Homeಕರ್ನಾಟಕಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

ಮತದಾರರ ಮಾಹಿತಿ ಕದಿಯಲು 500 ಸಿಬ್ಬಂದಿ ನೇಮಿಸಿದ್ದ ಚಿಲುಮೆ: ತನಿಖೆಯಲ್ಲಿ ಬಯಲು

- Advertisement -
- Advertisement -

ಬಿಬಿಎಂಪಿ ವ್ಯಾಪ್ತಿಯ ಮತದಾರರ ಮಾಹಿತಿ ಕದಿಯಲು ಚಿಲುಮೆ ಸಂಸ್ಥೆಯು ಬರೋಬ್ಬರಿ 500 ಸಿಬ್ಬಂದಿಯನ್ನು ಅರೆಕಾಲಿಕ ಅವಧಿಗೆ ನೇಮಿಸಿತ್ತು ಎಂಬ ಆತಂಕಕಾರಿ ಸಂಗತಿಯು ಈಗ ಹೊರಬಿದ್ದಿದೆ.

ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ಮತ್ತು ಆತನ ಸಹೋದರ ಕೆಂಪೇಗೌಡ ಅವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಮತದಾರರ ಮಾಹಿತಿ ಕಲೆಹಾಕುತ್ತಿದ್ದ ಸಿಬ್ಬಂದಿಯ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿಯೊಬ್ಬರಿಗೂ ನೋಟಿಸ್ ನೀಡಿ ವಿಚಾರಣೆಗೆ ಕರೆಯುತ್ತಿದ್ದಾರೆ.

ಚಿಲುಮೆ ಸಂಸ್ಥೆಯು ನೇಮಿಸಿಕೊಂಡ 500 ಸಿಬ್ಬಂದಿಗೆ ಡಿಜಿಟಲ್ ಸಮೀಕ್ಷಾ ಆ್ಯಪ್‌ ಬಗ್ಗೆ ತರಬೇತಿ ನೀಡಲಾಗಿತ್ತು. ಜೊತೆಗೆ ಮತದಾರರ ಮನೆ ಮನೆಗೆ ಭೇಟಿ ನೀಡಿ, ಮತದಾರರ ಮಾಹಿತಿ ಸಂಗ್ರಹಿಸಲಾಗಿತ್ತು ಎಂಬುದು ತನಿಖೆಯಿಂದ ಬಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಿಬಿಎಂಪಿ ವ್ಯಾಪ್ತಿಯಲ್ಲಿ ಮನೆ ಮನೆಗೆ ಹೋಗಿ, ಮತದಾರರ ಮಾಹಿತಿ ಕಲೆಹಾಕಲು ಸಿಬ್ಬಂದಿ ಬೇಕಾಗಿದ್ದಾರೆ ಎಂದು ಚಿಲುಮೆ ಸಂಸ್ಥೆ ಜಾಹೀರಾತು ನೀಡಿ, ಸಾಕಷ್ಟು ಯುವಜನರನ್ನು ನೇಮಿಸಿಕೊಂಡಿತ್ತು. ಅವರಿಗೆ ದಿನದ ಲೆಕ್ಕದಲ್ಲಿ ಸಂಬಳ ಕೂಡ ನಿಗದಿ ಮಾಡಲಾಗಿತ್ತು.

ಬಿಬಿಎಂಪಿ ಅಧಿಕಾರಿಗಳು ನೇಮಿಸಿರುವ ಮತಗಟ್ಟೆ ಅಧಿಕಾರಿ (ಬಿಎಲ್‌ಒ) ಎಂಬುದಾಗಿ ಹೇಳಿಕೊಂಡ ಚಿಲುಮೆ ಸಿಬ್ಬಂದಿ ಮನೆಗಳಿಗೆ ತೆರಳಿ, ಮತದಾರರ ಹೆಸರು, ವಿಳಾಸ, ಜಾತಿ, ಉಪಜಾತಿ, ಕುಟುಂಬಸ್ಥರ ಮಾಹಿತಿ, ಮೊಬೈಲ್‌ ಸಂಖ್ಯೆ, ಬೆಂಬಲಿಸುವ ಪಕ್ಷ, ನೆಚ್ಚಿನ ರಾಜಕೀಯ ನಾಯಕ… ಹೀಗೆ ಹಲವು ಮಾಹಿತಿ ಪಡೆದು, ಅದನ್ನೇ ಆ್ಯಪ್‌ನಲ್ಲಿ ದಾಖಲಿಸಿದ್ದರು.

ಈ ಕೃತ್ಯಕ್ಕೆ ಬಿಬಿಎಂಪಿ ಅಧಿಕಾರಿಗಳು ಸಹಕರಿಸಿದ್ದರು ಎಂಬುದು ಬಯಲಾಗಿದ್ದು, ಆ ಅಧಿಕಾರಿಗಳನ್ನು ಕೂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಪ್ರತಿ ಕ್ಷೇತ್ರದಲ್ಲೂ ಒಂದೊಂದು ಕಚೇರಿ 500 ಸಿಬ್ಬಂದಿಯ ತಂಡ ಕಟ್ಟಿಕೊಂಡಿದ್ದ ಚಿಲುಮೆ ಸಂಸ್ಥೆ ಮಹದೇವಪುರ, ಚಿಕ್ಕಪೇಟೆ ಹಾಗೂ ಇತರೆ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಿದೆ. ಆಯಾ ಕ್ಷೇತ್ರದಲ್ಲಿ ಬಾಡಿಗೆಗೆ ಕಟ್ಟಡ ಪಡೆದು, ಸಿಬ್ಬಂದಿಗೆ ಕೆಲಸ ಮಾಡಲು ವ್ಯವಸ್ಥೆ ಮಾಡಲಾಗಿತ್ತು. ಈ ಎಲ್ಲ ಕಚೇರಿಗಳನ್ನು ಪೊಲೀಸರು ಪತ್ತೆ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಕೋಟಿ ಕೋಟಿ ಸಂಪಾದನೆ ಆರೋಪಿ ಸ್ಥಾನದಲ್ಲಿರುವ ಚಿಲುಮೆ ಸಂಸ್ಥೆ ಮತದಾರರ ಮಾಹಿತಿ ಸಂಗ್ರಹಿಸುವ ಮೂಲಕವೇ ಕೋಟಿ ಕೋಟಿ ಸಂಪಾದನೆ ಮಾಡಿದೆ ಎನ್ನಲಾಗುತ್ತಿದೆ. ಚಿಲುಮೆ ಸಂಸ್ಥೆಯ ಸಂಸ್ಥಾಪಕ ರವಿಕುಮಾರ್ ರಾಜಕಾರಣಿಗಳ ಜೊತೆ ಒಡನಾಟ ಹೊಂದಿದ್ದು, ಚುನಾವಣೆ ನಿರ್ವಹಣೆ ಹೆಸರಿನಲ್ಲಿ ಹಲವು ಸೇವೆಗಳನ್ನು ನೀಡುವುದರ ಜೊತೆಗೆ ಚುನಾವಣೆ ಕಾರ್ಯಕ್ರಮಗಳಿಗೆ ಜನರನ್ನು ಕಳುಹಿಸುವ ಕೆಲಸ ಕೂಡ ಮಾಡುತ್ತಿದ್ದರು. ಈ ಕೆಲಸಕ್ಕಾಗಿ ಸಂಬಂಧಪಟ್ಟ ರಾಜಕಾರಣಿಗಳಿಂದ ಲಕ್ಷ ಲಕ್ಷ ಹಣ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

ಅಧಿಕಾರಿಗಳ ಅಮಾನತು: ಹಗರಣ ಬೆಳಕಿಗೆ ಬಂದಂತೆ ಒಂದೊಂದೇ ಸಂಗತಿಗಳು ಹೊರಗೆ ಬರುತ್ತಿವೆ. ಇದರ ಬೆನ್ನಲ್ಲೇ ಐಎಎಸ್ ಅಧಿಕಾರಿಗಳಾದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ರಂಗಪ್ಪ ಮತ್ತು ಬೆಂಗಳೂರು ಜಿಲ್ಲಾಧಿಕಾರಿ ಶ್ರೀನಿವಾಸ್ ಅವರನ್ನು ಅಮಾನತು ಮಾಡಿ, ಕೇಂದ್ರ ಚುನಾವಣೆ ಆಯೋಗವು ತನಿಖೆಗೆ ನ.25ರ ಶುಕ್ರವಾರ ಆದೇಶಿಸಿತ್ತು.

ಇದನ್ನೂ ಓದಿರಿ: ರಾಹುಲ್ ಆರತಿ ಎತ್ತುವುದನ್ನು ಅಪಹಾಸ್ಯ ಮಾಡಿದ ಅಮಿತ್ ಮಾಳವಿಯಾಗೆ ಜನರಿಂದ ಮಂಗಳಾರತಿ

ಬೆಂಗಳೂರಿನ ಬಿಬಿಎಂಪಿ ವ್ಯಾಪಿಯಲ್ಲಿ ನಡೆದ ಮತದಾರರ ಐಡಿ ಕಾರ್ಡ್ ಪರಿಷ್ಕರಣೆ ಅಕ್ರಮ ಪ್ರಕರಣದಲ್ಲಿ ಕೇಂದ್ರ ಚುನಾವಣೆ ಆಯೋಗ ಮಧ್ಯೆ ಪ್ರವೇಶ ಮಾಡಿದ್ದು, ಕರ್ನಾಟಕ ಚುನಾವಣೆ ಆಯೋಗಕ್ಕೆ ಚಾಟಿ ಬೀಸಿದೆ. ಬಿಬಿಎಂಪಿ ಹೊರತುಪಡಿಸಿ ವೋಟರ್ ಐಡಿ ಪರಿಷ್ಕರಣೆಗೆ ವಿಶೇಷ ಅಧಿಕಾರಿ ನೇಮಕಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಈವರೆಗೆ ಸಂಗ್ರಹಿಸಿರುವ ಡೇಟಾ ಬಳಸದಂತೆಯೂ ಸೂಚಿಸಿದ್ದು, ಬೆಂಗಳೂರಿನ ಮೂರು ಕ್ಷೇತ್ರಗಳಲ್ಲಿ ಮತ್ತೊಮ್ಮೆ ಶೇ. 100ರಷ್ಟು ಮತದಾರರ ಪರಿಷ್ಕರಣೆ ನಡೆಯಬೇಕು. ಅಲ್ಲದೇ ಚಿಕ್ಕಪೇಟೆ, ಮಹದೇವಪುರ, ಶಿವಾಜಿನಗರ ಉಸ್ತುವಾರಿ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯುಕ್ತರಿಗೆ ಕೇಂದ್ರ ಚುನಾವಣೆ ಆಯೋಗ ನಿರ್ದೇಶನ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...