Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...