Homeಕರ್ನಾಟಕಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕದಿಯಲು ಚಿಲುಮೆ ಸಂಸ್ಥೆಯು ಬರೋಬ್ಬರಿ 500 ಸಿಬ್ಬಂದಿಯನ್ನು ಅರೆಕಾಲಿಕ ಅವಧಿಗೆ ನೇಮಿಸಿತ್ತು ಎಂಬ ಆತಂಕಕಾರಿ ಸಂಗತಿಯು ಈಗ ಹೊರಬಿದ್ದಿದೆ.

ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಮತ್ತು ಆತನ ಸಹೋದರ ಕೆಂಪೇಗೌಡ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತದಾರರ ಮಾಹಿತಿ ಕಲೆಹಾಕುತ್ತಿದ್ದ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿಯೊಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿದ್ದಾರೆ.

ಚಿಲುಮೆ ಸಂಸ್ಥೆಯು ನೇಮಿಸಿಕೊಂಡ 500 ಸಿಬ್ಬಂದಿಗೆ ಡಿಜಿಟಲ್ ಸಮೀಕ್ಷಾ ಆ್ಯಪ್‌ ಬಗ್ಗೆ ತರಬೇತಿ ನೀಡಲಾಗಿತ್ತು. ಜೊತೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದು ತನಿಖೆಯಿಂದ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ, ಮತದಾರರ ಮಾಹಿತಿ ಕಲೆಹಾಕಲು ಸಿಬ್ಬಂದಿ ಬೇಕಾಗಿದ್ದಾರೆ ಎಂದು ಚಿಲುಮೆ ಸಂಸ್ಥೆ ಜಾಹೀರಾತು ನೀಡಿ, ಸಾಕಷ್ಟು ಯುವಜನರನ್ನು ನೇಮಿಸಿಕೊಂಡಿತ್ತು. ಅವರಿಗೆ ದಿನದ ಲೆಕ್ಕದಲ್ಲಿ ಸಂಬಳ ಕೂಡ ನಿಗದಿ ಮಾಡಲಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ನೇಮಿಸಿರುವ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಎಂಬುದಾಗಿ ಹೇಳಿಕೊಂಡ ಚಿಲುಮೆ ಸಿಬ್ಬಂದಿ ಮನೆಗಳಿಗೆ ತೆರಳಿ, ಮತದಾರರ ಹೆಸರು, ವಿಳಾಸ, ಜಾತಿ, ಉಪಜಾತಿ, ಕುಟುಂಬಸ್ಥರ ಮಾಹಿತಿ, ಮೊಬೈಲ್‌ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ… ಹೀಗೆ ಹಲವು ಮಾಹಿತಿ ಪಡೆದು, ಅದನ್ನೇ ಆ್ಯಪ್‌ನಲ್ಲಿ ದಾಖಲಿಸಿದ್ದರು.

ಈ ಕೃತ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಸಹಕರಿಸಿದ್ದರು ಎಂಬುದು ಬಯಲಾಗಿದ್ದು, ಆ ಅಧಿಕಾರಿಗಳನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಒಂದೊಂದು ಕಚೇರಿ 500 ಸಿಬ್ಬಂದಿಯ ತಂಡ ಕಟ್ಟಿಕೊಂಡಿದ್ದ ಚಿಲುಮೆ ಸಂಸ್ಥೆ ಮಹದೇವಪುರ, ಚಿಕ್ಕಪೇಟೆ ಹಾಗೂ ಇತರೆ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದೆ. ಆಯಾ ಕ್ಷೇತ್ರದಲ್ಲಿ ಬಾಡಿಗೆಗೆ ಕಟ್ಟಡ ಪಡೆದು, ಸಿಬ್ಬಂದಿಗೆ ಕೆಲಸ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ಕಚೇರಿಗಳನ್ನು ಪೊಲೀಸರು ಪತ್ತೆ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟಿ ಕೋಟಿ ಸಂಪಾದನೆ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕವೇ ಕೋಟಿ ಕೋಟಿ ಸಂಪಾದನೆ ಮಾಡಿದೆ ಎನ್ನಲಾಗುತ್ತಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ರಾಜಕಾರಣಿಗಳ ಜೊತೆ ಒಡನಾಟ ಹೊಂದಿದ್ದು, ಚುನಾವಣೆ ನಿರ್ವಹಣೆ ಹೆಸರಿನಲ್ಲಿ ಹಲವು ಸೇವೆಗಳನ್ನು ನೀಡುವುದರ ಜೊತೆಗೆ ಚುನಾವಣೆ ಕಾರ್ಯಕ್ರಮಗಳಿಗೆ ಜನರನ್ನು ಕಳುಹಿಸುವ ಕೆಲಸ ಕೂಡ ಮಾಡುತ್ತಿದ್ದರು. ಈ ಕೆಲಸಕ್ಕಾಗಿ ಸಂಬಂಧಪಟ್ಟ ರಾಜಕಾರಣಿಗಳಿಂದ ಲಕ್ಷ ಲಕ್ಷ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ಅಮಾನತು: ಹಗರಣ ಬೆಳಕಿಗೆ ಬಂದಂತೆ ಒಂದೊಂದೇ ಸಂಗತಿಗಳು ಹೊರಗೆ ಬರುತ್ತಿವೆ. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ರಂಗಪ್ಪ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ, ಕೇಂದ್ರ ಚುನಾವಣೆ ಆಯೋಗವು ತನಿಖೆಗೆ ನ.25ರ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿರಿ: ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ಕರ್ನಾಟಕ ಚುನಾವಣೆ ಆಯೋಗಕ್ಕೆ ಚಾಟಿ ಬೀಸಿದೆ. ಬಿಬಿಎಂಪಿ ಹೊರತುಪಡಿಸಿ ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು. ಅಲ್ಲದೇ ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಉಸ್ತುವಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...