Homeಅಂತರಾಷ್ಟ್ರೀಯಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಗಣನೀಯವಾಗಿ ಹೆಚ್ಚಿಸಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಉಪಗ್ರಹ ಚಿತ್ರಗಳು ಹಾಗೂ ಭಾರತದ ಸ್ನೇಹಿತ ದೇಶಗಳು ಸಂಗ್ರಹಿಸಿದ ಚಿತ್ರಗಳಲ್ಲಿ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಚೀನಾವು ಭಾರಿ ಸಂಖ್ಯೆಯ ಸೈನ್ಯವನ್ನು ನೇಮಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ದೇಶವು ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಅದರಲ್ಲೂ ವಿಶೇಷವಾಗಿ ಅಕ್ಸಾಯ್ ಚಿನ್ ಪ್ರದೇಶದಲ್ಲಿ ಸೈನಿಕರ ಪ್ರಮಾಣವನ್ನು ಗಣನೀಯ ಹೆಚ್ಚಿಸಿರುವುದು ಭಾರತೀಯ ಸೈನ್ಯವೂ ಜಾಗರೂಕತೆಯಿಂದ ಇರುವಂತೆ ಮಾಡಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ ಚೀನಾ ಸೈನ್ಯವು ದೀರ್ಘ ಮತ್ತು ಕಠಿಣ ಚಳಿಗಾಲಕ್ಕೆ ತಯಾರಾಗುತ್ತಿದೆ ಎನ್ನಲಾಗಿದೆ. ಹೆಲಿಪ್ಯಾಡ್‌ಗಳನ್ನು ರಚಿಸಲಾಗಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎಂದು ಎಡೆಟ್ರೆಸ್ಪಾ ಎಂಬ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿದೆ.

ಜುಲೈ 21 ರಂದು ಟಿಬೆಟ್‌ನ ಶಿಕ್ವಾನ್ಹೆಯಿಂದ ಪಿಎಲ್‌ಎ ನಿರ್ಮಾಣವನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಪೋಸ್ಟ್ ಮಾಡಿ, ಲಡಾಖ್‌ನ ಎಲ್‌ಎಸಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳ ಪೋಷಕ ಪಾತ್ರದ ಭಾಗವೆಂದು ಶಂಕಿಸಲಾಗಿದೆ” ಎಂದು ಎಡೆಟ್ರೆಸ್ಫಾ ಹೇಳಿದೆ.

ಚೀನಾ ಸೈನ್ಯದ ನಿರ್ಮಾಣ ಕಾರ್ಯವು ನಡೆಯುತ್ತಿರುವುದು ನಿಜ ಎಂದು ಮೂಲಗಳು ದೃಢಪಡಿಸಿದೆ, ಅಲ್ಲಿ ಕನಿಷ್ಠ ಸುಮಾರು 5,000 ಸೈನಿಕರು ಮತ್ತು ಉಪಕರಣಗಳ ಇವೆ ಎಂದು ನಂಬಲಾಗಿದೆ. ಈ ಪ್ರದೇಶದಲ್ಲಿ ಹೆಲಿಪ್ಯಾಡ್‌ಗಳು ಸಹ ಕಂಡು ಬಂದಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ.

ಈ ಹಿಂದೆ ಸಂಘರ್ಷ ನಡೆದ ತಾಣಗಳಲ್ಲಿ ಒಂದು ಮಟ್ಟದ ಶಾಂತಿ ಸ್ಥಾಪಿಸಲಾಗಿದೆಯಾದರೂ, ಚೀನಾ ಸೇನೆ ಅದರ ಹಿಂಭಾಗದ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಬಲಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ಕೂಡ ಚಳಿಗಾಲಕ್ಕೆ ಭರದಿಂದ ಸಜ್ಜಾಗುತ್ತಿದೆ. ಎಲ್‌ಎಸಿಯ ಉದ್ದಕ್ಕೂ ಅನೇಕ ಸ್ಥಳಗಳಲ್ಲಿ ನಿಯೋಜಿಸಲಾಗಿರುವ 30,000 ಕ್ಕೂ ಹೆಚ್ಚು ಹೆಚ್ಚುವರಿ ಸೈನಿಕರಿಗೆ ಸಮರ್ಪಕ ಪಡಿತರ ಹಾಗೂ ತಡೆಸಾಧನಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.


ಓದಿ: ದೇಶಭಕ್ತ ಲಡಾಖ್‌ ಜನರು ಮಾತನಾಡುತ್ತಿದ್ದಾರೆ; ಆ ಮಾತುಗಳನ್ನು ಕೇಳಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...