Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...