾಯಕರಾಗಿದ್ದಾರೆ.

ಗೇಬ್ರಿಯಲ್‌ ಬೋರಿಕ್

35 ವರ್ಷದ ಅವರು ಮಾರ್ಚ್ 11 ರಂದು ದೇಶದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು ಚಿಲಿಯ ಅತ್ಯಂತ ಕಿರಿಯ ಅಧ್ಯಕ್ಷರಾಗಿ ಹೊರಹೊಮ್ಮಲಿದ್ದಾರೆ. ಅಧ್ಯಕ್ಷರಾಗಿ ಅವರ ಅವಧಿಯು 2026 ರವರೆಗೆ ಇರುತ್ತದೆ.

2019 ರಲ್ಲಿ ಚಿಲಿಯಲ್ಲಿ ನಡೆದ ಭಾರಿ ಪ್ರತಿಭಟನೆಯಿಂದಾಗಿ ಅಲ್ಲಿನ ಸಂವಿಧಾನವನ್ನು ಪುನಃ ಬರೆಯಲಾಗುತ್ತಿದೆ.

ಇದನ್ನೂ ಓದಿ:ಪಾವ್ಲೊ ಫ್ರೆಯರೆಗೆ ನೂರು; ಮಾನವೀಕರಣ ಮತ್ತು ಪ್ರಜಾತಾಂತ್ರಿಕ ಶಿಕ್ಷಣಕ್ಕೆ ಮರುಚಿಂತನೆ ಅಗತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...