Homeಅಂತರಾಷ್ಟ್ರೀಯ1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

- Advertisement -
- Advertisement -

ಒಂದು ವರ್ಷಕ್ಕೂ ಹೆಚ್ಚು ಸಮಯದಿಂದ ಫ್ರೀಜರ್‌ನಲ್ಲಿ ಇರಿಸಿದ್ದ ನೂಡಲ್ಸ್ ತಿಂದು ಫುಡ್​ ಪಾಯ್ಸನಿಂಗ್​ನಿಂದ ಒಂದೇ ಕುಟುಂಬದ 9 ಮಂದಿ ಮೃತಪಟ್ಟಿರುವ ಘಟನೆ ಚೀನಾದಲ್ಲಿ ನಡೆದಿದೆ. ಈ ನೂಡಲ್ಸ್ ಅನ್ನು ಜೋಳದ ಹಿಟ್ಟಿನೊಳಗೆ ಇರಿಸಲಾಗಿತ್ತು. ಕಲುಷಿತಗೊಂಡಿದ್ದ ಹಿಟ್ಟು, ವಿಷವಾಗಿ ಪರಿವರ್ತನೆಯಾಗಿತ್ತು.

ಚೀನಾದ ಈಶಾನ್ಯ ಭಾಗದ ಹೀಲಾಂಗ್‌ಜಿಯಾಂಗ್‌ ಪ್ರಾಂತ್ಯದ ಜಿಕ್ಸಿ ನಗರದಲ್ಲಿ ಕುಟುಂಬವೊಂದು, ಕಳೆದ ಒಂದು ವರ್ಷದಿಂದ ಫ್ರೀಜರ್​ನಲ್ಲಿ ನೂಡಲ್ಸ್ ಸೂಪ್ ಇಟ್ಟಿತ್ತು. ಅಕ್ಟೋಬರ್ 5ರಂದು ಈ ತಿನಿಸು ಸೇವಿಸಿದ್ದ ಕುಟುಂಬದವರು, ಅಕ್ಟೋಬರ್ 10ರಂದು ಮೃತಪಟ್ಟಿದ್ದಾರೆ. ಬಾಂಗ್​​ಕ್ರೆಕ್​ ಆ್ಯಸಿಡ್​ ಪಾಯ್ಸನಿಂಗ್ ಉಂಟಾಗಿ ಏಳು ಮಂದಿ ವಯಸ್ಕರು ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಕುಟುಂಬಸ್ಥರು ಸೇವಿಸಿದ ಈ ನೂಡಲ್ಸ್ ಸೂಪ್​ ಸ್ಥಳೀಯ ಚೀನಿ ಅಡುಗೆಯಾಗಿತ್ತು. ಅದೃಷ್ಟವಶಾತ್ ಕುಟುಂಬದ ಮೂವರು ಮಕ್ಕಳು ರುಚಿ ಹಿಡಿಸಿದ ಕಾರಣ ನೂಡಲ್ಸ್ ತಿನ್ನಲು ನಿರಾಕರಿಸಿದ್ದರಿಂದ ಬದುಕುಳಿದಿದ್ದಾರೆ ಎಂದು  ಡೈಲಿಸ್ಟಾರ್.ಕೊ.ಯು ವರದಿ ಮಾಡಿದೆ.

ಇದನ್ನೂ ಓದಿ: ಹುಲಿಗಳಿಗೆ ಗೋಮಾಂಸ ನೀಡುವುದಕ್ಕೆ ಬಿಜೆಪಿ ಪ್ರತಿಭಟನೆ: ಹಾಗಾದರೆ ಇಡ್ಲಿ-ಸಾಂಬಾರ್ ಕೊಡಿ ಎಂದ ನೆಟ್ಟಿಗರು!

ಹೀಲೋಂಗ್​ಜಾಂಗ್ ಸೆಂಟರ್ ಫಾರ್ ಡಿಸೀಸ್​ ಕಂಟ್ರೋಲ್ ಆ್ಯಂಡ್​ ಪ್ರಿವೆನ್ಷನ್​​ನ ಆಹಾರ ಸುರಕ್ಷತೆ ನಿರ್ದೇಶಕ ಗಾವೋ ಫೀ, ಬಾಂಗ್​​ಕ್ರೆಕ್​ ಆ್ಯಸಿಡ್​ ವಿಷವು ಹೆಚ್ಚಾಗಿ ಮಾರಕವಾಗಿದೆ ಎಂದು ಹೇಳಿದರು. “ಇದು ಯಕೃತ್ತು, ಮೂತ್ರಪಿಂಡಗಳು, ಹೃದಯ ಮತ್ತು ಮೆದುಳು ಸೇರಿದಂತೆ ಮಾನವನ ಅನೇಕ ಅಂಗಗಳಿಗೆ ಗಂಭೀರ ಹಾನಿಯನ್ನುಂಟುಮಾಡುತ್ತದೆ” ಎಂದು ಹೇಳಿದ್ದಾರೆ.

’ಈ ಪಾಯ್ಸನಿಂಗ್​ ನಿವಾರಣೆಗೆ ಯಾವುದೇ ಔಷಧಿ ಇಲ್ಲ. ಒಮ್ಮೆ ಪಾಯ್ಸನಿಂಗ್ ಉಂಟಾದರೆ, ಸಾವಿನ ಪ್ರಮಾಣವು ಶೇ.40ರಿಂದ 100ರಷ್ಟು ಇರುತ್ತದೆ. ಬಾಂಗ್​​ಕ್ರೆಕ್​ ಆ್ಯಸಿಡ್ ಒಂದು ಅಪಾಯಕಾರಿ ವಿಷವಾಗಿದ್ದು, ಕಳಿತ ತೆಂಗಿನಕಾಯಿಯಿಂದ ಇದು ಉತ್ಪಾದನೆಯಾಗುತ್ತದೆ’ ಎಂದು ಗಾವೊ ಫೀ ತಿಳಿಸಿದ್ದಾರೆ ಎಂದು ಡೈಲಿಸ್ಟಾರ್.ಕೊ.ಯು ಉಲ್ಲೇಖಿಸಿದೆ.

ಇಂಡೋನೇಷ್ಯಾದ ಸಾಂಪ್ರದಾಯಿಕ ತಿನಿಸು ‘ಟೆಂಪೆ ಬೊಂಗ್‌ಕ್ರ್ಯಾಕ್’, ಡಿಜೆನ್ಕೋಲ್​ ಬೀನ್ಸ್​ ಅನ್ನು ನಿಷೇಧಿಸಲಾಗಿದೆ. ಏಕೆಂದರೆ ಇವುಗಳು ಕೂಡ ಅನೇಕ ಸಾವುಗಳಿಗೆ ಕಾರಣವಾಗಿದೆ ಎಂದು ತಿಳಿಸಿದ್ದಾರೆ. 1951ರಿಂದ 1975ರವರೆಗೆ ಇಂಡೋನೇಷ್ಯಾದಲ್ಲಿ ಬಾಂಗ್​​ಕ್ರೆಕ್​ ಆ್ಯಸಿಡ್​​ನಿಂದ ಪ್ರತಿ ವರ್ಷ ಸರಾಸರಿ 288 ಜನರಿಗೆ ಪಾಯ್ಸನಿಂಗ್ ಉಂಟಾಗಿದ್ದು, 34 ಜನರು ಸಾವನ್ನಪ್ಪಿದ್ದರು.


ಇದನ್ನೂ ಓದಿ: ದಕ್ಷಿಣ ಭಾರತೀಯರ ನೆಚ್ಚಿನ ತಿಂಡಿ ’ಇಡ್ಲಿ’ ನಮ್ಮ ಕರ್ನಾಟಕದ್ದು..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...