Homeಅಂತರಾಷ್ಟ್ರೀಯಅಮೆರಿಕದ 'ಸುಂಕ ಹೇರಿಕೆ'ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

ಅಮೆರಿಕದ ‘ಸುಂಕ ಹೇರಿಕೆ’ಯನ್ನು ಜೊತೆಯಾಗಿ ಎದುರಿಸೋಣ: ಭಾರತಕ್ಕೆ ಚೀನಾ ಕರೆ

- Advertisement -
- Advertisement -

ಅಮೆರಿಕದ ಜೊತೆಗಿನ ವ್ಯಾಪಾರ ಯುದ್ದಕ್ಕೆ ಚೀನಾ ಭಾರತದ ಬೆಂಬಲ ಕೋರಿದೆ. ಅಮೆರಿಕದ ಪ್ರತಿ ಸುಂಕ ಹೇರಿಕೆಯನ್ನು ಭಾರತ ಮತ್ತು ಚೀನಾ ಜೊತೆಯಾಗಿ ವಿರೋಧಿಸಬೇಕು ಎಂದು ಹೇಳಿದೆ.

“ಭಾರತ ಮತ್ತು ಚೀನಾ ನಡುವಿನ ವ್ಯಾಪಾರ ಸಂಬಂಧವು ಪರಸ್ಪರ ಲಾಭದಾಯಕವಾಗಿ ಮತ್ತು ಪೂರಕ ವಾತಾವರಣವನ್ನು ಹೊಂದಿದೆ. ಜಾಗತಿಕ ದಕ್ಷಿಣ ದೇಶಗಳು, ವಿಶೇಷವಾಗಿ ಅಭಿವೃದ್ದಿ ಹೊಂದುತ್ತಿರುವ ಈ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡಿರುವ ಅಮೆರಿಕದ ವಿರುದ್ದ ಜಂಟಿಯಾಗಿ ಹೋರಾಡಬೇಕಿದೆ” ಎಂದು ನವದೆಹಲಿಯಲ್ಲಿರುವ ಪೀಪಲ್ಸ್ ರಿಪಬ್ಲಿಕ್ ಆಫ್ ಚೀನಾದ ರಾಯಭಾರ ಕಚೇರಿಯ ವಕ್ತಾರೆ ಯು ಜಿಂಗ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಮೆರಿಕದ ಮೇಲೆ ವಿಧಿಸಿರುವ ಶೇಕಡ 34ರಷ್ಟು ಪ್ರತಿ ಸುಂಕವನ್ನು ಹಿಂತೆಗೆದುಕೊಳ್ಳದಿದ್ದರೆ, ಚೀನಾದ ರಫ್ತಿನ ಮೇಲೆ ಹೆಚ್ಚುವರಿಯಾಗಿ ಶೇಕಡ 50ರಷ್ಟು ಸುಂಕ ವಿಧಿಸುವುದಾಗಿ ಡೊನಾಲ್ಡ್ ಟ್ರಂಪ್ ಬೆದರಿಕೆ ಹಾಕಿದ್ದರು.

ಚೀನಾದ ಮೇಲೆ ಅಮೆರಿಕದ ಸುಂಕ ಶೇ.20ರಷ್ಟು ಮೊದಲೇ ಇತ್ತು. ಕಳೆದ ವಾರ ಡೊನಾಲ್ಡ್ ಟ್ರಂಪ್ ಶೇ.34ರಷ್ಟು ಪ್ರತಿ ಸುಂಕ ವಿಧಿಸಿದ್ದಾರೆ. ಇದರಿಂದ ಚೀನಾದ ಮೇಲಿನ ಅಮೆರಿಕದ ಸುಂಕ ಶೇ. 54ರಷ್ಟು ಆಗಿದೆ. ಇದಕ್ಕೆ ಪ್ರತಿಯಾಗಿ ಚೀನಾ ಸರ್ಕಾರ ಅಮೆರಿಕದ ಮೇಲೆ ಶೇ.34ರಷ್ಟು ಪ್ರತಿಸುಂಕ ವಿಧಿಸಿದೆ. ಅದನ್ನು ಹಿಂತೆಗೆದುಕೊಳ್ಳಲು ಅಮೆರಿಕ ಮಂಗಳವಾರದವರೆಗೆ ಗಡುವು ನೀಡಿತ್ತು. ಇಲ್ಲದಿದ್ದರೆ ಶೇ. 50ರಷ್ಟು ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ್ದ ಚೀನಾ “ನಾವು ಸುಂಕ ವಿಧಿಸಿರುವುದನ್ನು ವಾಪಸ್ ತೆಗೆದುಕೊಳ್ಳುವುದಿಲ್ಲ. ಕೊನೆವರೆಗೆ ಹೋರಾಡುತ್ತೇವೆ” ಎಂದಿತ್ತು. ಚೀನಾ ತನ್ನ ನಿರ್ಧಾರದಿಂದ ಹಿಂದೆ ಸರಿಯದ ಹಿನ್ನೆಲೆ ಅಮೆರಿಕ ಬುಧವಾರದಿಂದಲೇ ಹೆಚ್ಚುವರಿ ಶೇ. 50ರಷ್ಟು ಸುಂಕ ವಿಧಿಸಿದೆ ಎಂದು ವರದಿಯಾಗಿದೆ. ಇದರಿಂದ ಚೀನಾ ಮೇಲಿನ ಅಮೆರಿಕದ ಸುಂಕ 20%+34%+50%=104% ಆಗಿದೆ.

“ಸ್ಥಿರ ಬೆಳವಣಿಗೆಯನ್ನು ಖಾತ್ರಿಪಡಿಸುವ ಮತ್ತು ಸಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡುವ ವ್ಯವಸ್ಥೆಯಿಂದ ಚೀನಾದ ಆರ್ಥಿಕತೆಯು ಬೆಂಬಲಿತವಾಗಿದೆ. ಚೀನಾದ ಉತ್ಪಾದನೆಯು ನಿರಂತರವಾಗಿ ನವೀಕರಿಸಲ್ಪಡುವ ಕೈಗಾರಿಕಾ ವ್ಯವಸ್ಥೆ, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರಂತರ ಹೂಡಿಕೆ ಮತ್ತು ನಾವೀನ್ಯತೆಯನ್ನು ಆಧರಿಸಿದೆ” ಎಂದು ಯು ಜಿಂಗ್ ಹೇಳಿದ್ದಾರೆ.

“ಚೀನಾ ಆರ್ಥಿಕ ಜಾಗತೀಕರಣ ಮತ್ತು ಬಹುಪಕ್ಷೀಯತೆಯ ಹೊಂದಿದೆ. ವಿಶ್ವ ಆರ್ಥಿಕತೆಯ ಪಾಲುದಾರನಾಗಿದೆ. ವಾರ್ಷಿಕವಾಗಿ ಸರಾಸರಿ ಜಾಗತಿಕ ಬೆಳವಣಿಗೆಗೆ ಸುಮಾರು ಶೇ.30ರಷ್ಟು ಕೊಡುಗೆ ನೀಡುತ್ತಿದೆ. ಬಹುಪಕ್ಷೀಯ ವ್ಯಾಪಾರ ವ್ಯವಸ್ಥೆಯನ್ನು ರಕ್ಷಿಸಲು ನಾವು ಪ್ರಪಂಚದ ಉಳಿದ ಭಾಗಗಳೊಂದಿಗೆ ಕೆಲಸ ಮಾಡುವುದನ್ನು ವಿಶ್ವ ವ್ಯಾಪಾರ ಸಂಸ್ಥೆ (ಡಬ್ಲ್ಯುಟಿಒ) ಮೂಲಕ ಮುಂದುವರೆಸುತ್ತೇವೆ” ಎಂದಿದ್ದಾರೆ.

ಭಾರತ ಸೇರಿದಂತೆ ವಿವಿಧ ದೇಶಗಳಿಂದ ಅಮೆರಿಕಕ್ಕೆ ಆಮದಾಗುವ ಉತ್ಪನ್ನಗಳ ಮೇಲೆ ಡೊನಾಲ್ಡ್ ಟ್ರಂಪ್ ಸರ್ಕಾರ ಏಪ್ರಿಲ್ 2 ಬುಧವಾರ (ಭಾರತೀಯ ಕಾಲಮಾನ ಏಪ್ರಿಲ್ 3 ರಾತ್ರಿ 2 ಗಂಟೆ ಸುಮಾರಿಗೆ) ಪ್ರತಿ ಸುಂಕ (Reciprocal tariffs)ಘೋಷಣೆ ಮಾಡಿದೆ.

ಭಾರತದ ಉತ್ಪನ್ನಗಳ ಮೇಲೆ ಶೇಕಡ 26ರಷ್ಟು ಪ್ರತಿ ಸುಂಕ ಹೇರಲಾಗಿದೆ. “ಭಾರತ ಅಮೆರಿಕದ ಉತ್ಪನ್ನಗಳ ಮೇಲೆ ಶೇಕಡ 52ರಷ್ಟು ಸುಂಕ ವಿಧಿಸುತ್ತಿದೆ. ನಾವು ಶೇಕಡ 26ರಷ್ಟು ವಿನಾಯಿತಿಯೊಂದಿಗೆ ಶೇಕಡ 26ರಷ್ಟು ಮಾತ್ರ ಪ್ರತಿ ಸುಂಕ ವಿಧಿಸುತ್ತಿದ್ದೇವೆ ಎಂದು ಟ್ರಂಪ್ ಹೇಳಿದ್ದಾರೆ.

ಚೀನಾ ಮೇಲೆ ಶೇ.32ರಷ್ಟು ಪ್ರತಿ ಸುಂಕ ವಿಧಿಸಲಾಗಿದೆ. ಭಾರತ ಪ್ರತಿ ಸುಂಕವನ್ನು ಒಪ್ಪಿಕೊಂಡು ಸುಮ್ಮನಾಗಿದೆ. ಆದರೆ, ಚೀನಾ ಸೇರಿದಂತೆ ಕೆಲ ರಾಷ್ಟ್ರಗಳು ಅಮೆರಿಕದ ವಿರುದ್ಧ ವ್ಯಾಪಾರ ಸಮರ ಸಾರಿದೆ.

‘ಪ್ರತಿಭಟನಾಕಾರರಿಗೆ ಹಣ ನೀಡಲಾಗಿದೆ..’; ಅಮೆರಿಕದ ‘ಹ್ಯಾಂಡ್ಸ್ ಆಫ್’ ಬಗ್ಗೆ ಎಲೋನ್ ಮಸ್ಕ್ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...