Homeಅಂತರಾಷ್ಟ್ರೀಯಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಗಣನೀಯವಾಗಿ ಹೆಚ್ಚಿಸಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಉಪಗ್ರಹ ಚಿತ್ರಗಳು ಹಾಗೂ ಭಾರತದ ಸ್ನೇಹಿತ ದೇಶಗಳು ಸಂಗ್ರಹಿಸಿದ ಚಿತ್ರಗಳಲ್ಲಿ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಚೀನಾವು ಭಾರಿ ಸಂಖ್ಯೆಯ ಸೈನ್ಯವನ್ನು ನೇಮಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ದೇಶವು ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಅದರಲ್ಲೂ ವಿಶೇಷವಾಗಿ ಅಕ್ಸಾಯ್ ಚಿನ್ ಪ್ರದೇಶದಲ್ಲಿ ಸೈನಿಕರ ಪ್ರಮಾಣವನ್ನು ಗಣನೀಯ ಹೆಚ್ಚಿಸಿರುವುದು ಭಾರತೀಯ ಸೈನ್ಯವೂ ಜಾಗರೂಕತೆಯಿಂದ ಇರುವಂತೆ ಮಾಡಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ ಚೀನಾ ಸೈನ್ಯವು ದೀರ್ಘ ಮತ್ತು ಕಠಿಣ ಚಳಿಗಾಲಕ್ಕೆ ತಯಾರಾಗುತ್ತಿದೆ ಎನ್ನಲಾಗಿದೆ. ಹೆಲಿಪ್ಯಾಡ್‌ಗಳನ್ನು ರಚಿಸಲಾಗಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎಂದು ಎಡೆಟ್ರೆಸ್ಪಾ ಎಂಬ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿದೆ.

ಜುಲೈ 21 ರಂದು ಟಿಬೆಟ್‌ನ ಶಿಕ್ವಾನ್ಹೆಯಿಂದ ಪಿಎಲ್‌ಎ ನಿರ್ಮಾಣವನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಪೋಸ್ಟ್ ಮಾಡಿ, ಲಡಾಖ್‌ನ ಎಲ್‌ಎಸಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳ ಪೋಷಕ ಪಾತ್ರದ ಭಾಗವೆಂದು ಶಂಕಿಸಲಾಗಿದೆ” ಎಂದು ಎಡೆಟ್ರೆಸ್ಫಾ ಹೇಳಿದೆ.

ಚೀನಾ ಸೈನ್ಯದ ನಿರ್ಮಾಣ ಕಾರ್ಯವು ನಡೆಯುತ್ತಿರುವುದು ನಿಜ ಎಂದು ಮೂಲಗಳು ದೃಢಪಡಿಸಿದೆ, ಅಲ್ಲಿ ಕನಿಷ್ಠ ಸುಮಾರು 5,000 ಸೈನಿಕರು ಮತ್ತು ಉಪಕರಣಗಳ ಇವೆ ಎಂದು ನಂಬಲಾಗಿದೆ. ಈ ಪ್ರದೇಶದಲ್ಲಿ ಹೆಲಿಪ್ಯಾಡ್‌ಗಳು ಸಹ ಕಂಡು ಬಂದಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ.

ಈ ಹಿಂದೆ ಸಂಘರ್ಷ ನಡೆದ ತಾಣಗಳಲ್ಲಿ ಒಂದು ಮಟ್ಟದ ಶಾಂತಿ ಸ್ಥಾಪಿಸಲಾಗಿದೆಯಾದರೂ, ಚೀನಾ ಸೇನೆ ಅದರ ಹಿಂಭಾಗದ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಬಲಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ಕೂಡ ಚಳಿಗಾಲಕ್ಕೆ ಭರದಿಂದ ಸಜ್ಜಾಗುತ್ತಿದೆ. ಎಲ್‌ಎಸಿಯ ಉದ್ದಕ್ಕೂ ಅನೇಕ ಸ್ಥಳಗಳಲ್ಲಿ ನಿಯೋಜಿಸಲಾಗಿರುವ 30,000 ಕ್ಕೂ ಹೆಚ್ಚು ಹೆಚ್ಚುವರಿ ಸೈನಿಕರಿಗೆ ಸಮರ್ಪಕ ಪಡಿತರ ಹಾಗೂ ತಡೆಸಾಧನಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.


ಓದಿ: ದೇಶಭಕ್ತ ಲಡಾಖ್‌ ಜನರು ಮಾತನಾಡುತ್ತಿದ್ದಾರೆ; ಆ ಮಾತುಗಳನ್ನು ಕೇಳಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...