Homeಮುಖಪುಟಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!

- Advertisement -
- Advertisement -

11 ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ನಿಂದ ಟ್ರೋಲ್‌ಗೊಳಗಾಗಿದ್ದ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್, ಇಂದು ಸೋಲಿನ ಸನಿಹದಲ್ಲಿರುವ ಟ್ರಂಪ್‌ಗೆ ಅವರು ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ, ಭರ್ಜರಿ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು.

11 ತಿಂಗಳಿನಿಂದ ತಾಳ್ಮೆಯಿಂದ ಕಾಯ್ದಿದ್ದ ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದಾರೆ. ಮತ ಎಣಿಕೆ ನಿಲ್ಲಿಸಿ ಎಂದು ಟ್ರಂಪ್ ಮಾಡಿದ್ದ ಟ್ವೀಟ್‌ಗೆ ಗ್ರೇಟಾ ಹೀಗೆ ಪ್ರತಿಕ್ರಿಯೆ ನೀಡಿದ್ದಾಳೆ.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಈ ಟ್ವೀಟ್‌ಗೆ 12 ಲಕ್ಕಕ್ಕೂ ಅಧಿಕ ಜನ ಲೈಕ್ ಮಾಡಿರುವುದಲ್ಲದೇ ಲಕ್ಷಕ್ಕೂ ಅಧಿಕ ಮಂದಿ ಅದನ್ನು ರೀಟ್ವೀಟ್ ಮಾಡಿದ್ದಾರೆ. ಆ ಮೂಲಕ ಗ್ರೇಟಾ ಹೇಳಿಕೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

2019ರ ಡಿಸೆಂಬರ್‌ನಲ್ಲಿ ಗ್ರೇಟಾ ವಿರುದ್ಧ ಟ್ರಂಪ್ “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಮಾಡಿದ್ದರು. ಅದಕ್ಕೆ 2 ಲಕ್ಷ ಜನ ಲೈಕ್ ಒತ್ತಿದ್ದರು.

ಈಗ ಗ್ರೇಟಾ ತಿರುಗೇಟಿಗೆ ನೆಟ್ಟಿಗರು ಥ್ರಿಲ್ ಗೊಳಗಾಗಿದ್ದಾರೆ. ಒಂದೆಡೆ ಟ್ರಂಪ್ ಸೋಲುತ್ತಿದ್ದಂತೆ ಇನ್ನೊಂದೆಡೆ ಈ ಟ್ವೀಟ್ ಬಂದಿದ್ದು, ನೂರಾರು ಜನ ಗ್ರೇಟಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ? ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು ಎಂದು ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಗ್ರೇಟಾ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.


ಇದನ್ನೂ ಒದಿ: ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...