Homeಅಂತರಾಷ್ಟ್ರೀಯ1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಫ್ರೀಜರ್‌ನಲ್ಲಿ ಇರಿಸಿದ್ದ ನೂಡಲ್ಸ್ ತಿಂದು ಫುಡ್​ ಪಾಯ್ಸನಿಂಗ್​ನಿಂದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ. ಈ ನೂಡಲ್ಸ್ ಅನ್ನು ಜೋಳದ ಹಿಟ್ಟಿನೊಳಗೆ ಇರಿಸಲಾಗಿತ್ತು. ಕಲುಷಿತಗೊಂಡಿದ್ದ ಹಿಟ್ಟು, ವಿಷವಾಗಿ ಪರಿವರ್ತನೆಯಾಗಿತ್ತು.

ಚೀನಾದ ಈಶಾನ್ಯ ಭಾಗದ ಹೀಲಾಂಗ್‌ಜಿಯಾಂಗ್‌ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ಕುಟುಂಬವೊಂದು, ಕಳೆದ ಒಂದು ವರ್ಷದಿಂದ ಫ್ರೀಜರ್​ನಲ್ಲಿ ನೂಡಲ್ಸ್ ಸೂಪ್ ಇಟ್ಟಿತ್ತು. ಅಕ್ಟೋಬರ್ 5ರಂದು ಈ ತಿನಿಸು ಸೇವಿಸಿದ್ದ ಕುಟುಂಬದವರು, ಅಕ್ಟೋಬರ್ 10ರಂದು ಮೃತಪಟ್ಟಿದ್ದಾರೆ. ಬಾಂಗ್​​ಕ್ರೆಕ್​ ಆ್ಯಸಿಡ್​ ಪಾಯ್ಸನಿಂಗ್ ಉಂಟಾಗಿ ಏಳು ಮಂದಿ ವಯಸ್ಕರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕುಟುಂಬಸ್ಥರು ಸೇವಿಸಿದ ಈ ನೂಡಲ್ಸ್ ಸೂಪ್​ ಸ್ಥಳೀಯ ಚೀನಿ ಅಡುಗೆಯಾಗಿತ್ತು. ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ರುಚಿ ಹಿಡಿಸಿದ ಕಾರಣ ನೂಡಲ್ಸ್ ತಿನ್ನಲು ನಿರಾಕರಿಸಿದ್ದರಿಂದ ಬದುಕುಳಿದಿದ್ದಾರೆ ಎಂದು  ಡೈಲಿಸ್ಟಾರ್.ಕೊ.ಯು ವರದಿ ಮಾಡಿದೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹೀಲೋಂಗ್​ಜಾಂಗ್ ಸೆಂಟರ್ ಫಾರ್ ಡಿಸೀಸ್​ ಕಂಟ್ರೋಲ್ ಆ್ಯಂಡ್​ ಪ್ರಿವೆನ್ಷನ್​​ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ, ಬಾಂಗ್​​ಕ್ರೆಕ್​ ಆ್ಯಸಿಡ್​ ವಿಷವು ಹೆಚ್ಚಾಗಿ ಮಾರಕವಾಗಿದೆ ಎಂದು ಹೇಳಿದರು. “ಇದು ಯಕೃತ್ತು, ಮೂತ್ರಪಿಂಡಗಳು, ಹೃದಯ ಮತ್ತು ಮೆದುಳು ಸೇರಿದಂತೆ ಮಾನವನ ಅನೇಕ ಅಂಗಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

’ಈ ಪಾಯ್ಸನಿಂಗ್​ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಒಮ್ಮೆ ಪಾಯ್ಸನಿಂಗ್ ಉಂಟಾದರೆ, ಸಾವಿನ ಪ್ರಮಾಣವು ಶೇ.40ರಿಂದ 100ರಷ್ಟು ಇರುತ್ತದೆ. ಬಾಂಗ್​​ಕ್ರೆಕ್​ ಆ್ಯಸಿಡ್ ಒಂದು ಅಪಾಯಕಾರಿ ವಿಷವಾಗಿದ್ದು, ಕಳಿತ ತೆಂಗಿನಕಾಯಿಯಿಂದ ಇದು ಉತ್ಪಾದನೆಯಾಗುತ್ತದೆ’ ಎಂದು ಗಾವೊ ಫೀ ತಿಳಿಸಿದ್ದಾರೆ ಎಂದು ಡೈಲಿಸ್ಟಾರ್.ಕೊ.ಯು ಉಲ್ಲೇಖಿಸಿದೆ.

ಇಂಡೋನೇಷ್ಯಾದ ಸಾಂಪ್ರದಾಯಿಕ ತಿನಿಸು ‘ಟೆಂಪೆ ಬೊಂಗ್‌ಕ್ರ್ಯಾಕ್’, ಡಿಜೆನ್ಕೋಲ್​ ಬೀನ್ಸ್​ ಅನ್ನು ನಿಷೇಧಿಸಲಾಗಿದೆ. ಏಕೆಂದರೆ ಇವುಗಳು ಕೂಡ ಅನೇಕ ಸಾವುಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. 1951ರಿಂದ 1975ರವರೆಗೆ ಇಂಡೋನೇಷ್ಯಾದಲ್ಲಿ ಬಾಂಗ್​​ಕ್ರೆಕ್​ ಆ್ಯಸಿಡ್​​ನಿಂದ ಪ್ರತಿ ವರ್ಷ ಸರಾಸರಿ 288 ಜನರಿಗೆ ಪಾಯ್ಸನಿಂಗ್ ಉಂಟಾಗಿದ್ದು, 34 ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...