Homeಅಂತರಾಷ್ಟ್ರೀಯಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

ಲಡಾಕ್ ಬಳಿ ವಾಯುನೆಲೆ ವಿಸ್ತರಿಸಿ ಯುದ್ದ ವಿಮಾನಗಳನ್ನು ಸಜ್ಜುಗೊಳಿಸಿರುವ ಚೀನಾ

- Advertisement -
- Advertisement -

ಚೀನಾ ತನ್ನ ವಾಯುನೆಲೆಯನ್ನು ಲಡಾಕ್ ಬಳಿ ವಿಸ್ತರಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಈ ಬಗ್ಗೆ ವಿಶೇಷ ಚಿತ್ರಗಳನ್ನು ಪ್ರಕಟಿಸಿದ್ದು ಅದರಲ್ಲಿ ವಾಯುನೆಲೆಯ ವಿಸ್ತರಣೆಯನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ವಾಯುನೆಲೆಯೂ ಲಡಾಖ್‌ನ ಪಂಗ್ಯಾಂಗ್ ಸರೋವರದಿಂದ 200 ಕಿಲೋಮೀಟರ್ ದೂರದ ಟಿಬೆಟ್‌ನ ನಗರಿ ಕುನ್ಶಾ ವಿಮಾನ ನಿಲ್ದಾಣದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಲಡಾಖ್‌ನಲ್ಲಿ ಭಾರತೀಯ ಮತ್ತು ಚೀನಾ ಸೈನ್ಯದ ನಡುವೆ ಉದ್ವಿಗ್ನತೆಯ ಪರಿಸ್ಥಿತಿ ಉಂಟಾಗಿದೆ.

6 ಏಪ್ರಿಲ್ 2020 ರ ಉಪಗ್ರಹ ಚಿತ್ರದಲ್ಲಿ ಏರ್‌ಪೋರ್ಟ್‌ ಹಾಗೂ ರನ್‌ವೇಯನ್ನು ಕಾಣಬಹುದು. ಆದರೆ 21 ಮೇ 2020 ರ ಚಿತ್ರಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿದ್ದು, ದೊಡ್ಡ ಪ್ರಮಾಣದಲ್ಲಿ ವಾಯುನೆಲೆಯ ಚಟುವಟಿಕೆಗಳು ನಡೆದಿರುವುದು ಹೊಸ ಚಿತ್ರದಲ್ಲಿ ಕಂಡುಬರುತ್ತವೆ.

ಹೊಸ ಚಿತ್ರದಲ್ಲಿ ಹೊಸ ಟ್ರ್ಯಾಕ್ ಸಹ ಕಂಡುಬರುತ್ತಿದ್ದು, ಅದು ಸಮಾನಾಂತರ ಟ್ಯಾಕ್ಸಿ ಟ್ರ್ಯಾಕ್ ಆಗಿರಬಹುದು ಅಥವಾ ಈ ಸ್ಥಳವನ್ನು ಹೆಲಿಕಾಪ್ಟರ್‌ಗಳಿಗಾಗಿ ಈ ಎತ್ತರದ ಸ್ಥಳದಲ್ಲಿ ನಿರ್ಮಿಸಲಾಗಿದೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ ಈ ಚಿತ್ರದಲ್ಲಿರುವ ವಾಯುನೆಲೆಯಲ್ಲಿ 4 ಯುದ್ಧ ವಿಮಾನಗಳು ನಿಂತಿರುವುದು ಕೂಡಾ ಗೋಚರಿಸುತ್ತಿದೆ. ಇವುಗಳು ಜೆ -11 ಅಥವಾ ಜೆ -16 ಆಗಿರಬಹುದು ಎನ್ನಲಾಗಿದ್ದು, ಅದು ರಷ್ಯಾದ ಸುಖೋಯ್ -27 ಅಥವಾ ಸುಖೋಯ್ -30 ರ ರೂಪಾಂತರಗಳಾಗಿವೆ.

ಇವು ಚೀನಾದ ಮುಖ್ಯ ಯುದ್ಧ ವಿಮಾನಗಳಾಗಿದ್ದು ಭಾರತದ ಗಡಿಯಿಂದ ಕೇವಲ 200 ಕಿ.ಮೀ ದೂರದಲ್ಲಿ ಅವುಗಳ ನಿಯೋಜನೆಯು ನಿಜವಾಗಿಯೂ ಕಳವಳಕಾರಿ ಸಂಗತಿಯಾಗಿದೆ. ಅಷ್ಟೇ ಅಲ್ಲದೆ ಚಿತ್ರಗಳನ್ನು ಮೊದಲ ಬಾರಿಗೆ ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ.

ಪೂರ್ವ ಲಡಾಕ್‌ನ ವಾಸ್ತವಿಕ ನಿಯಂತ್ರಣ ರೇಖೆಯ ಉದ್ದಕ್ಕೂ, ಭಾರತೀಯ ಮತ್ತು ಚೀನಾ ಸೈನಿಕರ ನಡುವೆ ಉದ್ವಿಗ್ನತೆ ಉಂಟಾಗಿದ್ದು, ಇದು 2017 ರ ಡೋಕ್ಲಾಮ್ ಬಿಕ್ಕಟ್ಟಿನ ನಂತರದ ಅತಿದೊಡ್ಡ ಮಿಲಿಟರಿ ಉಲ್ಬಣಕ್ಕೆ ಕಾರಣವಾಗಬಹುದು ಎನ್ನಲಾಗಿದೆ.

ಪ್ಯಾಂಗೊಂಗ್ ತ್ಸೋ ಮತ್ತು ಗಾಲ್ವಾನ್ ಕಣಿವೆಯಲ್ಲಿ ಭಾರತವು ತನ್ನ ಸ್ಥಾನವನ್ನು ಬಲಪಡಿಸಿದೆ ಎಂದು ಸೈನ್ಯದ ಉನ್ನತ ಮೂಲಗಳು ಹೇಳುತ್ತವೆ. ಈ ಎರಡು ವಿವಾದಿತ ಪ್ರದೇಶಗಳಲ್ಲಿ, ಚೀನಾ ಸೈನ್ಯವು ತನ್ನ 2500 ಸೈನಿಕರನ್ನು ನಿಯೋಜಿಸಿದ್ದು, ತಾತ್ಕಾಲಿಕ ನಿರ್ಮಾಣವನ್ನು ಬಲಪಡಿಸುತ್ತಿದೆ.

ಸೇನೆಯ ಉತ್ತರ ಕಮಾಂಡ್‌ನ ಮಾಜಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಡಿ.ಎಸ್. ಹೂಡಾ (ನಿವೃತ್ತ), “ಇದು ಸಾಮಾನ್ಯ ಉಲ್ಲಂಘನೆಯಲ್ಲ, ಗಂಭೀರ ವಿಷಯ” ಎಂದು ಹೇಳಿದ್ದಾರೆ. ” ಗಾಲ್ವಾನ್ ಪ್ರದೇಶದಲ್ಲಿ ಎರಡು ಕಡೆಯವರ ನಡುವೆ ಯಾವುದೇ ವಿವಾದಗಳಿಲ್ಲ ಎಂದು ಲೆಫ್ಟಿನೆಂಟ್ ಜನರಲ್ ಹೂಡಾ ನಿರ್ದಿಷ್ಟವಾಗಿ ಒತ್ತಿ ಹೇಳಿದ್ದಾರೆ.


ಓದಿ: ಡೋಕ್ಲಾಮ್ ಮಾದರಿಯ ಬಿಕ್ಕಟ್ಟು; ಲಡಾಖ್‌ನಲ್ಲಿ ಭಾರತ-ಚೀನಾ ಸೈನಿಕರ ಮುಖಾಮುಖಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ಧ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...