Homeಅಂತರಾಷ್ಟ್ರೀಯಅಮೆರಿಕದ 'ಸುಂಕ ಹೇರಿಕೆ'ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

- Advertisement -
- Advertisement -

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ.

“ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ ಮೇಲೆ ವಿಧಿಸಿರುವ ಶೇಕಡ 34ರಷ್ಟು ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಚೀನಾದ ರಫ್ತಿನ ಮೇಲೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಕಳೆದ ವಾರ ಡೊನಾಲ್ಡ್ ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿದೆ. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿದೆ. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾ “ನಾವು ಸುಂಕ ವಿಧಿಸಿರುವುದನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕೊನೆವರೆಗೆ ಹೋರಾಡುತ್ತೇವೆ” ಎಂದಿತ್ತು. ಚೀನಾ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆ ಅಮೆರಿಕ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ವರದಿಯಾಗಿದೆ. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ 20%+34%+50%=104% ಆಗಿದೆ.

“ಸ್ಥಿರ ಬೆಳವಣಿಗೆಯನ್ನು ಖಾತ್ರಿಪಡಿಸುವ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವ ವ್ಯವಸ್ಥೆಯಿಂದ ಚೀನಾದ ಆರ್ಥಿಕತೆಯು ಬೆಂಬಲಿತವಾಗಿದೆ. ಚೀನಾದ ಉತ್ಪಾದನೆಯು ನಿರಂತರವಾಗಿ ನವೀಕರಿಸಲ್ಪಡುವ ಕೈಗಾರಿಕಾ ವ್ಯವಸ್ಥೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರಂತರ ಹೂಡಿಕೆ ಮತ್ತು ನಾವೀನ್ಯತೆಯನ್ನು ಆಧರಿಸಿದೆ” ಎಂದು ಯು ಜಿಂಗ್ ಹೇಳಿದ್ದಾರೆ.

“ಚೀನಾ ಆರ್ಥಿಕ ಜಾಗತೀಕರಣ ಮತ್ತು ಬಹುಪಕ್ಷೀಯತೆಯ ಹೊಂದಿದೆ. ವಿಶ್ವ ಆರ್ಥಿಕತೆಯ ಪಾಲುದಾರನಾಗಿದೆ. ವಾರ್ಷಿಕವಾಗಿ ಸರಾಸರಿ ಜಾಗತಿಕ ಬೆಳವಣಿಗೆಗೆ ಸುಮಾರು ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಲು ನಾವು ಪ್ರಪಂಚದ ಉಳಿದ ಭಾಗಗಳೊಂದಿಗೆ ಕೆಲಸ ಮಾಡುವುದನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮೂಲಕ ಮುಂದುವರೆಸುತ್ತೇವೆ” ಎಂದಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಚೀನಾ ಮೇಲೆ ಶೇ.32ರಷ್ಟು ಪ್ರತಿ ಸುಂಕ ವಿಧಿಸಲಾಗಿದೆ. ಭಾರತ ಪ್ರತಿ ಸುಂಕವನ್ನು ಒಪ್ಪಿಕೊಂಡು ಸುಮ್ಮನಾಗಿದೆ. ಆದರೆ, ಚೀನಾ ಸೇರಿದಂತೆ ಕೆಲ ರಾಷ್ಟ್ರಗಳು ಅಮೆರಿಕದ ವಿರುದ್ಧ ವ್ಯಾಪಾರ ಸಮರ ಸಾರಿದೆ.

‘ಪ್ರತಿಭಟನಾಕಾರರಿಗೆ ಹಣ ನೀಡಲಾಗಿದೆ..’; ಅಮೆರಿಕದ ‘ಹ್ಯಾಂಡ್ಸ್ ಆಫ್’ ಬಗ್ಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...