Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...