Homeಮುಖಪುಟಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!

- Advertisement -
- Advertisement -

11 ತಿಂಗಳ ಹಿಂದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ನಿಂದ ಟ್ರೋಲ್‌ಗೊಳಗಾಗಿದ್ದ 17 ವರ್ಷದ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್ಬರ್ಗ್, ಇಂದು ಸೋಲಿನ ಸನಿಹದಲ್ಲಿರುವ ಟ್ರಂಪ್‌ಗೆ ಅವರು ಬಳಸಿದ ಪದಗಳನ್ನೇ ಬಳಸಿ ಟ್ವೀಟ್ ಮಾಡುವ ಮೂಲಕ, ಭರ್ಜರಿ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡಿದ್ದಾರೆ.

2019ರಲ್ಲಿ ಟೈಮ್ ಮ್ಯಾಗಜಿನ್‌ನ ವರ್ಷದ ವ್ಯಕ್ತಿಯಾಗಿ ಗ್ರೇಟಾ ಥನ್ಬರ್ಗ್ ಆಯ್ಕೆಯಾಗಿದ್ದರು. ಆಗ ಬಹಳಷ್ಟು ಜನ ಅವರಿಗೆ ಶುಭಾಶಯ ತಿಳಿಸಿದ್ದರು. ಆದರೆ ಟ್ರಂಪ್ ಮಾತ್ರ ಚಿಕ್ಕ ಹುಡುಗಿಯ ವಿರುದ್ಧ ‘ನಿನ್ನ ಅಹಂಕಾರ ಬಿಡು’ ಎಂದು ಟ್ವೀಟ್ ಮಾಡಿ ಅವಮಾನ ಮಾಡಿದ್ದರು.

11 ತಿಂಗಳಿನಿಂದ ತಾಳ್ಮೆಯಿಂದ ಕಾಯ್ದಿದ್ದ ಗ್ರೇಟಾ ಥನ್ಬರ್ಗ್ ಅಂದು ಟ್ರಂಪ್ ಬಳಸಿದ್ದ ಪದಗಳನ್ನೇ ಬಳಸಿ ಟ್ರೋಲ್ ಮಾಡಿದ್ದಾರೆ. ಮತ ಎಣಿಕೆ ನಿಲ್ಲಿಸಿ ಎಂದು ಟ್ರಂಪ್ ಮಾಡಿದ್ದ ಟ್ವೀಟ್‌ಗೆ ಗ್ರೇಟಾ ಹೀಗೆ ಪ್ರತಿಕ್ರಿಯೆ ನೀಡಿದ್ದಾಳೆ.

“ಎಷ್ಟೊಂದು ಹಾಸ್ಯಾಸ್ಪದ. ಡೊನಾಲ್ಡ್ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಡೊನಾಲ್ಡ್, ಚಿಲ್!” ಎಂದು ಗ್ರೇಟಾ ಟ್ವೀಟ್ ಮಾಡಿದ್ದಾಳೆ.

ಈ ಟ್ವೀಟ್‌ಗೆ 12 ಲಕ್ಕಕ್ಕೂ ಅಧಿಕ ಜನ ಲೈಕ್ ಮಾಡಿರುವುದಲ್ಲದೇ ಲಕ್ಷಕ್ಕೂ ಅಧಿಕ ಮಂದಿ ಅದನ್ನು ರೀಟ್ವೀಟ್ ಮಾಡಿದ್ದಾರೆ. ಆ ಮೂಲಕ ಗ್ರೇಟಾ ಹೇಳಿಕೆಗೆ ಭಾರೀ ಬೆಂಬಲ ವ್ಯಕ್ತವಾಗಿದೆ.

2019ರ ಡಿಸೆಂಬರ್‌ನಲ್ಲಿ ಗ್ರೇಟಾ ವಿರುದ್ಧ ಟ್ರಂಪ್ “ಎಷ್ಟೊಂದು ಹಾಸ್ಯಾಸ್ಪದ. ಗ್ರೇಟಾ ತನ್ನ ಕೋಪ ನಿರ್ವಹಣಾ ಸಮಸ್ಯೆಯ ಬಗ್ಗೆ ಕೆಲಸ ಮಾಡಬೇಕು, ನಂತರ ಸ್ನೇಹಿತನೊಂದಿಗೆ ಹಳೆಯ ಹಳೆಯ ಶೈಲಿಯ ಸಿನಿಮಾಗೆ ಹೋಗಬೇಕು! ಚಿಲ್, ಗ್ರೇಟಾ, ಚಿಲ್!” ಎಂದು ಟ್ರಂಪ್ ಮಾಡಿದ್ದರು. ಅದಕ್ಕೆ 2 ಲಕ್ಷ ಜನ ಲೈಕ್ ಒತ್ತಿದ್ದರು.

ಈಗ ಗ್ರೇಟಾ ತಿರುಗೇಟಿಗೆ ನೆಟ್ಟಿಗರು ಥ್ರಿಲ್ ಗೊಳಗಾಗಿದ್ದಾರೆ. ಒಂದೆಡೆ ಟ್ರಂಪ್ ಸೋಲುತ್ತಿದ್ದಂತೆ ಇನ್ನೊಂದೆಡೆ ಈ ಟ್ವೀಟ್ ಬಂದಿದ್ದು, ನೂರಾರು ಜನ ಗ್ರೇಟಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದು ತಪ್ಪು. ನಾನಿಲ್ಲಿ ಇರಬಾರದಾಗಿತ್ತು. ನಾನೀಗ ನನ್ನ ಶಾಲೆಯಲ್ಲಿ, ಸಾಗರದಾಚೆ ಇರಬೇಕಿತ್ತು. ಆದರೂ ನೀವು ನಮ್ಮ ಕಡೆ, ಯುವಜನರ ಕಡೆ ಬರುತ್ತೀರ, ನಿಮ್ಮ ಭರವಸೆ, ನಿರೀಕ್ಷೆಗಳನ್ನು ಹುಡುಕಿಕೊಂಡು. ನಿಮಗೆಷ್ಟು ಧೈರ್ಯ? ನೀವು ನಮ್ಮನ್ನು ವಿಫಲಗೊಳಿಸುತ್ತಿದ್ದೀರಿ. ಆದರೆ ಯುವಜನರು ನಿಮ್ಮ ದ್ರೋಹವನ್ನು ಅರಿಯಲು ಪ್ರಾರಂಭಿಸಿದ್ದಾರೆ. ಮುಂದಿನ ಪೀಳಿಗೆಗಳ ಎಲ್ಲಾ ಕಣ್ಣುಗಳು ನಿಮ್ಮ ಮೇಲಿವೆ. ಒಂದು ವೇಳೆ ನೀವು ನಮ್ಮನ್ನು ವಿಫಲಗೊಳಿಸುವುದನ್ನು ಆಯ್ಕೆ ಮಾಡಿಕೊಂಡರೆ, ನಾವು ನಿಮ್ಮನ್ನು ಎಂದೆಂದಿಗೂ ಕ್ಷಮಿಸಲಾರೆವು ಎಂದು ಈ ಹಿಂದೆ ವಿಶ್ವಸಂಸ್ಥೆಯಲ್ಲಿ ಗ್ರೇಟಾ ಮಾಡಿದ ಭಾಷಣಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು.


ಇದನ್ನೂ ಒದಿ: ವಿಶ್ವಸಂಸ್ಥೆಯಲ್ಲಿ ಹವಾಮಾನ ವೈಪರೀತ್ಯದ ಕುರಿತು 16ರ ಬಾಲೆ ಗ್ರೇಟಾ ತನ್ಬೆರ್ಗ್‌ ಮಾಡಿದ ಭಾಷಣ..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...