Homeಅಂತರಾಷ್ಟ್ರೀಯಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ಅಕ್ಸಯ್‌ಚಿನ್‌, ಟಿಬೆಟ್‌ನಲ್ಲಿ ಮಿಲಿಟರಿ ನಿರ್ಮಾಣ ಮುಂದುವರೆಸಿದ ಚೀನಾ

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಗಣನೀಯವಾಗಿ ಹೆಚ್ಚಿಸಿದೆ ಎನ್ನಲಾಗಿದೆ.

- Advertisement -
- Advertisement -

ಭಾರತೀಯ ಉಪಗ್ರಹ ಚಿತ್ರಗಳು ಹಾಗೂ ಭಾರತದ ಸ್ನೇಹಿತ ದೇಶಗಳು ಸಂಗ್ರಹಿಸಿದ ಚಿತ್ರಗಳಲ್ಲಿ ಟಿಬೆಟ್ ಸ್ವಾಯತ್ತ ಪ್ರದೇಶದಲ್ಲಿ ಚೀನಾವು ಭಾರಿ ಸಂಖ್ಯೆಯ ಸೈನ್ಯವನ್ನು ನೇಮಿಸಿದೆ ಎಂದು ದಿ ಪ್ರಿಂಟ್ ವರದಿ ಮಾಡಿದೆ.

ರಕ್ಷಣಾ ಹಾಗೂ ಭದ್ರತಾ ಮೂಲಗಳ ಪ್ರಕಾರ ಚೀನಾ ದೇಶವು ಹೆಚ್ಚುವರಿಯಾಗಿ ಸೈನಿಕರು ಮತ್ತು ಸಲಕರಣೆಗಳನ್ನು ಅದರಲ್ಲೂ ವಿಶೇಷವಾಗಿ ಅಕ್ಸಾಯ್ ಚಿನ್ ಪ್ರದೇಶದಲ್ಲಿ ಸೈನಿಕರ ಪ್ರಮಾಣವನ್ನು ಗಣನೀಯ ಹೆಚ್ಚಿಸಿರುವುದು ಭಾರತೀಯ ಸೈನ್ಯವೂ ಜಾಗರೂಕತೆಯಿಂದ ಇರುವಂತೆ ಮಾಡಿದೆ ಎನ್ನಲಾಗಿದೆ.

ಮಾಹಿತಿಯ ಪ್ರಕಾರ ಚೀನಾ ಸೈನ್ಯವು ದೀರ್ಘ ಮತ್ತು ಕಠಿಣ ಚಳಿಗಾಲಕ್ಕೆ ತಯಾರಾಗುತ್ತಿದೆ ಎನ್ನಲಾಗಿದೆ. ಹೆಲಿಪ್ಯಾಡ್‌ಗಳನ್ನು ರಚಿಸಲಾಗಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎಂದು ಎಡೆಟ್ರೆಸ್ಪಾ ಎಂಬ ಟ್ವಿಟ್ಟರ್‌ ಖಾತೆ ಟ್ವೀಟ್ ಮಾಡಿದೆ.

ಜುಲೈ 21 ರಂದು ಟಿಬೆಟ್‌ನ ಶಿಕ್ವಾನ್ಹೆಯಿಂದ ಪಿಎಲ್‌ಎ ನಿರ್ಮಾಣವನ್ನು ತೋರಿಸುವ ಉಪಗ್ರಹ ಚಿತ್ರಗಳನ್ನು ಪೋಸ್ಟ್ ಮಾಡಿ, ಲಡಾಖ್‌ನ ಎಲ್‌ಎಸಿಯಲ್ಲಿ ನಡೆಯುತ್ತಿರುವ ಉದ್ವಿಗ್ನತೆಗಳ ಪೋಷಕ ಪಾತ್ರದ ಭಾಗವೆಂದು ಶಂಕಿಸಲಾಗಿದೆ” ಎಂದು ಎಡೆಟ್ರೆಸ್ಫಾ ಹೇಳಿದೆ.

ಚೀನಾ ಸೈನ್ಯದ ನಿರ್ಮಾಣ ಕಾರ್ಯವು ನಡೆಯುತ್ತಿರುವುದು ನಿಜ ಎಂದು ಮೂಲಗಳು ದೃಢಪಡಿಸಿದೆ, ಅಲ್ಲಿ ಕನಿಷ್ಠ ಸುಮಾರು 5,000 ಸೈನಿಕರು ಮತ್ತು ಉಪಕರಣಗಳ ಇವೆ ಎಂದು ನಂಬಲಾಗಿದೆ. ಈ ಪ್ರದೇಶದಲ್ಲಿ ಹೆಲಿಪ್ಯಾಡ್‌ಗಳು ಸಹ ಕಂಡು ಬಂದಿದ್ದು, ಹೊಸ ನಿರ್ಮಾಣ ನಡೆಯುತ್ತಿದೆ ಎನ್ನಲಾಗಿದೆ.

ಈ ಹಿಂದೆ ಸಂಘರ್ಷ ನಡೆದ ತಾಣಗಳಲ್ಲಿ ಒಂದು ಮಟ್ಟದ ಶಾಂತಿ ಸ್ಥಾಪಿಸಲಾಗಿದೆಯಾದರೂ, ಚೀನಾ ಸೇನೆ ಅದರ ಹಿಂಭಾಗದ ಪ್ರದೇಶಗಳಲ್ಲಿ ತನ್ನ ಸ್ಥಾನಗಳನ್ನು ಬಲಪಡಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಭಾರತೀಯ ಸೇನೆ ಕೂಡ ಚಳಿಗಾಲಕ್ಕೆ ಭರದಿಂದ ಸಜ್ಜಾಗುತ್ತಿದೆ. ಎಲ್‌ಎಸಿಯ ಉದ್ದಕ್ಕೂ ಅನೇಕ ಸ್ಥಳಗಳಲ್ಲಿ ನಿಯೋಜಿಸಲಾಗಿರುವ 30,000 ಕ್ಕೂ ಹೆಚ್ಚು ಹೆಚ್ಚುವರಿ ಸೈನಿಕರಿಗೆ ಸಮರ್ಪಕ ಪಡಿತರ ಹಾಗೂ ತಡೆಸಾಧನಗಳನ್ನು ಖಚಿತಪಡಿಸಿಕೊಳ್ಳಲಾಗುತ್ತಿದೆ.


ಓದಿ: ದೇಶಭಕ್ತ ಲಡಾಖ್‌ ಜನರು ಮಾತನಾಡುತ್ತಿದ್ದಾರೆ; ಆ ಮಾತುಗಳನ್ನು ಕೇಳಿ: ರಾಹುಲ್ ಗಾಂಧಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...