Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...