HomeUncategorizedಹಲವು ಪ್ರತಿಭಟನೆಗಳ ನಂತರ ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ಚೀನಾ

ಹಲವು ಪ್ರತಿಭಟನೆಗಳ ನಂತರ ಲಾಕ್‌ಡೌನ್ ನಿಯಮಗಳನ್ನು ಸಡಿಲಿಸಿದ ಚೀನಾ

- Advertisement -
- Advertisement -

ಚೀನಾ ದೇಶದ ನಗರಗಳಲ್ಲಿ ಕೋವಿಡ್ ಲಾಕ್‌ಡೌನ್ ವಿರುದ್ಧ ನಡೆದ ಹಲವು ನಾಗರಿಕ ಪ್ರತಿಭಟನೆಗಳ ನಂತರ, ಕೆಲವು ನಗರಗಳಲ್ಲಿ ಲಾಕ್‌ಡೌನ್  ನಿರ್ಬಂಧಗಳನ್ನು ಚೀನಾ ಸರ್ಕಾರ ಸಡಿಲಿಸಿರುವ ಬಗ್ಗೆ ಬ್ರಿಟನ್-ಯುಎಸ್‌ಎಯ ಇಂಗ್ಲಿಷ್ ಮಾಧ್ಯಮಗಳು ವರದಿ ಮಾಡಿವೆ. ಆದರೆ ‘ಜೀರೋ ಕೋವಿಡ್ ನೀತಿ’ಯ ಬಗ್ಗೆ ಚೀನಾ ಸರ್ಕಾರ ಧೃಢವಾಗಿದ್ದು, ಹಲವೆಡೆ ಪ್ರತಿಭಟನಕಾರರ ಮೇಲೆ ತೀವ್ರ ಕ್ರಮಗಳನ್ನು ತೆಗೆದುಕೊಳ್ಳುತ್ತಿರುವ ಬಗ್ಗೆ ವರದಿಗಳಿವೆ.

ಬೀಜಿಂಗ್, ಶಾಂಗೈ, ಜೆಂಗ್‌ಜೌ ಮುಂತಾದ ನಗರಗಳಲ್ಲಿ ಕೋವಿಡ್ ನಿರ್ಬಂಧಗಳ ವಿರುದ್ಧ ಬೃಹತ್ ಪ್ರತಿಭಟನೆಗಳನ್ನು ನಡೆಸಿದ ಬಗ್ಗೆ ಫೈನಾನ್ಷಿಯಲ್ ಟೈಮ್ಸ್, ಗಾರ್ಡಿಯನ್ ಮುಂತಾದ ಸುದ್ದಿ ಮಾಧ್ಯಗಳು ವರದಿ ಮಾಡಿದ್ದವು. ಈ ಪ್ರತಿಭಟನೆಗಳ ಮೇಲೆ ಚೀನಾ ಪೊಲೀಸರು ದಮನಕಾರಿ ಕ್ರಮಗಳನ್ನು ತೆಗೆದುಕೊಂಡಿರುವುದಲ್ಲದೆ, ಹಲವು ಪ್ರತಿಭಟನಕಾರರನ್ನು ಬಂಧಿಸುತ್ತಿರುವ ವಿಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಹಲವು ಪ್ರತಿಭಟನೆಗಳಲ್ಲಿ ಖಾಲಿ ಹಾಳೆಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೀನಾ ಸರ್ಕಾರ ತನ್ನ ನಾಗರಿಕರ ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲೆ ಹೇರುವ ತೀವ್ರ ಸೆನ್ಸಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿದಲು ಪ್ರತಿಭಟನಕಾರರು ಖಾಲಿ ಹಾಳೆಗಳನ್ನು ಪ್ರದರ್ಶಿಸುತ್ತಿದ್ದಾರೆ ಎನ್ನಲಾಗಿದೆ.

ಪ್ರತಿಭಟನಕಾರರನ್ನು ದಮನಿಸಲಾಗುತ್ತಿರುವುದರ ವಿರುದ್ಧ ಹಲವು ದೇಶಗಳಲ್ಲಿ ಖಂಡನೆ ವ್ಯಕ್ತವಾಗಿದೆ. ಕೆನಡಾ ಮತ್ತು ಯುಎಸ್‌ಎ ಶಾಂತಿಯುತ ಪ್ರತಿಭಟನೆಗಳಿಗೆ ಅವಕಾಶ ಮಾಡಿಕೊಂಡಬೇಕೆಂದು ಚೀನಾವನ್ನು ಆಗ್ರಹಿಸಿವೆ.

ಮಂಗಳವಾರ ಮತ್ತು ಬುಧವಾರ ಚೀನಾದಲ್ಲಿ ಕ್ರಮವಾಗಿ 37,828 ಮತ್ತು 36,601 ವ್ಯಕ್ತಿಗಳು ಕೋವಿಡ್ ಸೋಂಕಿಗೆ ತುತ್ತಾಗಿದ್ದನ್ನು ಚೀನಾ ಪ್ರಭುತ್ವದ ಮಾಧ್ಯಮ ವರದಿಮಾಡಿದೆ. ಆದರೂ, ‘ಹೈ ರಿಸ್ಕ್’ ಎಂದು ಪರಿಗಣಿಸಲಾಗಿದ್ದ ಶಾಂಗೈನಲ್ಲಿ ಪ್ರತಿಭಟನೆಗಳನ್ನು ತಣ್ಣಗಾಗಿಸುವ ಸಲುವಾಗಿ ಲಾಕ್‌ಡೌನ್ ನಿರ್ಬಂಧಗಳನ್ನು ಸಡಿಲಗೊಳಿಸಲಾಗಿದೆ. ಗೌಂಗ್‌ಝೌನ ಸುಮಾರು 11 ಜಿಲ್ಲೆಗಳಲ್ಲಿ ಕೂಡ ಇದೇ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವರದಿಯಾಗಿದೆ.

ಚೀನಾದ ವೈಸ್ ಪ್ರೀಮಿಯರ್ ಸನ್ ಚುನ್ಲಾನ್, ಒಮಿಕ್ರಾನ್ ಕೊರೊನಾ ವೈರಸ್ ಹರಡುತ್ತಿರುವ ಸಮಯದಲ್ಲಿ ಚೀನಾ ಕೋವಿಡ್ ತಡೆಗಟ್ಟುವಿಕೆಯಲ್ಲಿ ಹೊಸ ಹಂತಕ್ಕೆ ಬಂದಿರುವುದಾಗಿ ತಿಳಿಸಿದ್ದು, ಈ ನಿರ್ಬಂಧಗಳನ್ನು ಸಡಿಸಿರುವ ಬಗ್ಗೆ ಘೋಷಣೆ ಮಾಡಿದ್ದಾರೆ.

ಚೀನಾದ ಕಮ್ಯುನಿಸ್ಟ್ ಪಕ್ಷದ ಪ್ರಮುಖ ಮುಖಂಡ ಜಿಯಾಂಗ್ ಝೆಮಿನ್ ಅವರು ಬುಧವಾರ ಮೃತಪಟ್ಟಿದ್ದರು. ಈ ಶೋಕಾಚರಣೆಯ ಸಮಯದಲ್ಲಿ ಪ್ರತಿಭಟನೆಗಳು ಹೆಚ್ಚಬಹುದು ಎಂಬ ಕಾರಣಕ್ಕಾಗಿಯೂ ಚೀನ ನಿರ್ಬಂಧಗಳನ್ನು ಸಡಿಲಿಸುವ ಕ್ರಮಕ್ಕೆ ಮುಂದಾಗಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ದಲಿತ-ದಮನಿತರನ್ನು ಶಿಕ್ಷಣದಿಂದ ಹೊರಗಿಡುವ ಹುನ್ನಾರ: ಸ್ಕಾಲರ್‌ಶಿಪ್ ನಿಲ್ಲಿಸಿದ ಕೇಂದ್ರದ ಕ್ರಮಕ್ಕೆ AIFRTE ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...