Homeಕರ್ನಾಟಕಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕದಿಯಲು ಚಿಲುಮೆ ಸಂಸ್ಥೆಯು ಬರೋಬ್ಬರಿ 500 ಸಿಬ್ಬಂದಿಯನ್ನು ಅರೆಕಾಲಿಕ ಅವಧಿಗೆ ನೇಮಿಸಿತ್ತು ಎಂಬ ಆತಂಕಕಾರಿ ಸಂಗತಿಯು ಈಗ ಹೊರಬಿದ್ದಿದೆ.

ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಮತ್ತು ಆತನ ಸಹೋದರ ಕೆಂಪೇಗೌಡ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತದಾರರ ಮಾಹಿತಿ ಕಲೆಹಾಕುತ್ತಿದ್ದ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿಯೊಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿದ್ದಾರೆ.

ಚಿಲುಮೆ ಸಂಸ್ಥೆಯು ನೇಮಿಸಿಕೊಂಡ 500 ಸಿಬ್ಬಂದಿಗೆ ಡಿಜಿಟಲ್ ಸಮೀಕ್ಷಾ ಆ್ಯಪ್‌ ಬಗ್ಗೆ ತರಬೇತಿ ನೀಡಲಾಗಿತ್ತು. ಜೊತೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದು ತನಿಖೆಯಿಂದ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ, ಮತದಾರರ ಮಾಹಿತಿ ಕಲೆಹಾಕಲು ಸಿಬ್ಬಂದಿ ಬೇಕಾಗಿದ್ದಾರೆ ಎಂದು ಚಿಲುಮೆ ಸಂಸ್ಥೆ ಜಾಹೀರಾತು ನೀಡಿ, ಸಾಕಷ್ಟು ಯುವಜನರನ್ನು ನೇಮಿಸಿಕೊಂಡಿತ್ತು. ಅವರಿಗೆ ದಿನದ ಲೆಕ್ಕದಲ್ಲಿ ಸಂಬಳ ಕೂಡ ನಿಗದಿ ಮಾಡಲಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ನೇಮಿಸಿರುವ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಎಂಬುದಾಗಿ ಹೇಳಿಕೊಂಡ ಚಿಲುಮೆ ಸಿಬ್ಬಂದಿ ಮನೆಗಳಿಗೆ ತೆರಳಿ, ಮತದಾರರ ಹೆಸರು, ವಿಳಾಸ, ಜಾತಿ, ಉಪಜಾತಿ, ಕುಟುಂಬಸ್ಥರ ಮಾಹಿತಿ, ಮೊಬೈಲ್‌ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ… ಹೀಗೆ ಹಲವು ಮಾಹಿತಿ ಪಡೆದು, ಅದನ್ನೇ ಆ್ಯಪ್‌ನಲ್ಲಿ ದಾಖಲಿಸಿದ್ದರು.

ಈ ಕೃತ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಸಹಕರಿಸಿದ್ದರು ಎಂಬುದು ಬಯಲಾಗಿದ್ದು, ಆ ಅಧಿಕಾರಿಗಳನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಒಂದೊಂದು ಕಚೇರಿ 500 ಸಿಬ್ಬಂದಿಯ ತಂಡ ಕಟ್ಟಿಕೊಂಡಿದ್ದ ಚಿಲುಮೆ ಸಂಸ್ಥೆ ಮಹದೇವಪುರ, ಚಿಕ್ಕಪೇಟೆ ಹಾಗೂ ಇತರೆ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದೆ. ಆಯಾ ಕ್ಷೇತ್ರದಲ್ಲಿ ಬಾಡಿಗೆಗೆ ಕಟ್ಟಡ ಪಡೆದು, ಸಿಬ್ಬಂದಿಗೆ ಕೆಲಸ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ಕಚೇರಿಗಳನ್ನು ಪೊಲೀಸರು ಪತ್ತೆ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟಿ ಕೋಟಿ ಸಂಪಾದನೆ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕವೇ ಕೋಟಿ ಕೋಟಿ ಸಂಪಾದನೆ ಮಾಡಿದೆ ಎನ್ನಲಾಗುತ್ತಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ರಾಜಕಾರಣಿಗಳ ಜೊತೆ ಒಡನಾಟ ಹೊಂದಿದ್ದು, ಚುನಾವಣೆ ನಿರ್ವಹಣೆ ಹೆಸರಿನಲ್ಲಿ ಹಲವು ಸೇವೆಗಳನ್ನು ನೀಡುವುದರ ಜೊತೆಗೆ ಚುನಾವಣೆ ಕಾರ್ಯಕ್ರಮಗಳಿಗೆ ಜನರನ್ನು ಕಳುಹಿಸುವ ಕೆಲಸ ಕೂಡ ಮಾಡುತ್ತಿದ್ದರು. ಈ ಕೆಲಸಕ್ಕಾಗಿ ಸಂಬಂಧಪಟ್ಟ ರಾಜಕಾರಣಿಗಳಿಂದ ಲಕ್ಷ ಲಕ್ಷ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ಅಮಾನತು: ಹಗರಣ ಬೆಳಕಿಗೆ ಬಂದಂತೆ ಒಂದೊಂದೇ ಸಂಗತಿಗಳು ಹೊರಗೆ ಬರುತ್ತಿವೆ. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ರಂಗಪ್ಪ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ, ಕೇಂದ್ರ ಚುನಾವಣೆ ಆಯೋಗವು ತನಿಖೆಗೆ ನ.25ರ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿರಿ: ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ಕರ್ನಾಟಕ ಚುನಾವಣೆ ಆಯೋಗಕ್ಕೆ ಚಾಟಿ ಬೀಸಿದೆ. ಬಿಬಿಎಂಪಿ ಹೊರತುಪಡಿಸಿ ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು. ಅಲ್ಲದೇ ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಉಸ್ತುವಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...