Homeಅಂತರಾಷ್ಟ್ರೀಯ35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

- Advertisement -
- Advertisement -

ನವೆಂಬರ್‌ನಲ್ಲಿ ದಕ್ಷಿಣ ನಗರವಾದ ಝುಹೈನಲ್ಲಿ ನಡೆದ ಉದ್ದೇಶಪೂರ್ವಕ ಕಾರು ಅಪಘಾತದಲ್ಲಿ 35 ಜನರನ್ನು ಕೊಂದ ವ್ಯಕ್ತಿಯನ್ನು ಚೀನಾವು ಸೋಮವಾರ ಗಲ್ಲಿಗೇರಿಸಿದೆ.

ನವೆಂಬರ್ 11ರಂದು 62 ಹರೆಯದ ಫ್ಯಾನ್ ವೀಕಿ ಎಂಬಾತ ಕ್ರೀಡಾ ಸಂಕೀರ್ಣದ ಹೊರಗೆ ವ್ಯಾಯಾಮ ಮಾಡುತ್ತಿದ್ದ ಜನರ ಗುಂಪಿನ ಕಡೆ ಉದ್ದೇಶಪೂರ್ವಕವಾಗಿ ಸಣ್ಣ ಎಸ್‌ಯುವಿಯನ್ನು ಚಲಾಯಿಸಿದನು. ಇದು 2014ರ ನಂತರ ಚೀನಾದಲ್ಲಿ ನಡೆದ ಅತ್ಯಂತ ಕೆಟ್ಟ ಅಪರಾಧ ಪ್ರಕರಣವಾಗಿತ್ತು.

ಕಳೆದ ತಿಂಗಳು ಅವನಿಗೆ ಮರಣದಂಡನೆ ವಿಧಿಸಲಾಯಿತು, ನ್ಯಾಯಾಲಯವು ಅವನ ಯೋಚನೆಯು ಅತ್ಯಂತ ಕೆಟ್ಟದ್ದಾಗಿತ್ತು ಮತ್ತು ಅಪರಾಧದ ಸ್ವರೂಪವು ಅತ್ಯಂತ ಭೀಕರವಾಗಿತ್ತು ಎಂದು ಹೇಳಿದೆ.

ಸೋಮವಾರ ಝುಹೈ ನ್ಯಾಯಾಲಯವು ಸುಪ್ರೀಂ ಪೀಪಲ್ಸ್ ಕೋರ್ಟ್ ಹೊರಡಿಸಿದ ಮರಣದಂಡನೆ ಆದೇಶದ ಪ್ರಕಾರ ಫ್ಯಾನ್ ವೀಕಿಯುನನ್ನು ಗಲ್ಲಿಗೇರಿಸಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ತಿಳಿಸಿದೆ.

ಪುರಸಭೆಯ ಸಾರ್ವಜನಿಕ ಅಭಿಯೋಜಕರು ಕಾನೂನಿಗೆ ಅನುಸಾರವಾಗಿ (ಮರಣದಂಡನೆ) ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ಕಳುಹಿಸಿದ್ದಾರೆ ಎಂದು ಸಿಸಿಟಿವಿ ವರದಿ ಮಾಡಿದೆ.

ಫ್ಯಾನ್ ನ ದಾಳಿಯು ಚೀನಾದಲ್ಲಿ ವ್ಯಾಪಕ ಸಾರ್ವಜನಿಕ ಆಘಾತ ಮತ್ತು ಸಮಾಜದ ಸ್ಥಿತಿಯ ಬಗ್ಗೆ ಆತ್ಮಾವಲೋಕನಕ್ಕೆ ಕಾರಣವಾಗಿತ್ತು. ಸ್ವತಃ ಚಾಕುವಿನಿಂದ ಕೊಯ್ದುಕೊಂಡು ಕೋಮಾ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದರು.

ಕಳೆದ ತಿಂಗಳು ನಡೆದ ವಿಚಾರಣೆಯಲ್ಲಿ ಫ್ಯಾನ್ ಕೆಲವು ಬಲಿಪಶುಗಳ ಕುಟುಂಬಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ತಪ್ಪೊಪ್ಪಿಕೊಂಡನು ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ವಿಚ್ಛೇದನದ ನಂತರ ಆಸ್ತಿ ವಿಭಜನೆಯ ಬಗ್ಗೆ ವೈಯಕ್ತಿಕ ಹತಾಶೆ ಮತ್ತು ಅತೃಪ್ತಿಯ ಕೋಪವನ್ನು ಹೊರಹಾಕಲು ನಿರ್ಧರಿಸಿ ಈ ಕೃತ್ಯವೆಸಗಿದ್ದಾನೆ ಎಂದು ನ್ಯಾಯಾಲಯವು ಕಂಡುಕೊಂಡಿತ್ತು. ಅವನು  ಆಯ್ಕೆಮಾಡಿಕೊಂಡಿದ್ದ ಅಪರಾಧ ಕೃತ್ಯವು ವಿಶೇಷವಾಗಿ ಕ್ರೂರವಾಗಿತ್ತು ಮತ್ತು ಇದರ ಪರಿಣಾಮಗಳು ವಿಶೇಷವಾಗಿ ತೀವ್ರವಾಗಿದ್ದವು, ಸಮಾಜಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡಿತ್ತು ಎಂದು ಅದು ತೀರ್ಪು ನೀಡಿದೆ.

ಚೀನಾದಲ್ಲಿ ಸಾಮಾನ್ಯವಾಗಿ ಅನೇಕ ಪಾಶ್ಚಿಮಾತ್ಯ ದೇಶಗಳಿಗಿಂತ ಹಿಂಸಾತ್ಮಕ ಅಪರಾಧಗಳು ಅಪರೂಪ, ಆದರೆ ಕಳೆದ ವರ್ಷ ದೇಶವು ಈ ಸಾಮೂಹಿಕ ಸಾವುನೋವುಗಳ ಸರಣಿಯನ್ನು ಕಂಡಿತು. ಈ ಕಾರು ದಾಳಿಯು ಆಡಳಿತ ಕಮ್ಯುನಿಸ್ಟ್ ಪಕ್ಷದ ಕಟ್ಟುನಿಟ್ಟಾದ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ತಡೆಗಟ್ಟುವಿಕೆಯ ಖ್ಯಾತಿಯನ್ನು ಪ್ರಶ್ನಿಸಿತ್ತು.

ಇನ್ನೊಂದು ಪ್ರಕರಣದಲ್ಲಿ ನವೆಂಬರ್‌ನಲ್ಲಿ ನಡೆದ ಸಾಮೂಹಿಕ ಇರಿತದಲ್ಲಿ ಎಂಟು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ವ್ಯಕ್ತಿಗೆ ಪೂರ್ವ ಜಿಯಾಂಗ್ಸು ಪ್ರಾಂತ್ಯದ ಪ್ರತ್ಯೇಕ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು ಎಂದು ಸಿಸಿಟಿವಿ ಸೋಮವಾರ ವರದಿ ಮಾಡಿದೆ.

ವುಕ್ಸಿ ನಗರದ ವೃತ್ತಿಪರ ಶಾಲೆಯ ಮೇಲೆ ದಾಳಿ ಮಾಡಿದ 21 ವರ್ಷದ ಮಾಜಿ ವಿದ್ಯಾರ್ಥಿ ಕ್ಸು ಜಿಯಾಜಿನ್‌ನನ್ನು “ಕಾನೂನಿನ ಪ್ರಕಾರ” ಗಲ್ಲಿಗೇರಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ.

ಈತನಿಗೂ ಡಿಸೆಂಬರ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು, ಆತನ ಅಪರಾಧವು “ಅಸಾಧಾರಣ ಗಂಭೀರವಾಗಿದೆ” ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಸಿಸಿಟಿವಿ ತಿಳಿಸಿದೆ.

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...

ಉತ್ತರ ಪ್ರದೇಶ| ಪಾಕ್ ಸಂಪರ್ಕದ ಆರೋಪ; ಮಹಿಳೆ ಸೇರಿದಂತೆ 6 ಜನರ ಬಂಧನ

ಪಾಕಿಸ್ತಾನದ ದೇಶದ ಕೋಡ್‌ನಲ್ಲಿ ನೋಂದಾಯಿಸಲಾದ ವಿದೇಶಿ ಸಂಖ್ಯೆಯೊಂದಿಗೆ ಭದ್ರತಾ ಕಚೇರಿಗಳು, ತನಿಖಾ ಸಂಸ್ಥೆಗಳು ಮತ್ತು ರೈಲ್ವೆ ನಿಲ್ದಾಣಗಳಂತಹ ಸಾರ್ವಜನಿಕ ಸ್ಥಳಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಚಿತ್ರೀಕರಿಸಿ ಹಂಚಿಕೊಂಡ ಆರೋಪದ ಮೇಲೆ ಗಾಜಿಯಾಬಾದ್‌ನಲ್ಲಿ ಮಹಿಳೆ...