Homeಅಂತರಾಷ್ಟ್ರೀಯ35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

35 ಜನರ ಕೊಂದ ವ್ಯಕ್ತಿಯನ್ನು ಗಲ್ಲಿಗೇರಿಸಿದ ಚೀನಾ 

- Advertisement -
- Advertisement -

ನವೆಂಬರ್‌ನಲ್ಲಿ ದಕ್ಷಿಣ ನಗರವಾದ ಝುಹೈನಲ್ಲಿ ನಡೆದ ಉದ್ದೇಶಪೂರ್ವಕ ಕಾರು ಅಪಘಾತದಲ್ಲಿ 35 ಜನರನ್ನು ಕೊಂದ ವ್ಯಕ್ತಿಯನ್ನು ಚೀನಾವು ಸೋಮವಾರ ಗಲ್ಲಿಗೇರಿಸಿದೆ.

ನವೆಂಬರ್ 11ರಂದು 62 ಹರೆಯದ ಫ್ಯಾನ್ ವೀಕಿ ಎಂಬಾತ ಕ್ರೀಡಾ ಸಂಕೀರ್ಣದ ಹೊರಗೆ ವ್ಯಾಯಾಮ ಮಾಡುತ್ತಿದ್ದ ಜನರ ಗುಂಪಿನ ಕಡೆ ಉದ್ದೇಶಪೂರ್ವಕವಾಗಿ ಸಣ್ಣ ಎಸ್‌ಯುವಿಯನ್ನು ಚಲಾಯಿಸಿದನು. ಇದು 2014ರ ನಂತರ ಚೀನಾದಲ್ಲಿ ನಡೆದ ಅತ್ಯಂತ ಕೆಟ್ಟ ಅಪರಾಧ ಪ್ರಕರಣವಾಗಿತ್ತು.

ಕಳೆದ ತಿಂಗಳು ಅವನಿಗೆ ಮರಣದಂಡನೆ ವಿಧಿಸಲಾಯಿತು, ನ್ಯಾಯಾಲಯವು ಅವನ ಯೋಚನೆಯು ಅತ್ಯಂತ ಕೆಟ್ಟದ್ದಾಗಿತ್ತು ಮತ್ತು ಅಪರಾಧದ ಸ್ವರೂಪವು ಅತ್ಯಂತ ಭೀಕರವಾಗಿತ್ತು ಎಂದು ಹೇಳಿದೆ.

ಸೋಮವಾರ ಝುಹೈ ನ್ಯಾಯಾಲಯವು ಸುಪ್ರೀಂ ಪೀಪಲ್ಸ್ ಕೋರ್ಟ್ ಹೊರಡಿಸಿದ ಮರಣದಂಡನೆ ಆದೇಶದ ಪ್ರಕಾರ ಫ್ಯಾನ್ ವೀಕಿಯುನನ್ನು ಗಲ್ಲಿಗೇರಿಸಿದೆ ಎಂದು ರಾಜ್ಯ ಪ್ರಸಾರಕ ಸಿಸಿಟಿವಿ ತಿಳಿಸಿದೆ.

ಪುರಸಭೆಯ ಸಾರ್ವಜನಿಕ ಅಭಿಯೋಜಕರು ಕಾನೂನಿಗೆ ಅನುಸಾರವಾಗಿ (ಮರಣದಂಡನೆ) ಮೇಲ್ವಿಚಾರಣೆ ಮಾಡಲು ಸಿಬ್ಬಂದಿಯನ್ನು ಕಳುಹಿಸಿದ್ದಾರೆ ಎಂದು ಸಿಸಿಟಿವಿ ವರದಿ ಮಾಡಿದೆ.

ಫ್ಯಾನ್ ನ ದಾಳಿಯು ಚೀನಾದಲ್ಲಿ ವ್ಯಾಪಕ ಸಾರ್ವಜನಿಕ ಆಘಾತ ಮತ್ತು ಸಮಾಜದ ಸ್ಥಿತಿಯ ಬಗ್ಗೆ ಆತ್ಮಾವಲೋಕನಕ್ಕೆ ಕಾರಣವಾಗಿತ್ತು. ಸ್ವತಃ ಚಾಕುವಿನಿಂದ ಕೊಯ್ದುಕೊಂಡು ಕೋಮಾ ಸ್ಥಿತಿಯಲ್ಲಿದ್ದ ಆತನನ್ನು ಸ್ಥಳದಲ್ಲೇ ಬಂಧಿಸಲಾಯಿತು ಎಂದು ಪೊಲೀಸರು ಆ ಸಮಯದಲ್ಲಿ ತಿಳಿಸಿದ್ದರು.

ಕಳೆದ ತಿಂಗಳು ನಡೆದ ವಿಚಾರಣೆಯಲ್ಲಿ ಫ್ಯಾನ್ ಕೆಲವು ಬಲಿಪಶುಗಳ ಕುಟುಂಬಗಳು, ಅಧಿಕಾರಿಗಳು ಮತ್ತು ಸಾರ್ವಜನಿಕರ ಮುಂದೆ ತಪ್ಪೊಪ್ಪಿಕೊಂಡನು ಎಂದು ರಾಜ್ಯ ಮಾಧ್ಯಮಗಳು ತಿಳಿಸಿವೆ.

ವಿಚ್ಛೇದನದ ನಂತರ ಆಸ್ತಿ ವಿಭಜನೆಯ ಬಗ್ಗೆ ವೈಯಕ್ತಿಕ ಹತಾಶೆ ಮತ್ತು ಅತೃಪ್ತಿಯ ಕೋಪವನ್ನು ಹೊರಹಾಕಲು ನಿರ್ಧರಿಸಿ ಈ ಕೃತ್ಯವೆಸಗಿದ್ದಾನೆ ಎಂದು ನ್ಯಾಯಾಲಯವು ಕಂಡುಕೊಂಡಿತ್ತು. ಅವನು  ಆಯ್ಕೆಮಾಡಿಕೊಂಡಿದ್ದ ಅಪರಾಧ ಕೃತ್ಯವು ವಿಶೇಷವಾಗಿ ಕ್ರೂರವಾಗಿತ್ತು ಮತ್ತು ಇದರ ಪರಿಣಾಮಗಳು ವಿಶೇಷವಾಗಿ ತೀವ್ರವಾಗಿದ್ದವು, ಸಮಾಜಕ್ಕೆ ಗಮನಾರ್ಹ ಹಾನಿಯನ್ನುಂಟುಮಾಡಿತ್ತು ಎಂದು ಅದು ತೀರ್ಪು ನೀಡಿದೆ.

ಚೀನಾದಲ್ಲಿ ಸಾಮಾನ್ಯವಾಗಿ ಅನೇಕ ಪಾಶ್ಚಿಮಾತ್ಯ ದೇಶಗಳಿಗಿಂತ ಹಿಂಸಾತ್ಮಕ ಅಪರಾಧಗಳು ಅಪರೂಪ, ಆದರೆ ಕಳೆದ ವರ್ಷ ದೇಶವು ಈ ಸಾಮೂಹಿಕ ಸಾವುನೋವುಗಳ ಸರಣಿಯನ್ನು ಕಂಡಿತು. ಈ ಕಾರು ದಾಳಿಯು ಆಡಳಿತ ಕಮ್ಯುನಿಸ್ಟ್ ಪಕ್ಷದ ಕಟ್ಟುನಿಟ್ಟಾದ ಸಾರ್ವಜನಿಕ ಭದ್ರತೆ ಮತ್ತು ಅಪರಾಧ ತಡೆಗಟ್ಟುವಿಕೆಯ ಖ್ಯಾತಿಯನ್ನು ಪ್ರಶ್ನಿಸಿತ್ತು.

ಇನ್ನೊಂದು ಪ್ರಕರಣದಲ್ಲಿ ನವೆಂಬರ್‌ನಲ್ಲಿ ನಡೆದ ಸಾಮೂಹಿಕ ಇರಿತದಲ್ಲಿ ಎಂಟು ಜನರನ್ನು ಕೊಂದು 17 ಜನರನ್ನು ಗಾಯಗೊಳಿಸಿದ ವ್ಯಕ್ತಿಗೆ ಪೂರ್ವ ಜಿಯಾಂಗ್ಸು ಪ್ರಾಂತ್ಯದ ಪ್ರತ್ಯೇಕ ನ್ಯಾಯಾಲಯವು ಮರಣದಂಡನೆ ವಿಧಿಸಿತ್ತು ಎಂದು ಸಿಸಿಟಿವಿ ಸೋಮವಾರ ವರದಿ ಮಾಡಿದೆ.

ವುಕ್ಸಿ ನಗರದ ವೃತ್ತಿಪರ ಶಾಲೆಯ ಮೇಲೆ ದಾಳಿ ಮಾಡಿದ 21 ವರ್ಷದ ಮಾಜಿ ವಿದ್ಯಾರ್ಥಿ ಕ್ಸು ಜಿಯಾಜಿನ್‌ನನ್ನು “ಕಾನೂನಿನ ಪ್ರಕಾರ” ಗಲ್ಲಿಗೇರಿಸಲಾಗಿದೆ ಎಂದು ಸಿಸಿಟಿವಿ ವರದಿ ಮಾಡಿದೆ.

ಈತನಿಗೂ ಡಿಸೆಂಬರ್‌ನಲ್ಲಿ ಮರಣದಂಡನೆ ವಿಧಿಸಲಾಗಿತ್ತು, ಆತನ ಅಪರಾಧವು “ಅಸಾಧಾರಣ ಗಂಭೀರವಾಗಿದೆ” ಎಂದು ನ್ಯಾಯಾಲಯ ತೀರ್ಮಾನಿಸಿದೆ ಎಂದು ಸಿಸಿಟಿವಿ ತಿಳಿಸಿದೆ.

ವಿಜಯಪುರ | ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ : ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...