Homeಮುಖಪುಟಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!

- Advertisement -
- Advertisement -

11 ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ನಿಂದ ಟ್ರೋಲ್‌ಗೊಳಗಾಗಿದ್ದ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್, ಇಂದು ಸೋಲಿನ ಸನಿಹದಲ್ಲಿರುವ ಟ್ರಂಪ್‌ಗೆ ಅವರು ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ, ಭರ್ಜರಿ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು.

11 ತಿಂಗಳಿನಿಂದ ತಾಳ್ಮೆಯಿಂದ ಕಾಯ್ದಿದ್ದ ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದಾರೆ. ಮತ ಎಣಿಕೆ ನಿಲ್ಲಿಸಿ ಎಂದು ಟ್ರಂಪ್ ಮಾಡಿದ್ದ ಟ್ವೀಟ್‌ಗೆ ಗ್ರೇಟಾ ಹೀಗೆ ಪ್ರತಿಕ್ರಿಯೆ ನೀಡಿದ್ದಾಳೆ.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಈ ಟ್ವೀಟ್‌ಗೆ 12 ಲಕ್ಕಕ್ಕೂ ಅಧಿಕ ಜನ ಲೈಕ್ ಮಾಡಿರುವುದಲ್ಲದೇ ಲಕ್ಷಕ್ಕೂ ಅಧಿಕ ಮಂದಿ ಅದನ್ನು ರೀಟ್ವೀಟ್ ಮಾಡಿದ್ದಾರೆ. ಆ ಮೂಲಕ ಗ್ರೇಟಾ ಹೇಳಿಕೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

2019ರ ಡಿಸೆಂಬರ್‌ನಲ್ಲಿ ಗ್ರೇಟಾ ವಿರುದ್ಧ ಟ್ರಂಪ್ “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಮಾಡಿದ್ದರು. ಅದಕ್ಕೆ 2 ಲಕ್ಷ ಜನ ಲೈಕ್ ಒತ್ತಿದ್ದರು.

ಈಗ ಗ್ರೇಟಾ ತಿರುಗೇಟಿಗೆ ನೆಟ್ಟಿಗರು ಥ್ರಿಲ್ ಗೊಳಗಾಗಿದ್ದಾರೆ. ಒಂದೆಡೆ ಟ್ರಂಪ್ ಸೋಲುತ್ತಿದ್ದಂತೆ ಇನ್ನೊಂದೆಡೆ ಈ ಟ್ವೀಟ್ ಬಂದಿದ್ದು, ನೂರಾರು ಜನ ಗ್ರೇಟಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ? ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು ಎಂದು ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಗ್ರೇಟಾ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.


ಇದನ್ನೂ ಒದಿ: ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...