Homeಮುಖಪುಟಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!

- Advertisement -
- Advertisement -

11 ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ನಿಂದ ಟ್ರೋಲ್‌ಗೊಳಗಾಗಿದ್ದ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್, ಇಂದು ಸೋಲಿನ ಸನಿಹದಲ್ಲಿರುವ ಟ್ರಂಪ್‌ಗೆ ಅವರು ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ, ಭರ್ಜರಿ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು.

11 ತಿಂಗಳಿನಿಂದ ತಾಳ್ಮೆಯಿಂದ ಕಾಯ್ದಿದ್ದ ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದಾರೆ. ಮತ ಎಣಿಕೆ ನಿಲ್ಲಿಸಿ ಎಂದು ಟ್ರಂಪ್ ಮಾಡಿದ್ದ ಟ್ವೀಟ್‌ಗೆ ಗ್ರೇಟಾ ಹೀಗೆ ಪ್ರತಿಕ್ರಿಯೆ ನೀಡಿದ್ದಾಳೆ.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಈ ಟ್ವೀಟ್‌ಗೆ 12 ಲಕ್ಕಕ್ಕೂ ಅಧಿಕ ಜನ ಲೈಕ್ ಮಾಡಿರುವುದಲ್ಲದೇ ಲಕ್ಷಕ್ಕೂ ಅಧಿಕ ಮಂದಿ ಅದನ್ನು ರೀಟ್ವೀಟ್ ಮಾಡಿದ್ದಾರೆ. ಆ ಮೂಲಕ ಗ್ರೇಟಾ ಹೇಳಿಕೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

2019ರ ಡಿಸೆಂಬರ್‌ನಲ್ಲಿ ಗ್ರೇಟಾ ವಿರುದ್ಧ ಟ್ರಂಪ್ “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಮಾಡಿದ್ದರು. ಅದಕ್ಕೆ 2 ಲಕ್ಷ ಜನ ಲೈಕ್ ಒತ್ತಿದ್ದರು.

ಈಗ ಗ್ರೇಟಾ ತಿರುಗೇಟಿಗೆ ನೆಟ್ಟಿಗರು ಥ್ರಿಲ್ ಗೊಳಗಾಗಿದ್ದಾರೆ. ಒಂದೆಡೆ ಟ್ರಂಪ್ ಸೋಲುತ್ತಿದ್ದಂತೆ ಇನ್ನೊಂದೆಡೆ ಈ ಟ್ವೀಟ್ ಬಂದಿದ್ದು, ನೂರಾರು ಜನ ಗ್ರೇಟಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ? ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು ಎಂದು ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಗ್ರೇಟಾ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.


ಇದನ್ನೂ ಒದಿ: ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...