Homeಅಂತರಾಷ್ಟ್ರೀಯ1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಫ್ರೀಜರ್‌ನಲ್ಲಿ ಇರಿಸಿದ್ದ ನೂಡಲ್ಸ್ ತಿಂದು ಫುಡ್​ ಪಾಯ್ಸನಿಂಗ್​ನಿಂದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ. ಈ ನೂಡಲ್ಸ್ ಅನ್ನು ಜೋಳದ ಹಿಟ್ಟಿನೊಳಗೆ ಇರಿಸಲಾಗಿತ್ತು. ಕಲುಷಿತಗೊಂಡಿದ್ದ ಹಿಟ್ಟು, ವಿಷವಾಗಿ ಪರಿವರ್ತನೆಯಾಗಿತ್ತು.

ಚೀನಾದ ಈಶಾನ್ಯ ಭಾಗದ ಹೀಲಾಂಗ್‌ಜಿಯಾಂಗ್‌ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ಕುಟುಂಬವೊಂದು, ಕಳೆದ ಒಂದು ವರ್ಷದಿಂದ ಫ್ರೀಜರ್​ನಲ್ಲಿ ನೂಡಲ್ಸ್ ಸೂಪ್ ಇಟ್ಟಿತ್ತು. ಅಕ್ಟೋಬರ್ 5ರಂದು ಈ ತಿನಿಸು ಸೇವಿಸಿದ್ದ ಕುಟುಂಬದವರು, ಅಕ್ಟೋಬರ್ 10ರಂದು ಮೃತಪಟ್ಟಿದ್ದಾರೆ. ಬಾಂಗ್​​ಕ್ರೆಕ್​ ಆ್ಯಸಿಡ್​ ಪಾಯ್ಸನಿಂಗ್ ಉಂಟಾಗಿ ಏಳು ಮಂದಿ ವಯಸ್ಕರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕುಟುಂಬಸ್ಥರು ಸೇವಿಸಿದ ಈ ನೂಡಲ್ಸ್ ಸೂಪ್​ ಸ್ಥಳೀಯ ಚೀನಿ ಅಡುಗೆಯಾಗಿತ್ತು. ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ರುಚಿ ಹಿಡಿಸಿದ ಕಾರಣ ನೂಡಲ್ಸ್ ತಿನ್ನಲು ನಿರಾಕರಿಸಿದ್ದರಿಂದ ಬದುಕುಳಿದಿದ್ದಾರೆ ಎಂದು  ಡೈಲಿಸ್ಟಾರ್.ಕೊ.ಯು ವರದಿ ಮಾಡಿದೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹೀಲೋಂಗ್​ಜಾಂಗ್ ಸೆಂಟರ್ ಫಾರ್ ಡಿಸೀಸ್​ ಕಂಟ್ರೋಲ್ ಆ್ಯಂಡ್​ ಪ್ರಿವೆನ್ಷನ್​​ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ, ಬಾಂಗ್​​ಕ್ರೆಕ್​ ಆ್ಯಸಿಡ್​ ವಿಷವು ಹೆಚ್ಚಾಗಿ ಮಾರಕವಾಗಿದೆ ಎಂದು ಹೇಳಿದರು. “ಇದು ಯಕೃತ್ತು, ಮೂತ್ರಪಿಂಡಗಳು, ಹೃದಯ ಮತ್ತು ಮೆದುಳು ಸೇರಿದಂತೆ ಮಾನವನ ಅನೇಕ ಅಂಗಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

’ಈ ಪಾಯ್ಸನಿಂಗ್​ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಒಮ್ಮೆ ಪಾಯ್ಸನಿಂಗ್ ಉಂಟಾದರೆ, ಸಾವಿನ ಪ್ರಮಾಣವು ಶೇ.40ರಿಂದ 100ರಷ್ಟು ಇರುತ್ತದೆ. ಬಾಂಗ್​​ಕ್ರೆಕ್​ ಆ್ಯಸಿಡ್ ಒಂದು ಅಪಾಯಕಾರಿ ವಿಷವಾಗಿದ್ದು, ಕಳಿತ ತೆಂಗಿನಕಾಯಿಯಿಂದ ಇದು ಉತ್ಪಾದನೆಯಾಗುತ್ತದೆ’ ಎಂದು ಗಾವೊ ಫೀ ತಿಳಿಸಿದ್ದಾರೆ ಎಂದು ಡೈಲಿಸ್ಟಾರ್.ಕೊ.ಯು ಉಲ್ಲೇಖಿಸಿದೆ.

ಇಂಡೋನೇಷ್ಯಾದ ಸಾಂಪ್ರದಾಯಿಕ ತಿನಿಸು ‘ಟೆಂಪೆ ಬೊಂಗ್‌ಕ್ರ್ಯಾಕ್’, ಡಿಜೆನ್ಕೋಲ್​ ಬೀನ್ಸ್​ ಅನ್ನು ನಿಷೇಧಿಸಲಾಗಿದೆ. ಏಕೆಂದರೆ ಇವುಗಳು ಕೂಡ ಅನೇಕ ಸಾವುಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. 1951ರಿಂದ 1975ರವರೆಗೆ ಇಂಡೋನೇಷ್ಯಾದಲ್ಲಿ ಬಾಂಗ್​​ಕ್ರೆಕ್​ ಆ್ಯಸಿಡ್​​ನಿಂದ ಪ್ರತಿ ವರ್ಷ ಸರಾಸರಿ 288 ಜನರಿಗೆ ಪಾಯ್ಸನಿಂಗ್ ಉಂಟಾಗಿದ್ದು, 34 ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...