Homeಅಂತರಾಷ್ಟ್ರೀಯಅಮೆರಿಕದ 'ಸುಂಕ ಹೇರಿಕೆ'ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

- Advertisement -
- Advertisement -

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ.

“ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ ಮೇಲೆ ವಿಧಿಸಿರುವ ಶೇಕಡ 34ರಷ್ಟು ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಚೀನಾದ ರಫ್ತಿನ ಮೇಲೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಕಳೆದ ವಾರ ಡೊನಾಲ್ಡ್ ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿದೆ. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿದೆ. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾ “ನಾವು ಸುಂಕ ವಿಧಿಸಿರುವುದನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕೊನೆವರೆಗೆ ಹೋರಾಡುತ್ತೇವೆ” ಎಂದಿತ್ತು. ಚೀನಾ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆ ಅಮೆರಿಕ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ವರದಿಯಾಗಿದೆ. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ 20%+34%+50%=104% ಆಗಿದೆ.

“ಸ್ಥಿರ ಬೆಳವಣಿಗೆಯನ್ನು ಖಾತ್ರಿಪಡಿಸುವ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವ ವ್ಯವಸ್ಥೆಯಿಂದ ಚೀನಾದ ಆರ್ಥಿಕತೆಯು ಬೆಂಬಲಿತವಾಗಿದೆ. ಚೀನಾದ ಉತ್ಪಾದನೆಯು ನಿರಂತರವಾಗಿ ನವೀಕರಿಸಲ್ಪಡುವ ಕೈಗಾರಿಕಾ ವ್ಯವಸ್ಥೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರಂತರ ಹೂಡಿಕೆ ಮತ್ತು ನಾವೀನ್ಯತೆಯನ್ನು ಆಧರಿಸಿದೆ” ಎಂದು ಯು ಜಿಂಗ್ ಹೇಳಿದ್ದಾರೆ.

“ಚೀನಾ ಆರ್ಥಿಕ ಜಾಗತೀಕರಣ ಮತ್ತು ಬಹುಪಕ್ಷೀಯತೆಯ ಹೊಂದಿದೆ. ವಿಶ್ವ ಆರ್ಥಿಕತೆಯ ಪಾಲುದಾರನಾಗಿದೆ. ವಾರ್ಷಿಕವಾಗಿ ಸರಾಸರಿ ಜಾಗತಿಕ ಬೆಳವಣಿಗೆಗೆ ಸುಮಾರು ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಲು ನಾವು ಪ್ರಪಂಚದ ಉಳಿದ ಭಾಗಗಳೊಂದಿಗೆ ಕೆಲಸ ಮಾಡುವುದನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮೂಲಕ ಮುಂದುವರೆಸುತ್ತೇವೆ” ಎಂದಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಚೀನಾ ಮೇಲೆ ಶೇ.32ರಷ್ಟು ಪ್ರತಿ ಸುಂಕ ವಿಧಿಸಲಾಗಿದೆ. ಭಾರತ ಪ್ರತಿ ಸುಂಕವನ್ನು ಒಪ್ಪಿಕೊಂಡು ಸುಮ್ಮನಾಗಿದೆ. ಆದರೆ, ಚೀನಾ ಸೇರಿದಂತೆ ಕೆಲ ರಾಷ್ಟ್ರಗಳು ಅಮೆರಿಕದ ವಿರುದ್ಧ ವ್ಯಾಪಾರ ಸಮರ ಸಾರಿದೆ.

‘ಪ್ರತಿಭಟನಾಕಾರರಿಗೆ ಹಣ ನೀಡಲಾಗಿದೆ..’; ಅಮೆರಿಕದ ‘ಹ್ಯಾಂಡ್ಸ್ ಆಫ್’ ಬಗ್ಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಿಕ್ಷಣ ಸಂಸ್ಥೆಗಳು ‘ಕೋಮುವಾದದ ಪ್ರಯೋಗಶಾಲೆʼಗಳಾಗಲು ಅವಕಾಶ ನೀಡುವುದಿಲ್ಲ: ಕೇರಳ ಸರ್ಕಾರ

ಶಾಲೆಗಳಲ್ಲಿ ಕ್ರಿಸ್‌ಮಸ್‌ ಆಚರಣೆಗೆ ಹಿಂದುತ್ವ ಗುಂಪುಗಳು ಅಡ್ಡಿಪಡಿಸುತ್ತಿವೆ ಎಂಬ ಆರೋಪದ ಕುರಿತು ಕೇರಳದ ಶಿಕ್ಷಣ ಸಚಿವ ಶಿವನ್ ಕುಟ್ಟಿ ಭಾನುವಾರ (ಡಿ.22) ಪ್ರತಿಕ್ರಿಯಿಸಿದ್ದು, ಶಿಕ್ಷಣ ಸಂಸ್ಥೆಗಳು ಕೋಮುವಾದದ ಪ್ರಯೋಗ ಶಾಲೆಗಳಾಗಲು ಅವಕಾಶ ನೀಡುವುದಿಲ್ಲ...

ರಷ್ಯಾ ಪರವಾಗಿ ಹೋರಾಡಿದ ಆರೋಪ; ಉಕ್ರೇನ್‌ನಲ್ಲಿ ಗುಜರಾತ್ ವಿದ್ಯಾರ್ಥಿ ಬಂಧನ

ರಷ್ಯಾ ಪರವಾಗಿ ಹೋರಾಡಿದ ಆರೋಪದ ಮೇಲೆ ಪ್ರಸ್ತುತ ಉಕ್ರೇನಿಯನ್ ಬಂಧನದಲ್ಲಿರುವ ಗುಜರಾತ್‌ನ ಮೊರ್ಬಿ ಜಿಲ್ಲೆಯ 23 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬಿಡುಗಡೆ ಮಾಡಿ, ಸಹಾಯ ಮಾಡುವಂತೆ ಭಾರತ ಸರ್ಕಾರ ಮತ್ತು ಪ್ರಧಾನಿ ನರೇಂದ್ರ...

ತಮಿಳುನಾಡು| ದಲಿತ ಮಹಿಳೆ ಅಡುಗೆ ಮಾಡುವುದಕ್ಕೆ ಪೋಷಕರ ವಿರೋಧ; ಕೆಲಸದಿಂದ ತೆಗೆದ ಶಾಲೆ

ತಮಿಳುನಾಡಿನ ಕರೂರ್ ಜಿಲ್ಲೆಯ ತೋಗಮಲೈ ಬಳಿಯ ಪಂಚಾಯತ್ ಯೂನಿಯನ್ ಮಧ್ಯಮ ಶಾಲೆಯಲ್ಲಿ, ಮುಖ್ಯಮಂತ್ರಿಗಳ ಉಪಾಹಾರ ಯೋಜನೆ (ಸಿಎಮ್‌ಬಿಎಸ್) ಅಡಿಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಸಮುದಾಯದ ಮಹಿಳೆಯನ್ನು ಕೆಲಸದಿಂದ ತೆಗೆದುಹಾಕಲಾಗಿದ ಎಂದು 'ನ್ಯೂ ಇಂಡಿಯನ್...

ಬಾಂಗ್ಲಾ ಉದ್ವಿಗ್ನತೆ: ಮತ್ತೊಬ್ಬ ಯುವ ನಾಯಕ ಮುಹಮ್ಮದ್ ಮೊತಾಲೆಬ್ ಸಿಕ್ದಾರ್ ಮೇಲೆ ಗುಂಡಿನ ದಾಳಿ 

ದೇಶದಲ್ಲಿ ವ್ಯಾಪಕ ಅಶಾಂತಿಗೆ ಕಾರಣವಾದ ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಬಿನ್ ಹಾದಿ ಅವರ ಮರಣದ ಕೆಲವು ದಿನಗಳ ನಂತರ, ಸೋಮವಾರ ಮತ್ತೊಬ್ಬ ನಾಯಕನ ಮೇಲೆ ಗುಂಡು ಹಾರಿಸಲಾಯಿತು. ಗಾಯಗೊಂಡ...

ಕೇರಳ |ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತರು ಭಾಗಿ : ಸಿಪಿಐ(ಎಂ) ನಾಯಕರಿಂದ ಆರೋಪ

ಕೇರಳದಲ್ಲಿ ಪಾಲಕ್ಕಾಡ್‌ನಲ್ಲಿ ನಡೆದ ಛತ್ತೀಸ್‌ಗಢದ ವಲಸೆ ಕಾರ್ಮಿಕನ ಗುಂಪು ಹತ್ಯೆಯಲ್ಲಿ ಆರ್‌ಎಸ್‌ಎಸ್‌ ಕಾರ್ಯರ್ತರು ಭಾಗಿಯಾಗಿದ್ದಾರೆ ಎಂದು ಆಡಳಿತರೂಢ ಸಿಪಿಐ(ಎಂ) ನಾಯಕರು ಆರೋಪಿಸಿದ್ದಾರೆ. ಸ್ಥಳೀಯ ಸ್ವ-ಆಡಳಿತ ಸಚಿವ ಎಂ.ಬಿ ರಾಜೇಶ್ ಆರಂಭದಲ್ಲಿ ಈ ಆರೋಪ ಮಾಡಿದ್ದು,...

‘ಹಿಂದೂಸ್ತಾನಿ ಅವಾಮ್ ಮೋರ್ಚಾಕ್ಕೆ ರಾಜ್ಯಸಭಾ ಸೀಟು ನೀಡಿ’: ದಲಿತ ನಾಯಕ ಜಿತನ್ ರಾಮ್ ಮಾಂಝಿ ಬೇಡಿಕೆ

ಬಿಹಾರ: ಕೇಂದ್ರ ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಉಸ್ತುವಾರಿ ಜಿತನ್ ರಾಮ್ ಮಾಂಝಿ ಅವರು 2024ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಬಿಹಾರದಲ್ಲಿ NDA ಮೈತ್ರಿಕೂಟದ ಭಾಗವಾಗಿ ನೀಡಿದ ಭರವಸೆಗಳನ್ನು ನೆನಪಿಸಿಕೊಂಡು...

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ 18 ವರ್ಷದ ವಿದ್ಯಾರ್ಥಿನಿಯನ್ನು ಹೊರಗೆ ತಳ್ಳಿದ ಮಾನಸಿಕ ಅಸ್ವಸ್ಥ

ನವಿ ಮುಂಬೈನ ಪನ್ವೇಲ್-ಸಿಎಸ್‌ಎಂಟಿ ಮಾರ್ಗದಲ್ಲಿ ಚಲಿಸುವ ಸ್ಥಳೀಯ ರೈಲಿನಿಂದ 18 ವರ್ಷದ ಬಾಲಕಿಯನ್ನು ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, 'ಮಾನಸಿಕವಾಗಿ ಅಸ್ವಸ್ಥ'...

ಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಸುಮ್ಮನೆ ಯಾರ ವಿರುದ್ದವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ (ಡಿ.22) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,...

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ ಡಿಸೆಂಬರ್...