Homeಕರ್ನಾಟಕಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕದಿಯಲು ಚಿಲುಮೆ ಸಂಸ್ಥೆಯು ಬರೋಬ್ಬರಿ 500 ಸಿಬ್ಬಂದಿಯನ್ನು ಅರೆಕಾಲಿಕ ಅವಧಿಗೆ ನೇಮಿಸಿತ್ತು ಎಂಬ ಆತಂಕಕಾರಿ ಸಂಗತಿಯು ಈಗ ಹೊರಬಿದ್ದಿದೆ.

ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಮತ್ತು ಆತನ ಸಹೋದರ ಕೆಂಪೇಗೌಡ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತದಾರರ ಮಾಹಿತಿ ಕಲೆಹಾಕುತ್ತಿದ್ದ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿಯೊಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿದ್ದಾರೆ.

ಚಿಲುಮೆ ಸಂಸ್ಥೆಯು ನೇಮಿಸಿಕೊಂಡ 500 ಸಿಬ್ಬಂದಿಗೆ ಡಿಜಿಟಲ್ ಸಮೀಕ್ಷಾ ಆ್ಯಪ್‌ ಬಗ್ಗೆ ತರಬೇತಿ ನೀಡಲಾಗಿತ್ತು. ಜೊತೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದು ತನಿಖೆಯಿಂದ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ, ಮತದಾರರ ಮಾಹಿತಿ ಕಲೆಹಾಕಲು ಸಿಬ್ಬಂದಿ ಬೇಕಾಗಿದ್ದಾರೆ ಎಂದು ಚಿಲುಮೆ ಸಂಸ್ಥೆ ಜಾಹೀರಾತು ನೀಡಿ, ಸಾಕಷ್ಟು ಯುವಜನರನ್ನು ನೇಮಿಸಿಕೊಂಡಿತ್ತು. ಅವರಿಗೆ ದಿನದ ಲೆಕ್ಕದಲ್ಲಿ ಸಂಬಳ ಕೂಡ ನಿಗದಿ ಮಾಡಲಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ನೇಮಿಸಿರುವ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಎಂಬುದಾಗಿ ಹೇಳಿಕೊಂಡ ಚಿಲುಮೆ ಸಿಬ್ಬಂದಿ ಮನೆಗಳಿಗೆ ತೆರಳಿ, ಮತದಾರರ ಹೆಸರು, ವಿಳಾಸ, ಜಾತಿ, ಉಪಜಾತಿ, ಕುಟುಂಬಸ್ಥರ ಮಾಹಿತಿ, ಮೊಬೈಲ್‌ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ… ಹೀಗೆ ಹಲವು ಮಾಹಿತಿ ಪಡೆದು, ಅದನ್ನೇ ಆ್ಯಪ್‌ನಲ್ಲಿ ದಾಖಲಿಸಿದ್ದರು.

ಈ ಕೃತ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಸಹಕರಿಸಿದ್ದರು ಎಂಬುದು ಬಯಲಾಗಿದ್ದು, ಆ ಅಧಿಕಾರಿಗಳನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಒಂದೊಂದು ಕಚೇರಿ 500 ಸಿಬ್ಬಂದಿಯ ತಂಡ ಕಟ್ಟಿಕೊಂಡಿದ್ದ ಚಿಲುಮೆ ಸಂಸ್ಥೆ ಮಹದೇವಪುರ, ಚಿಕ್ಕಪೇಟೆ ಹಾಗೂ ಇತರೆ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದೆ. ಆಯಾ ಕ್ಷೇತ್ರದಲ್ಲಿ ಬಾಡಿಗೆಗೆ ಕಟ್ಟಡ ಪಡೆದು, ಸಿಬ್ಬಂದಿಗೆ ಕೆಲಸ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ಕಚೇರಿಗಳನ್ನು ಪೊಲೀಸರು ಪತ್ತೆ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟಿ ಕೋಟಿ ಸಂಪಾದನೆ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕವೇ ಕೋಟಿ ಕೋಟಿ ಸಂಪಾದನೆ ಮಾಡಿದೆ ಎನ್ನಲಾಗುತ್ತಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ರಾಜಕಾರಣಿಗಳ ಜೊತೆ ಒಡನಾಟ ಹೊಂದಿದ್ದು, ಚುನಾವಣೆ ನಿರ್ವಹಣೆ ಹೆಸರಿನಲ್ಲಿ ಹಲವು ಸೇವೆಗಳನ್ನು ನೀಡುವುದರ ಜೊತೆಗೆ ಚುನಾವಣೆ ಕಾರ್ಯಕ್ರಮಗಳಿಗೆ ಜನರನ್ನು ಕಳುಹಿಸುವ ಕೆಲಸ ಕೂಡ ಮಾಡುತ್ತಿದ್ದರು. ಈ ಕೆಲಸಕ್ಕಾಗಿ ಸಂಬಂಧಪಟ್ಟ ರಾಜಕಾರಣಿಗಳಿಂದ ಲಕ್ಷ ಲಕ್ಷ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ಅಮಾನತು: ಹಗರಣ ಬೆಳಕಿಗೆ ಬಂದಂತೆ ಒಂದೊಂದೇ ಸಂಗತಿಗಳು ಹೊರಗೆ ಬರುತ್ತಿವೆ. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ರಂಗಪ್ಪ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ, ಕೇಂದ್ರ ಚುನಾವಣೆ ಆಯೋಗವು ತನಿಖೆಗೆ ನ.25ರ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿರಿ: ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ಕರ್ನಾಟಕ ಚುನಾವಣೆ ಆಯೋಗಕ್ಕೆ ಚಾಟಿ ಬೀಸಿದೆ. ಬಿಬಿಎಂಪಿ ಹೊರತುಪಡಿಸಿ ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು. ಅಲ್ಲದೇ ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಉಸ್ತುವಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...