Homeಅಂತರಾಷ್ಟ್ರೀಯ35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

- Advertisement -
- Advertisement -

ನವೆಂಬರ್‌ನಲ್ಲಿ ದಕ್ಷಿಣ ನಗರವಾದ ಝುಹೈನಲ್ಲಿ ನಡೆದ ಉದ್ದೇಶಪೂರ್ವಕ ಕಾರು ಅಪಘಾತದಲ್ಲಿ 35 ಜನರನ್ನು ಕೊಂದ ವ್ಯಕ್ತಿಯನ್ನು ಚೀನಾವು ಸೋಮವಾರ ಗಲ್ಲಿಗೇರಿಸಿದೆ.

ನವೆಂಬರ್ 11ರಂದು 62 ಹರೆಯದ ಫ್ಯಾನ್ ವೀಕಿ ಎಂಬಾತ ಕ್ರೀಡಾ ಸಂಕೀರ್ಣದ ಹೊರಗೆ ವ್ಯಾಯಾಮ ಮಾಡುತ್ತಿದ್ದ ಜನರ ಗುಂಪಿನ ಕಡೆ ಉದ್ದೇಶಪೂರ್ವಕವಾಗಿ ಸಣ್ಣ ಎಸ್‌ಯುವಿಯನ್ನು ಚಲಾಯಿಸಿದನು. ಇದು 2014ರ ನಂತರ ಚೀನಾದಲ್ಲಿ ನಡೆದ ಅತ್ಯಂತ ಕೆಟ್ಟ ಅಪರಾಧ ಪ್ರಕರಣವಾಗಿತ್ತು.

ಕಳೆದ ತಿಂಗಳು ಅವನಿಗೆ ಮರಣದಂಡನೆ ವಿಧಿಸಲಾಯಿತು, ನ್ಯಾಯಾಲಯವು ಅವನ ಯೋಚನೆಯು ಅತ್ಯಂತ ಕೆಟ್ಟದ್ದಾಗಿತ್ತು ಮತ್ತು ಅಪರಾಧದ ಸ್ವರೂಪವು ಅತ್ಯಂತ ಭೀಕರವಾಗಿತ್ತು ಎಂದು ಹೇಳಿದೆ.

ಸೋಮವಾರ ಝುಹೈ ನ್ಯಾಯಾಲಯವು ಸುಪ್ರೀಂ ಪೀಪಲ್ಸ್ ಕೋರ್ಟ್ ಹೊರಡಿಸಿದ ಮರಣದಂಡನೆ ಆದೇಶದ ಪ್ರಕಾರ ಫ್ಯಾನ್ ವೀಕಿಯುನನ್ನು ಗಲ್ಲಿಗೇರಿಸಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ತಿಳಿಸಿದೆ.

ಪುರಸಭೆಯ ಸಾರ್ವಜನಿಕ ಅಭಿಯೋಜಕರು ಕಾನೂನಿಗೆ ಅನುಸಾರವಾಗಿ (ಮರಣದಂಡನೆ) ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ಕಳುಹಿಸಿದ್ದಾರೆ ಎಂದು ಸಿಸಿಟಿವಿ ವರದಿ ಮಾಡಿದೆ.

ಫ್ಯಾನ್ ನ ದಾಳಿಯು ಚೀನಾದಲ್ಲಿ ವ್ಯಾಪಕ ಸಾರ್ವಜನಿಕ ಆಘಾತ ಮತ್ತು ಸಮಾಜದ ಸ್ಥಿತಿಯ ಬಗ್ಗೆ ಆತ್ಮಾವಲೋಕನಕ್ಕೆ ಕಾರಣವಾಗಿತ್ತು. ಸ್ವತಃ ಚಾಕುವಿನಿಂದ ಕೊಯ್ದುಕೊಂಡು ಕೋಮಾ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದರು.

ಕಳೆದ ತಿಂಗಳು ನಡೆದ ವಿಚಾರಣೆಯಲ್ಲಿ ಫ್ಯಾನ್ ಕೆಲವು ಬಲಿಪಶುಗಳ ಕುಟುಂಬಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ತಪ್ಪೊಪ್ಪಿಕೊಂಡನು ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ವಿಚ್ಛೇದನದ ನಂತರ ಆಸ್ತಿ ವಿಭಜನೆಯ ಬಗ್ಗೆ ವೈಯಕ್ತಿಕ ಹತಾಶೆ ಮತ್ತು ಅತೃಪ್ತಿಯ ಕೋಪವನ್ನು ಹೊರಹಾಕಲು ನಿರ್ಧರಿಸಿ ಈ ಕೃತ್ಯವೆಸಗಿದ್ದಾನೆ ಎಂದು ನ್ಯಾಯಾಲಯವು ಕಂಡುಕೊಂಡಿತ್ತು. ಅವನು  ಆಯ್ಕೆಮಾಡಿಕೊಂಡಿದ್ದ ಅಪರಾಧ ಕೃತ್ಯವು ವಿಶೇಷವಾಗಿ ಕ್ರೂರವಾಗಿತ್ತು ಮತ್ತು ಇದರ ಪರಿಣಾಮಗಳು ವಿಶೇಷವಾಗಿ ತೀವ್ರವಾಗಿದ್ದವು, ಸಮಾಜಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡಿತ್ತು ಎಂದು ಅದು ತೀರ್ಪು ನೀಡಿದೆ.

ಚೀನಾದಲ್ಲಿ ಸಾಮಾನ್ಯವಾಗಿ ಅನೇಕ ಪಾಶ್ಚಿಮಾತ್ಯ ದೇಶಗಳಿಗಿಂತ ಹಿಂಸಾತ್ಮಕ ಅಪರಾಧಗಳು ಅಪರೂಪ, ಆದರೆ ಕಳೆದ ವರ್ಷ ದೇಶವು ಈ ಸಾಮೂಹಿಕ ಸಾವುನೋವುಗಳ ಸರಣಿಯನ್ನು ಕಂಡಿತು. ಈ ಕಾರು ದಾಳಿಯು ಆಡಳಿತ ಕಮ್ಯುನಿಸ್ಟ್ ಪಕ್ಷದ ಕಟ್ಟುನಿಟ್ಟಾದ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ತಡೆಗಟ್ಟುವಿಕೆಯ ಖ್ಯಾತಿಯನ್ನು ಪ್ರಶ್ನಿಸಿತ್ತು.

ಇನ್ನೊಂದು ಪ್ರಕರಣದಲ್ಲಿ ನವೆಂಬರ್‌ನಲ್ಲಿ ನಡೆದ ಸಾಮೂಹಿಕ ಇರಿತದಲ್ಲಿ ಎಂಟು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ವ್ಯಕ್ತಿಗೆ ಪೂರ್ವ ಜಿಯಾಂಗ್ಸು ಪ್ರಾಂತ್ಯದ ಪ್ರತ್ಯೇಕ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು ಎಂದು ಸಿಸಿಟಿವಿ ಸೋಮವಾರ ವರದಿ ಮಾಡಿದೆ.

ವುಕ್ಸಿ ನಗರದ ವೃತ್ತಿಪರ ಶಾಲೆಯ ಮೇಲೆ ದಾಳಿ ಮಾಡಿದ 21 ವರ್ಷದ ಮಾಜಿ ವಿದ್ಯಾರ್ಥಿ ಕ್ಸು ಜಿಯಾಜಿನ್‌ನನ್ನು “ಕಾನೂನಿನ ಪ್ರಕಾರ” ಗಲ್ಲಿಗೇರಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ.

ಈತನಿಗೂ ಡಿಸೆಂಬರ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು, ಆತನ ಅಪರಾಧವು “ಅಸಾಧಾರಣ ಗಂಭೀರವಾಗಿದೆ” ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಸಿಸಿಟಿವಿ ತಿಳಿಸಿದೆ.

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...