Homeಅಂತರಾಷ್ಟ್ರೀಯಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಚೆಂಗ್ಡುವಿನ ಅಮೇರಿಕಾದ ರಾಯಭಾರಿಯ ಕಛೇರಿ ಮುಚ್ಚಿಸಿದ ಚೀನಾ!

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ.

- Advertisement -
- Advertisement -

ಚೀನಾದ ಚೆಂಗ್ಡುನಲ್ಲಿರುವ ಅಮೇರಿಕಾದ ರಾಯಭಾರ ಕಛೇರಿಯನ್ನು ಸೋಮವಾರ ಬೆಳಿಗ್ಗೆ ಮುಚ್ಚಲಾಗಿದ್ದು, ಅಮೆರಿಕಾ ಧ್ವಜವನ್ನು ಕೆಳಕ್ಕೆ ಇಳಿಸಲಾಯಿತು ಎಂದು ಎಪಿ ವರದಿ ಮಾಡಿದೆ.

ಬೀಜಿಂಗ್ ಅಮೇರಿಕಾ ಅಧಿಕಾರಿಗಳಿಗೆ 72 ಗಂಟೆಗಳ ಒಳಗೆ ತನ್ನ ಆವರಣವನ್ನು ಖಾಲಿ ಮಾಡುವಂತೆ ಆದೇಶಿಸಿದ ನಂತರ ಇದು ಸಂಭವಿಸಿದೆ. ಟೆಕ್ಸಾಸ್‌ನ ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿಸಿದ ಅಮೆರಿಕದ ಆದೇಶಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ.

ಅಮೆರಿಕದ ಧ್ವಜವನ್ನು ಸ್ಥಳೀಯ ಸಮಯ ಸೋಮವಾರ ಬೆಳಿಗ್ಗೆ 6.24 ಕ್ಕೆ (ಭಾರತೀಯ ಪ್ರಮಾಣಿತ ಸಮಯ ಬೆಳಿಗ್ಗೆ 3.54) ಇಳಿಸಲಾಯಿತು.

ಅಮೆರಿಕದ ಅಧಿಕಾರಿಗಳಿಗೆ ಹೊರಹೋಗುವಂತೆ ಬೀಜಿಂಗ್ ಆದೇಶ ಹೊರಡಿಸಿದ ಕೂಡಲೇ ಕಛೇರಿಯ ಹೊರಗೆ ಹಬ್ಬದ ವಾತಾವರಣವಿತ್ತು. ಫೋಟೋಗಳು, ವೀಡಿಯೊಗಳು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳಲು ಜನರು ಚೀನಾದ ದೂರದ ಸ್ಥಳಗಳಿಂದ ಬಂದಿದ್ದರು.

ಕಛೇರಿ ಬಳಿಯ ಐಸ್ ಜೆಲ್ಲಿ ಸ್ಟಾಲ್ ಮಾಲೀಕರೊಬ್ಬರು ಮಾರಾಟ ದ್ವಿಗುಣಗೊಂಡಿದೆ ಎಂದು ಹೇಳಿದರು. ನಾನು ಈಗ ಸುಮಾರು 300 ಬೌಲ್ ಐಸ್ ಜೆಲ್ಲಿಯನ್ನು ಮಾರಾಟ ಮಾಡಬಹುದು ಎಂದು ಟ್ಯಾಂಗ್ ಹೇಳಿದರು. ಜನರು ಈ ಘಟನೆಯ ಭಾಗವಾಗಲು ಕ್ಸಿಯಾನ್ [ವಾಯುವ್ಯದಲ್ಲಿ] ಅಥವಾ ಹೈನಾನ್ [ಚೀನಾದ ದಕ್ಷಿಣದ ದ್ವೀಪ] ದಿಂದ ಬಂದಿದ್ದಾರೆ.

ವಾಷಿಂಗ್ಟನ್ ಮತ್ತು ಬೀಜಿಂಗ್ ಕಳೆದ ಕೆಲವು ವರ್ಷಗಳಿಂದ ‘ವ್ಯಾಪಾರ ಯುದ್ಧದಲ್ಲಿ’ ತೊಡಗಿವೆ. ಕೊರೊನಾ ಸಾಂಕ್ರಾಮಿಕದ ಮಧ್ಯೆ ಅಮೆರಿಕ ಮತ್ತು ಚೀನಾ ನಡುವಿನ ಸಂಬಂಧ ಹದಗೆಡುತ್ತಲೇ ಇದೆ. ಏಕೆಂದರೆ ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವೈರಸ್ ಹರಡಲು ಬೀಜಿಂಗ್ ಕಾರಣ ಎಂದು ಆರೋಪಿಸಿದ್ದಾರೆ. ಅರೆ ಸ್ವಾಯತ್ತ ಹಾಂಕಾಂಗ್‌ನಲ್ಲಿ ಕಠಿಣ ನಿಯಂತ್ರಣಗಳನ್ನು ಜಾರಿಗೆ ತರಲು ಬೀಜಿಂಗ್ ನಡೆಸುತ್ತಿರುವ ಕ್ರಮದ ಬಗ್ಗೆ ಯುಎಸ್ ಮತ್ತು ಚೀನಾ ಕೂಡ ಘರ್ಷಣೆ ನಡೆಸಿವೆ.

ಜುಲೈ 24 ರಂದು ಚೀನಾ, ಚೆಂಗ್ಡು ನಲ್ಲಿರುವ ರಾಯಭಾರ ಕಛೇರಿಯನ್ನು ಮುಚ್ಚುವುದು ಅಗತ್ಯ ಎಂದು ಹೇಳಿದೆ. “ಚೀನೀ-ಯುಎಸ್ ಸಂಬಂಧಗಳಲ್ಲಿನ ಪ್ರಸ್ತುತ ಪರಿಸ್ಥಿತಿ ನೋಡಲು ಇಚ್ಛೆಯಿಲ್ಲ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. “ಈ ಎಲ್ಲದಕ್ಕೂ ಅಮೇರಿಕಾ ಕಾರಣವಾಗಿದೆ. ಅಮೇರಿಕಾ ತನ್ನ ತಪ್ಪು ನಿರ್ಧಾರವನ್ನು [ಹೂಸ್ಟನ್ ಕಛೇರಿಯನ್ನು ಮುಚ್ಚಿದ] ತಕ್ಷಣ ಹಿಂತೆಗೆದುಕೊಳ್ಳುವಂತೆ ನಾವು ಮತ್ತೊಮ್ಮೆ ಒತ್ತಾಯಿಸುತ್ತೇವೆ. ದ್ವಿಪಕ್ಷೀಯ ಸಂಬಂಧವನ್ನು ಮತ್ತೆ ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು ಅದು ತಿಳಿಸಿದೆ.

ಅಮೆರಿಕಾದ ಬೌದ್ಧಿಕ ಆಸ್ತಿ ಮತ್ತು ಮಾಹಿತಿಯನ್ನು ರಕ್ಷಿಸಲು ಹೂಸ್ಟನ್‌ನಲ್ಲಿರುವ ಚೀನೀ ರಾಯಭಾರ ಕಛೇರಿಯನ್ನು ಮುಚ್ಚಿರುವುದಾಗಿ ಅಲ್ಲಿನ ಸರ್ಕಾರ ಹೇಳಿದ್ದು, ಈ ಕಟ್ಟಡವನ್ನು ಟೆಕ್ಸಾಸ್‌ನ ಸೌಲಭ್ಯಗಳಿಂದ ಡೇಟಾವನ್ನು ಕದಿಯಲು ಪ್ರಯತ್ನಿಸಿದ “ಗೂಢಾಚಾರರ ಗೂಡು” ಎಂದು ಕರೆದಿದೆ.


ಇದನ್ನೂ ಓದಿ: ಭಾರತದ ಕೊರೊನಾ ಸಾವಿನ ಪ್ರಮಾಣ ವಿಶ್ವಕ್ಕಿಂತ ಕಡಿಮೆ; 8.8 ಲಕ್ಷ ಸೋಂಕಿತರು ಗುಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...