Homeಬಹುಜನ ಭಾರತಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.

- Advertisement -
- Advertisement -

ಒಂದೊಮ್ಮೆ ಕಮ್ಯೂನಿಸ್ಟ್? ಸಿದ್ಧಾಂತದ ತವರಾಗಿದ್ದ ಈ ದೇಶ ಇಂದು ಬಂಡವಾಳಶಾಹಿ ಅಮೆರಿಕಕ್ಕೂ ಅಸೂಯೆ ಆಗುವಷ್ಟರ ಮಟ್ಟಿಗೆ ಬಂಡವಾಳಶಾಹಿ ಆಗಿದೆ. ಕಮ್ಯೂನಿಸ್ಟ್ ಸಿದ್ಧಾಂತ ಈಗ ಉಳಿದಿರುವುದು ಬರಿಯ ಕಾಗದದ ಮೇಲೆ. ಹೆಚ್ಚೆಂದರೆ ಏಕಪಕ್ಷ ಅಧಿಕಾರ ವ್ಯವಸ್ಥೆಯನ್ನು ಪ್ರಶ್ನಾತೀತವಾಗಿ ಮುಂದುವರೆಸಿಕೊಂಡು ಹೋಗಲು ಚೀನಾದ ಕೇಂದ್ರೀಯ ನಾಯಕತ್ವ ಉಳಿಸಿಕೊಂಡಿರುವ ಅನುಕೂಲಕರ ಸಾಧನ ಮಾತ್ರ.

ನೆಹರೂ ಚಾಚಿದ್ದ ಪಂಚಶೀಲ ತತ್ವದ ಸ್ನೇಹ ಹಸ್ತವನ್ನು ತಿರುಚಿ 1962ರಲ್ಲಿ ದಂಡೆತ್ತಿ ಬಂದು ಹೇರಿದ ಪರಾಭವದ ಅವಹೇಳನ ಭಾರತ ಸುಲಭವಾಗಿ ಮರೆಯುವಂತಹುದಲ್ಲ. ಶಾಂತಿ ಸಹಕಾರ ಹಾಗೂ ಪರಸ್ಪರ ವಿಶ್ವಾಸದ ನೆಹರೂ ಮಂತ್ರವನ್ನು ಮಾವೋ-ಝೌ ಜೋಡಿ ಮುದುಡಿ ಬಿಸುಟಿತ್ತು. ಏಷ್ಯಾದ ಅಧಿಕಾರ ಚದುರಂಗದಾಟದಲ್ಲಿ ಭಾರತವನ್ನು ತನ್ನ ಪ್ರಬಲ ಪ್ರತಿಸ್ಪರ್ಧಿ ಎಂಬುದು ಚೀನಾದ ಭಾವನೆ. ಭಾರತ ಮತ್ತು ಚೀನಾ ದೇಶ ಗಳೆರಡೂ ಎದ್ದು ನಿಲ್ಲಲು ಸಾಲುವಷ್ಟು ಎಡೆ ಇದ್ದೇ ಇದೆ ಎಂಬ ಭಾರತದ ಮಾತುಗಳಿಗೆ ಮಾನ್ಯತೆ ನೀಡಿಲ್ಲ.

ಅರುಣಾಚಲ ಪ್ರದೇಶದ ತವಾಂಗ್ ಮೇಲೆಯೂ ಚೀನಾ ಬಹುಕಾಲದಿಂದ ಕಣ್ಣು ಹಾಕಿದೆ. ಚೀನಾದ ಪಾಲಿಗೆ ತವಾಂಗ್ ಟಿಬೆಟ್‍ಗೆ ಸೇರಿದ ಭೂಭಾಗ. ಅರ್ಥಾತ್ ದಕ್ಷಿಣ ಟಿಬೆಟ್. ತವಾಂಗ್ ಅನ್ನು ತನ್ನ ಪಾಲಿನ ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಚೀನಾ ಭಾವಿಸಿದೆ. ತಾನು ಆಕ್ರಮಿಸಿಕೊಂಡಿರುವ ಟಿಬೆಟ್ಟಿನಲ್ಲಿ ಅರವತ್ತರ ದಶಕದಲ್ಲಿ ಭುಗಿಲೆದ್ದ ಖಾಂಪಾ ಆಂದೋಲನದ ಬೇರುಗಳು ಇದ್ದದ್ದು ತವಾಂಗ್‍ನಲ್ಲೇ ಎಂಬುದು ಚೀನಾದ ದೃಢ ನಂಬಿಕೆ. ಹೀಗಾಗಿ ಟಿಬೆಟ್ಟಿನಲ್ಲಿ ಚೀನೀ ಆಕ್ರಮಣದ ವಿರುದ್ಧ ಭವಿಷ್ಯತ್ತಿನಲ್ಲಿ ಏಳಬಹುದಾದ ಬಂಡಾಯಗಳು ಅಥವಾ ದಂಗೆಗಳ ನೆಲೆ ತವಾಂಗ್ ಆಗುವ ಸಂಭವವನ್ನು ಬೀಜಿಂಗ್ ಕಂಡಿದೆ.

ಅತಿಕ್ರಮಣವಾದಿ ಚೀನಾದೊಂದಿಗೆ ಭಾರತದ ಗಡಿ ಸಂಕಟಗಳು ತೀವ್ರಗೊಂಡದ್ದು 1950ರ ನಂತರ. ಭಾರತದ ಗೆಳೆಯನಾಗಿದ್ದ ಟಿಬೆಟ್ ಅನ್ನು ಚೀನಾ ಆಕ್ರಮಿಸಿ ನುಂಗಿದ್ದು 1950ರಲ್ಲೇ. ಭಾರತ ಮತ್ತು ಚೀನಾ ನಡುವಣ ತಟಸ್ಥ ತಡೆಗೋಡೆಯಂತಿದ್ದ ಟಿಬೆಟ್ ಚೀನಾದ ಭೂಭಾಗವೇ ಆಗಿ ಹೋಗಿತ್ತು. ನೆಹರೂ ನೇತೃತ್ವದ ಭಾರತ ಸರ್ಕಾರ ಟಿಬೆಟ್ ನೆರವಿಗೆ ಧಾವಿಸಲಿಲ್ಲ. ಕೇವಲ ಪ್ರತಿಭಟನಾ ಪತ್ರ ಬರೆದು ಕುಳಿತಿತು. ಮೈತ್ರಿ ಮತ್ತು ಸದ್ಭಾವನೆಯ ಹೆಸರಿನಲ್ಲಿ ನಿಷ್ಕ್ರಿಯರಾದ ನೆಹರೂ, ಸರ್ದಾರ್ ಪಟೇಲ್ ಅವರ ಎಚ್ಚರಿಕೆಯನ್ನು ಲೆಕ್ಕಿಸಲಿಲ್ಲ. ವಿಸ್ತರಣಾವಾದಿ ಚೀನಾ ಭಾರತದ ಬಾಗಿಲು ತಲುಪಿದ್ದು ಉತ್ತರ ಮತ್ತು ಈಶಾನ್ಯದ ಗಡಿಗಳ ಭದ್ರತೆ ಅಪಾಯಕ್ಕೆ ಸಿಲುಕಿದ್ದು ಸಭೆ ಸೇರಬೇಕೆಂದು ನೆಹರೂ ಅವರಿಗೆ ಪಟೇಲ್ ಪತ್ರ ಬರೆದಿದ್ದರು. ಈ ಸಭೆ ನಡೆಯುವುದೇ ಇಲ್ಲ. ಅಸ್ಸಾಮಿನ ಮುಖ್ಯ ಭಾಗಗಳ ಮೇಲೂ ಚೀನೀಯರು ಕಣ್ಣು ಹಾಕಿರುವ ಪ್ರಸ್ತಾಪವೂ ಈ ಪತ್ರದಲ್ಲಿತ್ತು. ಚೀನಾದ ವಿಸ್ತರಣಾವಾದವನ್ನು ನೆಹರೂ ಮುಂದಾಗಿಯೇ ಅಂದಾಜು ಮಾಡುವಲ್ಲಿ ವಿಫಲರಾದರು. ಟಿಬೆಟ್ ಚೀನಾದ ಅವಿಭಾಜ್ಯ ಅಂಗ ಎಂದು ಭಾರತ ಒಪ್ಪಿಕೊಂಡಿತು. ಟಿಬೆಟ್ ಅಸ್ತಿತ್ವ ಕಳೆದಕೊಂಡು ಚೀನಾದ ಟಿಬೆಟನ್ ಸೀಮೆಯಾಗಿತ್ತು. ಟಿಬೆಟ್ ಮೇಲೆ ಚೀನಾದ ಸಾರ್ವಭೌಮತೆಯನ್ನು ಅಂಗೀಕರಿಸುವ ಒಪ್ಪಂದಕ್ಕೆ ಭಾರತ 1954ರಲ್ಲಿ ಸಹಿ ಹಾಕಿತು. ಹಿಂದೀ ಚೀನೀ ಭಾಯೀ ಭಾಯೀ ಎಂದರು ನೆಹರೂ. ಜಾಗತಿಕ ವೇದಿಕೆಗಳಲ್ಲಿ ಪೀಪಲ್ಸ್ ರಿಪಬ್ಲಿಕ್ ಅಫ್ ಚೀನಾವನ್ನು ಸಮರ್ಥಿಸಿ ಮಾತನಾಡಿದರು. ಭಾರತದ ಈ ಸಮರ್ಥನೆ ಮತ್ತು ಬೆಂಬಲಗಳಿಗೆ ಪ್ರತಿಯಾಗಿ ಭಾರತದೊಂದಿಗೆ ಕೈ ಜೋಡಿಸಿ ‘ಏಷ್ಯನ್ ಕೂಟ’ ರಚಿಸಲು ಚೀನಾ ಒಪ್ಪಿಕೊಳ್ಳುವುದೆಂಬ ನಿರೀಕ್ಷೆ ನೆಹರೂ ಅವರಿಗೆ ಇತ್ತು. 1956ರಲ್ಲಿ ಚೀನಾದ ಭೂಪಟಗಳು ಭಾರತಕ್ಕೆ ಸೇರಿದ್ದ 1.20 ಲಕ್ಷ ಚದರ ಕಿ.ಮೀ.ಗಳಷ್ಟು ವಿಸ್ತೀರ್ಣದ ಗಡಿ ಪ್ರದೇಶವನ್ನು ಚೀನಾಕ್ಕೆ ಸೇರಿದ್ದೆಂದು ತೋರಿಸಿದವು. ನೆಹರೂ ಅವರ ಆಕ್ಷೇಪಣೆಗೆ ಓಗೊಟ್ಟ ಚೀನಾ ಈ ನಕಾಶೆಗಳು ಲೆಕ್ಕಕ್ಕಿಲ್ಲ ಎಂದು ಆಶ್ವಾಸನೆ ನೀಡಿತು. ಆದರೆ ದಲಾಯಿಲಾಮಾ ಮತ್ತು ಟಿಬೆಟನ್ನರಿಗೆ ಭಾರತ ನೀಡಿದ ಆಶ್ರಯ ಕುರಿತು ತೀವ್ರ ತಪ್ಪು ತಿಳಿವಳಿಕೆಗಳು ಉದ್ಭವಿಸಿದವು. ಟಿಬೆಟ್ ಅನ್ನು ಭಾರತ ವಶಪಡಿಸಿಕೊಂಡು ಮಹಾಸಾಮ್ರಾಜ್ಯ ಕಟ್ಟುವ ಉದ್ದೇಶ ಭಾರತಕ್ಕಿದೆ ಎಂದು ಚೀನಾ ಅನುಮಾನಿಸಿತ್ತು.

ಚೀನಾ ವಶಪಡಿಸಿಕೊಳ್ಳುವ ಮುನ್ನ ಪೂರ್ವಕ್ಕೆ ಚೀನಾ, ದಕ್ಷಿಣಕ್ಕೆ ನೇಪಾಳ, ಭೂತಾನ ಹಾಗೂ ಭಾರತ ಮತ್ತು ಪಶ್ಚಿಮದಲ್ಲಿ ಭಾರತದ ಕಾಶ್ಮೀರ ರಾಜ್ಯಗಳಿಂದ ಸುತ್ತುವರೆಯಲ್ಪಟ್ಟಿತ್ತು ಟಿಬೆಟ್. ಭಾರತ ಉಪಖಂಡ ಮತ್ತು ಟಿಬೆಟನ್ನು ಬೇರ್ಪಡಿಸಿದ್ದು ಹಿಮಾಲಯ ಪರ್ವತಶ್ರೇಣಿಗಳು. ಭಾರತದ ಉತ್ತರ ಮತ್ತು ಈಶಾನ್ಯ ಗಡಿಗಳ ರಕ್ಷಣೋಪಾಯದಲ್ಲಿ ಟಿಬೆಟ್‍ಗೆ ಬಹುಮುಖ್ಯ ಪಾತ್ರವಿತ್ತು. ಹಿಮಾಲಯದ ಆಚೆಗೆ ಜಗತ್ತಿನ ಸಂಪರ್ಕದಿಂದ ಕಡಿದು ಹೋಗಿದ್ದ ಬಂಜರು ವಿಸ್ತಾರವಿತ್ತು. ಹೀಗಾಗಿ ಉತ್ತರದ ಎರಡು ಸಾವಿರ ಮೈಲಿಗಳಷ್ಟು ಗಡಿಯನ್ನು ಕಾಯುವ ಭಾರತದ ಭಾರವನ್ನು ಈ ಬಂಜರು ವಿಸ್ತಾರ ಹಗುರಾಗಿಸಿತ್ತು. ಚೀನೀಯರು ಟಿಬೆಟನ್ನು ಆಕ್ರಮಿಸಿಕೊಳ್ಳುವುದರೊಂದಿಗೆ ಈ ತಟಸ್ಥ ಬಂಜರು ವಿಸ್ತಾರ ಭಾರತದ ಪಾಲಿಗೆ ಕಳೆದು ಹೋಯಿತು. ಹಿಮಾಲಯದಂತಹ ಮಹಾನ್ ರಕ್ಷಣಾ ತಡೆಗೋಡೆಯ ಪ್ರಭಾವ ಕೂಡ ಕುಗ್ಗಿ ಹೋಯಿತು.

ಭಾರತ ಮತ್ತು ನೇಪಾಳದಿಂದ ಟಿಬೆಟ್ ಅನ್ನು ಮುಟ್ಟುವುದು ದುಸ್ಸಾಧ್ಯ. ವರ್ಷದಲ್ಲಿ ಆರರಿಂದ ಎಂಟು ತಿಂಗಳ ಕಾಲ ಹಿಮವನ್ನು ಹೊದ್ದು ನಿಂತ ಕಡಿದಾದ ಉನ್ನತ ಪರ್ವತಶ್ರೇಣಿಗಳನ್ನು ಹಾಯುವುದು ಹಿಮಾಲಯದಷ್ಟೇ ಎತ್ತರದ ಸವಾಲು. ಆದರೆ ಟಿಬೆಟಿನಿಂದ ಭಾರತವನ್ನು ತಲುಪುವುದು ಸುಲಭ. 14,000 ಅಡಿಗಳ ಎತ್ತರದಿಂದ 6000 ಅಡಿಗಳ ತನಕ ಕ್ರಮೇಣ ಇಳಿಜಾರು. ಟಿಬೆಟ್‍ನ ಪಶ್ಚಿಮ ಭೂಭಾಗದ ಮೂರು ವಿಭಾಗಗಳು ಭಾರತದ ಲದ್ದಾಖ್, ಹಿಮಾಚಲ ಪ್ರದೇಶ ಹಾಗೂ ಉತ್ತರಪ್ರದೇಶದ ವಾಯುವ್ಯ ಸರಹದ್ದುಗಳನ್ನು ಮುಟ್ಟುತ್ತವೆ. ಹಿಂದೂಗಳು ಮತ್ತು ಬೌದ್ಧರ ಪಾಲಿಗೆ ಪವಿತ್ರವೆನಿಸಿದ ಕೈಲಾಶ ಮಾನಸ ಸರೋವರ ಇರುವುದು ಈ ಮೂರು ವಿಭಾಗಗಳಲ್ಲಿ ಒಂದಾದ ಎಂಗಾರಿಯಲ್ಲಿ. ಇಂಡಸ್, ಸಟ್ಲೆಜ್, ಬ್ರಹ್ಮಪುತ್ರ ನದಿಗಳ ಉಗಮವೂ ಇದೇ ಮಾನಸ ಸರೋವರ ಸೀಮೆ.ಇತಿಹಾಸಕಾರ ಪ್ರೊ. ಜಾರ್ಜ್ ಜಿನ್ಸ್ ಬರ್ಗ್ ಅವರ ಪ್ರಕಾರ ಟಿಬೆಟ್‍ಅನ್ನು ನಿಯಂತ್ರಿಸುವವರು ಹಿಮಾಲಯದ ತಪ್ಪಲನ್ನು ನಿಯಂತ್ರಿಸುತ್ತಾರೆ, ಹಿಮಾಲಯದ ತಪ್ಪಲನ್ನು ನಿಯಂತ್ರಿಸುವವರು ಭಾರತ ಉಪಖಂಡದ ಭದ್ರತೆಗೆ ಬೆದರಿಕೆ ಒಡ್ಡಬಲ್ಲರು, ಭಾರತದ ಭದ್ರತೆಯನ್ನು ಬಾಧಿಸಬಲ್ಲವರು ಇಡೀ ಆಗ್ನೇಯ ಏಷ್ಯಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಲ್ಲರು, ಅದರೊಂದಿಗೆ ಅಖಂಡ ಏಷ್ಯಾದ ಮೇಲೆ ನಿಯಂತ್ರಣ ಸಾಧಿಸಬಲ್ಲರು.

ಮಧ್ಯ ಏಷ್ಯಾದ ಗಡಿಸೀಮೆಗಳನ್ನು ರಾಜಕೀಯ ಕ್ರಿಯೆಯ ಆಧಾರವನ್ನಾಗಿ ಮಾಡಿಕೊಳ್ಳಲು ಟಿಬೆಟ್ ಪ್ರಶಸ್ತ ನೆಲ. ಪರಮಾಣು ಯುಗದಲ್ಲಿ ಬಾಂಬರ್ ವಿಮಾನಗಳು ದಾಳಿಗೆ ಮುನ್ನ ಆಗಸಕ್ಕೆ ಚಿಮ್ಮಲು ಮತ್ತು ಕ್ಷಿಪಣಿಗಳನ್ನು ಹಾರಿಸುವ ಅಪಾಯಕಾರಿ ಸಾಮರ್ಥ್ಯ ಹೊಂದಿದ ನೆಲವಿದು ಎಂದು ಮತ್ತೊಬ್ಬ ತಜ್ಞ ಜಾನ್ ರೋಲ್ಯಾಂಡ್ ಹೇಳುತ್ತಾರೆ.

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.


ಇದನ್ನು ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...