Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...