Homeಅಂತರಾಷ್ಟ್ರೀಯಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

- Advertisement -
- Advertisement -

ಚೀನಾ ತನ್ನ ವಾಯುನೆಲೆಯನ್ನು ಲಡಾಕ್ ಬಳಿ ವಿಸ್ತರಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ವಿಶೇಷ ಚಿತ್ರಗಳನ್ನು ಪ್ರಕಟಿಸಿದ್ದು ಅದರಲ್ಲಿ ವಾಯುನೆಲೆಯ ವಿಸ್ತರಣೆಯನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ವಾಯುನೆಲೆಯೂ ಲಡಾಖ್‌ನ ಪಂಗ್ಯಾಂಗ್ ಸರೋವರದಿಂದ 200 ಕಿಲೋಮೀಟರ್ ದೂರದ ಟಿಬೆಟ್‌ನ ನಗರಿ ಕುನ್ಶಾ ವಿಮಾನ ನಿಲ್ದಾಣದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾ ಸೈನ್ಯದ ನಡುವೆ ಉದ್ವಿಗ್ನತೆಯ ಪರಿಸ್ಥಿತಿ ಉಂಟಾಗಿದೆ.

6 ಏಪ್ರಿಲ್ 2020 ರ ಉಪಗ್ರಹ ಚಿತ್ರದಲ್ಲಿ ಏರ್‌ಪೋರ್ಟ್‌ ಹಾಗೂ ರನ್‌ವೇಯನ್ನು ಕಾಣಬಹುದು. ಆದರೆ 21 ಮೇ 2020 ರ ಚಿತ್ರಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ದೊಡ್ಡ ಪ್ರಮಾಣದಲ್ಲಿ ವಾಯುನೆಲೆಯ ಚಟುವಟಿಕೆಗಳು ನಡೆದಿರುವುದು ಹೊಸ ಚಿತ್ರದಲ್ಲಿ ಕಂಡುಬರುತ್ತವೆ.

ಹೊಸ ಚಿತ್ರದಲ್ಲಿ ಹೊಸ ಟ್ರ್ಯಾಕ್ ಸಹ ಕಂಡುಬರುತ್ತಿದ್ದು, ಅದು ಸಮಾನಾಂತರ ಟ್ಯಾಕ್ಸಿ ಟ್ರ್ಯಾಕ್ ಆಗಿರಬಹುದು ಅಥವಾ ಈ ಸ್ಥಳವನ್ನು ಹೆಲಿಕಾಪ್ಟರ್‌ಗಳಿಗಾಗಿ ಈ ಎತ್ತರದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಈ ಚಿತ್ರದಲ್ಲಿರುವ ವಾಯುನೆಲೆಯಲ್ಲಿ 4 ಯುದ್ಧ ವಿಮಾನಗಳು ನಿಂತಿರುವುದು ಕೂಡಾ ಗೋಚರಿಸುತ್ತಿದೆ. ಇವುಗಳು ಜೆ -11 ಅಥವಾ ಜೆ -16 ಆಗಿರಬಹುದು ಎನ್ನಲಾಗಿದ್ದು, ಅದು ರಷ್ಯಾದ ಸುಖೋಯ್ -27 ಅಥವಾ ಸುಖೋಯ್ -30 ರ ರೂಪಾಂತರಗಳಾಗಿವೆ.

ಇವು ಚೀನಾದ ಮುಖ್ಯ ಯುದ್ಧ ವಿಮಾನಗಳಾಗಿದ್ದು ಭಾರತದ ಗಡಿಯಿಂದ ಕೇವಲ 200 ಕಿ.ಮೀ ದೂರದಲ್ಲಿ ಅವುಗಳ ನಿಯೋಜನೆಯು ನಿಜವಾಗಿಯೂ ಕಳವಳಕಾರಿ ಸಂಗತಿಯಾಗಿದೆ. ಅಷ್ಟೇ ಅಲ್ಲದೆ ಚಿತ್ರಗಳನ್ನು ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ, ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಇದು 2017 ರ ಡೋಕ್ಲಾಮ್ ಬಿಕ್ಕಟ್ಟಿನ ನಂತರದ ಅತಿದೊಡ್ಡ ಮಿಲಿಟರಿ ಉಲ್ಬಣಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

ಪ್ಯಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಸ್ಥಾನವನ್ನು ಬಲಪಡಿಸಿದೆ ಎಂದು ಸೈನ್ಯದ ಉನ್ನತ ಮೂಲಗಳು ಹೇಳುತ್ತವೆ. ಈ ಎರಡು ವಿವಾದಿತ ಪ್ರದೇಶಗಳಲ್ಲಿ, ಚೀನಾ ಸೈನ್ಯವು ತನ್ನ 2500 ಸೈನಿಕರನ್ನು ನಿಯೋಜಿಸಿದ್ದು, ತಾತ್ಕಾಲಿಕ ನಿರ್ಮಾಣವನ್ನು ಬಲಪಡಿಸುತ್ತಿದೆ.

ಸೇನೆಯ ಉತ್ತರ ಕಮಾಂಡ್‌ನ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಡಿ.ಎಸ್. ಹೂಡಾ (ನಿವೃತ್ತ), “ಇದು ಸಾಮಾನ್ಯ ಉಲ್ಲಂಘನೆಯಲ್ಲ, ಗಂಭೀರ ವಿಷಯ” ಎಂದು ಹೇಳಿದ್ದಾರೆ. ” ಗಾಲ್ವಾನ್ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲ ಎಂದು ಲೆಫ್ಟಿನೆಂಟ್ ಜನರಲ್ ಹೂಡಾ ನಿರ್ದಿಷ್ಟವಾಗಿ ಒತ್ತಿ ಹೇಳಿದ್ದಾರೆ.


ಓದಿ: ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...