Homeಅಂತರಾಷ್ಟ್ರೀಯಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಕೊರೊನಾ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಿದ ಚೀನಾ ಮತ್ತು ಯುಕೆ

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

- Advertisement -
- Advertisement -

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಸೋಮವಾರ ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದಾರೆ. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಆದಾಗ್ಯೂ, ಎರಡೂ ಲಸಿಕೆಗಳ ಪ್ರತಿರಕ್ಷಣಾ ಪ್ರತಿಕ್ರಿಯೆಗಳು ಉತ್ತೇಜನಕಾರಿಯಾಗಿದ್ದರೂ, ತಮ್ಮ ಲಸಿಕೆಯು  ಕೊರೊನಾ ವೈರಸ್‌ಗೆ ಕಾರಣವಾಗುವ ಸೂಕ್ಷ್ಮಜೀವಿ SARS-CoV-2 ನಿಂದ ಜನರನ್ನು ರಕ್ಷಿಸುತ್ತದೆಯೇ ಎಂದು ನಿರ್ಧರಿಸಲು ಹೆಚ್ಚಿನ ಸಂಶೋಧನೆಗಳು ಅಗತ್ಯವೆಂದು ಎಚ್ಚರಿಸಿದ್ದಾರೆ.

1,077 ಆರೋಗ್ಯವಂತ ವಯಸ್ಕ ಸ್ವಯಂಸೇವಕರ ಮೇಲೆ ನಡೆಸಿದ ಬ್ರಿಟೀಷ್ ಪ್ರಯೋಗವು ಲಸಿಕೆ ಸುರಕ್ಷಿತವಾಗಿದೆ ಎಂದು ಕಂಡುಕೊಂಡಿದೆ. ಪ್ಯಾರಸಿಟೊಮೊಲ್ ಮೂಲಕ ಚಿಕಿತ್ಸೆ ನೀಡಬಹುದಾದ ಕೆಲವು ಅಡ್ಡಪರಿಣಾಮಗಲು ಮತ್ತು ಪ್ರಯೋಗದ 56 ನೇ ದಿನದವರೆಗೆ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಯನ್ನು ಉಂಟುಮಾಡಿದೆ ಎಂದು ಸಂಶೋಧಕರು ತಿಳಿಸಿದ್ದಾರೆ.

ವ್ಯಾಕ್ಸಿನೇಷನ್ ಮಾಡಿದ 14 ದಿನಗಳಲ್ಲಿ ವೈರಸ್ ಸೋಂಕಿತ ಕೋಶಗಳನ್ನು ಕಂಡುಹಿಡಿಯಲು ಮತ್ತು ಆಕ್ರಮಣ ಮಾಡಲು ಲಸಿಕೆಯು ಟಿ-ಸೆಲ್ ರೋಗನಿರೋಧಕ ಪ್ರತಿಕ್ರಿಯೆಯನ್ನು ಪ್ರಚೋದಿಸಿದೆ. ರಕ್ತ ಅಥವಾ ದುಗ್ಧರಸದಲ್ಲಿ ಹರಡುವ ವೈರಸ್ ಅನ್ನು 28 ದಿನಗಳ ಒಳಗೆ ಕಂಡುಹಿಡಿದು ಆಕ್ರಮಣ ಮಾಡುವ ಪ್ರತಿಕಾಯ(ಆಂಟಿಬಾಡಿ) ಪ್ರತಿಕ್ರಿಯೆಯೆ ವ್ಯಾಕ್ಸಿನೇಷನ್ ಅಗಿದೆ ಎಂದಿದ್ದಾರೆ.

“ಪ್ರತಿರಕ್ಷಣಾ(ಇಮ್ಯೂನಿಟಿ) ವ್ಯವಸ್ಥೆಯು ರೋಗಕಾರಕಗಳನ್ನು ಕಂಡುಹಿಡಿಯುವ ಮತ್ತು ಆಕ್ರಮಣ ಮಾಡುವ ಆಂಟಿಬಾಡಿ ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳು ಎಂಬ ಎರಡು ಮಾರ್ಗಗಳನ್ನು ಹೊಂದಿದೆ” ಎಂದು ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಪ್ರಯೋಗ ಅಧ್ಯಯನದ ಪ್ರಮುಖ ಲೇಖಕ ಆಂಡ್ರ್ಯೂ ಪೊಲಾರ್ಡ್ ಹೇಳಿದ್ದಾರೆ.

“ಈ ಲಸಿಕೆ ಎರಡನ್ನೂ ಪ್ರೇರೇಪಿಸುವ ಉದ್ದೇಶವನ್ನು ಹೊಂದಿದೆ” ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚೀನಾದ ಪ್ರಯೋಗವು ಲಸಿಕೆ ಸೌಮ್ಯ ಅಡ್ಡಪರಿಣಾಮಗಳನ್ನು ಮಾತ್ರ ಉಂಟುಮಾಡಿದೆ. ಒಂದೇ ಡೋಸ್ ರೋಗ ನಿರೋಧಕತೆಯು ಸ್ವೀಕರಿಸಿದ 28 ದಿನಗಳಲ್ಲಿ ಗಮನಾರ್ಹವಾದ ಪ್ರತಿಕಾಯ(ಆಂಟಿಬಾಡಿ) ಮತ್ತು ಟಿ-ಸೆಲ್ ಪ್ರತಿಕ್ರಿಯೆಗಳನ್ನು ಉಂಟುಮಾಡಲು ಸಾಧ್ಯವಾಯಿತು ಎಂದು ಚೀನಾದ ಸಂಶೋಧಕರು ಹೇಳಿದ್ದಾರೆ.

ಬೀಜಿಂಗ್ ಇನ್ಸ್ಟಿಟ್ಯೂಟ್ ಆಫ್ ಬಯೋಟೆಕ್ನಾಲಜಿಯ ವೀ ಚೆನ್ ಮತ್ತು ಅವರ ಸಹೋದ್ಯೋಗಿಗಳು ತಮ್ಮ ಲಸಿಕೆಯ ಪರಿಣಾಮಕಾರಿತ್ವವನ್ನು ಮತ್ತಷ್ಟು ಮೌಲ್ಯಮಾಪನ ಮಾಡಲು ಅಂತರರಾಷ್ಟ್ರೀಯ, ಮಲ್ಟಿಸೆಂಟರ್, ಡಬಲ್-ಬ್ಲೈಂಡ್, ನಿಯಂತ್ರಿತ ಮೂರನೇ ಹಂತದ ಪ್ರಯೋಗವನ್ನು ಯೋಜಿಸಿದ್ದಾರೆ ಎಂದು ಹೇಳಿದರು.

ಎರಡೂ ಸಂಶೋಧನಾ ಗುಂಪುಗಳು ತಮ್ಮ ಸಂಶೋಧನೆಗಳನ್ನು ದಿ ಲ್ಯಾನ್ಸೆಟ್ ಎಂಬ ವೈದ್ಯಕೀಯ ಜರ್ನಲ್‌ನಲ್ಲಿ ಸೋಮವಾರ ಪ್ರಕಟಿಸಿವೆ.

“ಈ ಪ್ರಯೋಗ ಫಲಿತಾಂಶಗಳು ಭಾರಿ ನಿರೀಕ್ಷೆ ಹುಟ್ಟಿಸಿದೆ” ಎಂದು ಜಾನ್ಸ್ ಹಾಪ್ಕಿನ್ಸ್ ಬ್ಲೂಮ್‌ಬರ್ಗ್ ಸ್ಕೂಲ್ ಆಫ್ ಪಬ್ಲಿಕ್ ಹೆಲ್ತ್‌ನ ಸಹಾಯಕ ಪ್ರಾಧ್ಯಾಪಕ ನೌರ್ ಬಾರ್- ಝೀವ್ ಹೇಳಿದರು.

“ಮೂರನೇ ಹಂತದ ಪ್ರಯೋಗದ ಫಲಿತಾಂಶ ಬಹಳ ಪ್ರಾಮುಖ್ಯತೆ ಹೊಂದಿದೆ, ಯಾಕೆಂದರೆ ಅಲ್ಲಿ ಈ ಲಸಿಕೆಗಳ ಪರಿಣಾಮಕಾರಿತ್ವ ಮತ್ತು ಸುರಕ್ಷತೆಯನ್ನು ನಿರ್ಣಯಿಸಲು ಹೆಚ್ಚಿನ ಜನಸಂಖ್ಯೆಯ ಮೇಲೆ ಪರೀಕ್ಷಿಸಲಾಗುತ್ತದೆ.”

“ಒಟ್ಟಾರೆಯಾಗಿ, ಎರಡೂ ಲಸಿಕೆಗಳು ಭರವಸೆ ಮೂಡಿಸುತ್ತಿದೆ. ಅದರ ಮೂರನೇ ಹಂತದ ಪ್ರಯೋಗಗಳ ಫಲಿತಾಂಶಗಳನ್ನು ಬಹಳ ಉತ್ಸಾಹದಿಂದ ವೀಕ್ಷಿಸಲಾಗುವುದು” ಎಂದು ಹಿರಿಯ ವೈರಾಲಜಿಸ್ಟ್ ಮತ್ತು ಯುಕೆ-ಭಾರತ ಸರ್ಕಾರದ ಸಹಭಾಗಿತ್ವದ ವೆಲ್ಕಂ ಟ್ರಸ್ಟ್-ಡಿಬಿಟಿ ಇಂಡಿಯಾ ಅಲೈಯನ್ಸ್ ಮುಖ್ಯಸ್ಥ ಶಾಹಿದ್ ಜಮೀಲ್ ಹೇಳಿದ್ದಾರೆ.


ಓದಿ:ಕೊರೊನಾಗೆ ಲಸಿಕೆ ಸಿದ್ಧ: ಕ್ಲಿನಿಕಲ್ ಪ್ರಯೋಗಕ್ಕೆ ಬನ್ನಿ ಎಂದ ದೆಹಲಿಯ ಏಮ್ಸ್!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...