Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...