Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...