Homeಅಂತರಾಷ್ಟ್ರೀಯ35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

- Advertisement -
- Advertisement -

ನವೆಂಬರ್‌ನಲ್ಲಿ ದಕ್ಷಿಣ ನಗರವಾದ ಝುಹೈನಲ್ಲಿ ನಡೆದ ಉದ್ದೇಶಪೂರ್ವಕ ಕಾರು ಅಪಘಾತದಲ್ಲಿ 35 ಜನರನ್ನು ಕೊಂದ ವ್ಯಕ್ತಿಯನ್ನು ಚೀನಾವು ಸೋಮವಾರ ಗಲ್ಲಿಗೇರಿಸಿದೆ.

ನವೆಂಬರ್ 11ರಂದು 62 ಹರೆಯದ ಫ್ಯಾನ್ ವೀಕಿ ಎಂಬಾತ ಕ್ರೀಡಾ ಸಂಕೀರ್ಣದ ಹೊರಗೆ ವ್ಯಾಯಾಮ ಮಾಡುತ್ತಿದ್ದ ಜನರ ಗುಂಪಿನ ಕಡೆ ಉದ್ದೇಶಪೂರ್ವಕವಾಗಿ ಸಣ್ಣ ಎಸ್‌ಯುವಿಯನ್ನು ಚಲಾಯಿಸಿದನು. ಇದು 2014ರ ನಂತರ ಚೀನಾದಲ್ಲಿ ನಡೆದ ಅತ್ಯಂತ ಕೆಟ್ಟ ಅಪರಾಧ ಪ್ರಕರಣವಾಗಿತ್ತು.

ಕಳೆದ ತಿಂಗಳು ಅವನಿಗೆ ಮರಣದಂಡನೆ ವಿಧಿಸಲಾಯಿತು, ನ್ಯಾಯಾಲಯವು ಅವನ ಯೋಚನೆಯು ಅತ್ಯಂತ ಕೆಟ್ಟದ್ದಾಗಿತ್ತು ಮತ್ತು ಅಪರಾಧದ ಸ್ವರೂಪವು ಅತ್ಯಂತ ಭೀಕರವಾಗಿತ್ತು ಎಂದು ಹೇಳಿದೆ.

ಸೋಮವಾರ ಝುಹೈ ನ್ಯಾಯಾಲಯವು ಸುಪ್ರೀಂ ಪೀಪಲ್ಸ್ ಕೋರ್ಟ್ ಹೊರಡಿಸಿದ ಮರಣದಂಡನೆ ಆದೇಶದ ಪ್ರಕಾರ ಫ್ಯಾನ್ ವೀಕಿಯುನನ್ನು ಗಲ್ಲಿಗೇರಿಸಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ತಿಳಿಸಿದೆ.

ಪುರಸಭೆಯ ಸಾರ್ವಜನಿಕ ಅಭಿಯೋಜಕರು ಕಾನೂನಿಗೆ ಅನುಸಾರವಾಗಿ (ಮರಣದಂಡನೆ) ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ಕಳುಹಿಸಿದ್ದಾರೆ ಎಂದು ಸಿಸಿಟಿವಿ ವರದಿ ಮಾಡಿದೆ.

ಫ್ಯಾನ್ ನ ದಾಳಿಯು ಚೀನಾದಲ್ಲಿ ವ್ಯಾಪಕ ಸಾರ್ವಜನಿಕ ಆಘಾತ ಮತ್ತು ಸಮಾಜದ ಸ್ಥಿತಿಯ ಬಗ್ಗೆ ಆತ್ಮಾವಲೋಕನಕ್ಕೆ ಕಾರಣವಾಗಿತ್ತು. ಸ್ವತಃ ಚಾಕುವಿನಿಂದ ಕೊಯ್ದುಕೊಂಡು ಕೋಮಾ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದರು.

ಕಳೆದ ತಿಂಗಳು ನಡೆದ ವಿಚಾರಣೆಯಲ್ಲಿ ಫ್ಯಾನ್ ಕೆಲವು ಬಲಿಪಶುಗಳ ಕುಟುಂಬಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ತಪ್ಪೊಪ್ಪಿಕೊಂಡನು ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ವಿಚ್ಛೇದನದ ನಂತರ ಆಸ್ತಿ ವಿಭಜನೆಯ ಬಗ್ಗೆ ವೈಯಕ್ತಿಕ ಹತಾಶೆ ಮತ್ತು ಅತೃಪ್ತಿಯ ಕೋಪವನ್ನು ಹೊರಹಾಕಲು ನಿರ್ಧರಿಸಿ ಈ ಕೃತ್ಯವೆಸಗಿದ್ದಾನೆ ಎಂದು ನ್ಯಾಯಾಲಯವು ಕಂಡುಕೊಂಡಿತ್ತು. ಅವನು  ಆಯ್ಕೆಮಾಡಿಕೊಂಡಿದ್ದ ಅಪರಾಧ ಕೃತ್ಯವು ವಿಶೇಷವಾಗಿ ಕ್ರೂರವಾಗಿತ್ತು ಮತ್ತು ಇದರ ಪರಿಣಾಮಗಳು ವಿಶೇಷವಾಗಿ ತೀವ್ರವಾಗಿದ್ದವು, ಸಮಾಜಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡಿತ್ತು ಎಂದು ಅದು ತೀರ್ಪು ನೀಡಿದೆ.

ಚೀನಾದಲ್ಲಿ ಸಾಮಾನ್ಯವಾಗಿ ಅನೇಕ ಪಾಶ್ಚಿಮಾತ್ಯ ದೇಶಗಳಿಗಿಂತ ಹಿಂಸಾತ್ಮಕ ಅಪರಾಧಗಳು ಅಪರೂಪ, ಆದರೆ ಕಳೆದ ವರ್ಷ ದೇಶವು ಈ ಸಾಮೂಹಿಕ ಸಾವುನೋವುಗಳ ಸರಣಿಯನ್ನು ಕಂಡಿತು. ಈ ಕಾರು ದಾಳಿಯು ಆಡಳಿತ ಕಮ್ಯುನಿಸ್ಟ್ ಪಕ್ಷದ ಕಟ್ಟುನಿಟ್ಟಾದ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ತಡೆಗಟ್ಟುವಿಕೆಯ ಖ್ಯಾತಿಯನ್ನು ಪ್ರಶ್ನಿಸಿತ್ತು.

ಇನ್ನೊಂದು ಪ್ರಕರಣದಲ್ಲಿ ನವೆಂಬರ್‌ನಲ್ಲಿ ನಡೆದ ಸಾಮೂಹಿಕ ಇರಿತದಲ್ಲಿ ಎಂಟು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ವ್ಯಕ್ತಿಗೆ ಪೂರ್ವ ಜಿಯಾಂಗ್ಸು ಪ್ರಾಂತ್ಯದ ಪ್ರತ್ಯೇಕ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು ಎಂದು ಸಿಸಿಟಿವಿ ಸೋಮವಾರ ವರದಿ ಮಾಡಿದೆ.

ವುಕ್ಸಿ ನಗರದ ವೃತ್ತಿಪರ ಶಾಲೆಯ ಮೇಲೆ ದಾಳಿ ಮಾಡಿದ 21 ವರ್ಷದ ಮಾಜಿ ವಿದ್ಯಾರ್ಥಿ ಕ್ಸು ಜಿಯಾಜಿನ್‌ನನ್ನು “ಕಾನೂನಿನ ಪ್ರಕಾರ” ಗಲ್ಲಿಗೇರಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ.

ಈತನಿಗೂ ಡಿಸೆಂಬರ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು, ಆತನ ಅಪರಾಧವು “ಅಸಾಧಾರಣ ಗಂಭೀರವಾಗಿದೆ” ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಸಿಸಿಟಿವಿ ತಿಳಿಸಿದೆ.

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...