Homeಬಹುಜನ ಭಾರತಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.

- Advertisement -
- Advertisement -

ಒಂದೊಮ್ಮೆ ಕಮ್ಯೂನಿಸ್ಟ್? ಸಿದ್ಧಾಂತದ ತವರಾಗಿದ್ದ ಈ ದೇಶ ಇಂದು ಬಂಡವಾಳಶಾಹಿ ಅಮೆರಿಕಕ್ಕೂ ಅಸೂಯೆ ಆಗುವಷ್ಟರ ಮಟ್ಟಿಗೆ ಬಂಡವಾಳಶಾಹಿ ಆಗಿದೆ. ಕಮ್ಯೂನಿಸ್ಟ್ ಸಿದ್ಧಾಂತ ಈಗ ಉಳಿದಿರುವುದು ಬರಿಯ ಕಾಗದದ ಮೇಲೆ. ಹೆಚ್ಚೆಂದರೆ ಏಕಪಕ್ಷ ಅಧಿಕಾರ ವ್ಯವಸ್ಥೆಯನ್ನು ಪ್ರಶ್ನಾತೀತವಾಗಿ ಮುಂದುವರೆಸಿಕೊಂಡು ಹೋಗಲು ಚೀನಾದ ಕೇಂದ್ರೀಯ ನಾಯಕತ್ವ ಉಳಿಸಿಕೊಂಡಿರುವ ಅನುಕೂಲಕರ ಸಾಧನ ಮಾತ್ರ.

ನೆಹರೂ ಚಾಚಿದ್ದ ಪಂಚಶೀಲ ತತ್ವದ ಸ್ನೇಹ ಹಸ್ತವನ್ನು ತಿರುಚಿ 1962ರಲ್ಲಿ ದಂಡೆತ್ತಿ ಬಂದು ಹೇರಿದ ಪರಾಭವದ ಅವಹೇಳನ ಭಾರತ ಸುಲಭವಾಗಿ ಮರೆಯುವಂತಹುದಲ್ಲ. ಶಾಂತಿ ಸಹಕಾರ ಹಾಗೂ ಪರಸ್ಪರ ವಿಶ್ವಾಸದ ನೆಹರೂ ಮಂತ್ರವನ್ನು ಮಾವೋ-ಝೌ ಜೋಡಿ ಮುದುಡಿ ಬಿಸುಟಿತ್ತು. ಏಷ್ಯಾದ ಅಧಿಕಾರ ಚದುರಂಗದಾಟದಲ್ಲಿ ಭಾರತವನ್ನು ತನ್ನ ಪ್ರಬಲ ಪ್ರತಿಸ್ಪರ್ಧಿ ಎಂಬುದು ಚೀನಾದ ಭಾವನೆ. ಭಾರತ ಮತ್ತು ಚೀನಾ ದೇಶ ಗಳೆರಡೂ ಎದ್ದು ನಿಲ್ಲಲು ಸಾಲುವಷ್ಟು ಎಡೆ ಇದ್ದೇ ಇದೆ ಎಂಬ ಭಾರತದ ಮಾತುಗಳಿಗೆ ಮಾನ್ಯತೆ ನೀಡಿಲ್ಲ.

ಅರುಣಾಚಲ ಪ್ರದೇಶದ ತವಾಂಗ್ ಮೇಲೆಯೂ ಚೀನಾ ಬಹುಕಾಲದಿಂದ ಕಣ್ಣು ಹಾಕಿದೆ. ಚೀನಾದ ಪಾಲಿಗೆ ತವಾಂಗ್ ಟಿಬೆಟ್‍ಗೆ ಸೇರಿದ ಭೂಭಾಗ. ಅರ್ಥಾತ್ ದಕ್ಷಿಣ ಟಿಬೆಟ್. ತವಾಂಗ್ ಅನ್ನು ತನ್ನ ಪಾಲಿನ ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಚೀನಾ ಭಾವಿಸಿದೆ. ತಾನು ಆಕ್ರಮಿಸಿಕೊಂಡಿರುವ ಟಿಬೆಟ್ಟಿನಲ್ಲಿ ಅರವತ್ತರ ದಶಕದಲ್ಲಿ ಭುಗಿಲೆದ್ದ ಖಾಂಪಾ ಆಂದೋಲನದ ಬೇರುಗಳು ಇದ್ದದ್ದು ತವಾಂಗ್‍ನಲ್ಲೇ ಎಂಬುದು ಚೀನಾದ ದೃಢ ನಂಬಿಕೆ. ಹೀಗಾಗಿ ಟಿಬೆಟ್ಟಿನಲ್ಲಿ ಚೀನೀ ಆಕ್ರಮಣದ ವಿರುದ್ಧ ಭವಿಷ್ಯತ್ತಿನಲ್ಲಿ ಏಳಬಹುದಾದ ಬಂಡಾಯಗಳು ಅಥವಾ ದಂಗೆಗಳ ನೆಲೆ ತವಾಂಗ್ ಆಗುವ ಸಂಭವವನ್ನು ಬೀಜಿಂಗ್ ಕಂಡಿದೆ.

ಅತಿಕ್ರಮಣವಾದಿ ಚೀನಾದೊಂದಿಗೆ ಭಾರತದ ಗಡಿ ಸಂಕಟಗಳು ತೀವ್ರಗೊಂಡದ್ದು 1950ರ ನಂತರ. ಭಾರತದ ಗೆಳೆಯನಾಗಿದ್ದ ಟಿಬೆಟ್ ಅನ್ನು ಚೀನಾ ಆಕ್ರಮಿಸಿ ನುಂಗಿದ್ದು 1950ರಲ್ಲೇ. ಭಾರತ ಮತ್ತು ಚೀನಾ ನಡುವಣ ತಟಸ್ಥ ತಡೆಗೋಡೆಯಂತಿದ್ದ ಟಿಬೆಟ್ ಚೀನಾದ ಭೂಭಾಗವೇ ಆಗಿ ಹೋಗಿತ್ತು. ನೆಹರೂ ನೇತೃತ್ವದ ಭಾರತ ಸರ್ಕಾರ ಟಿಬೆಟ್ ನೆರವಿಗೆ ಧಾವಿಸಲಿಲ್ಲ. ಕೇವಲ ಪ್ರತಿಭಟನಾ ಪತ್ರ ಬರೆದು ಕುಳಿತಿತು. ಮೈತ್ರಿ ಮತ್ತು ಸದ್ಭಾವನೆಯ ಹೆಸರಿನಲ್ಲಿ ನಿಷ್ಕ್ರಿಯರಾದ ನೆಹರೂ, ಸರ್ದಾರ್ ಪಟೇಲ್ ಅವರ ಎಚ್ಚರಿಕೆಯನ್ನು ಲೆಕ್ಕಿಸಲಿಲ್ಲ. ವಿಸ್ತರಣಾವಾದಿ ಚೀನಾ ಭಾರತದ ಬಾಗಿಲು ತಲುಪಿದ್ದು ಉತ್ತರ ಮತ್ತು ಈಶಾನ್ಯದ ಗಡಿಗಳ ಭದ್ರತೆ ಅಪಾಯಕ್ಕೆ ಸಿಲುಕಿದ್ದು ಸಭೆ ಸೇರಬೇಕೆಂದು ನೆಹರೂ ಅವರಿಗೆ ಪಟೇಲ್ ಪತ್ರ ಬರೆದಿದ್ದರು. ಈ ಸಭೆ ನಡೆಯುವುದೇ ಇಲ್ಲ. ಅಸ್ಸಾಮಿನ ಮುಖ್ಯ ಭಾಗಗಳ ಮೇಲೂ ಚೀನೀಯರು ಕಣ್ಣು ಹಾಕಿರುವ ಪ್ರಸ್ತಾಪವೂ ಈ ಪತ್ರದಲ್ಲಿತ್ತು. ಚೀನಾದ ವಿಸ್ತರಣಾವಾದವನ್ನು ನೆಹರೂ ಮುಂದಾಗಿಯೇ ಅಂದಾಜು ಮಾಡುವಲ್ಲಿ ವಿಫಲರಾದರು. ಟಿಬೆಟ್ ಚೀನಾದ ಅವಿಭಾಜ್ಯ ಅಂಗ ಎಂದು ಭಾರತ ಒಪ್ಪಿಕೊಂಡಿತು. ಟಿಬೆಟ್ ಅಸ್ತಿತ್ವ ಕಳೆದಕೊಂಡು ಚೀನಾದ ಟಿಬೆಟನ್ ಸೀಮೆಯಾಗಿತ್ತು. ಟಿಬೆಟ್ ಮೇಲೆ ಚೀನಾದ ಸಾರ್ವಭೌಮತೆಯನ್ನು ಅಂಗೀಕರಿಸುವ ಒಪ್ಪಂದಕ್ಕೆ ಭಾರತ 1954ರಲ್ಲಿ ಸಹಿ ಹಾಕಿತು. ಹಿಂದೀ ಚೀನೀ ಭಾಯೀ ಭಾಯೀ ಎಂದರು ನೆಹರೂ. ಜಾಗತಿಕ ವೇದಿಕೆಗಳಲ್ಲಿ ಪೀಪಲ್ಸ್ ರಿಪಬ್ಲಿಕ್ ಅಫ್ ಚೀನಾವನ್ನು ಸಮರ್ಥಿಸಿ ಮಾತನಾಡಿದರು. ಭಾರತದ ಈ ಸಮರ್ಥನೆ ಮತ್ತು ಬೆಂಬಲಗಳಿಗೆ ಪ್ರತಿಯಾಗಿ ಭಾರತದೊಂದಿಗೆ ಕೈ ಜೋಡಿಸಿ ‘ಏಷ್ಯನ್ ಕೂಟ’ ರಚಿಸಲು ಚೀನಾ ಒಪ್ಪಿಕೊಳ್ಳುವುದೆಂಬ ನಿರೀಕ್ಷೆ ನೆಹರೂ ಅವರಿಗೆ ಇತ್ತು. 1956ರಲ್ಲಿ ಚೀನಾದ ಭೂಪಟಗಳು ಭಾರತಕ್ಕೆ ಸೇರಿದ್ದ 1.20 ಲಕ್ಷ ಚದರ ಕಿ.ಮೀ.ಗಳಷ್ಟು ವಿಸ್ತೀರ್ಣದ ಗಡಿ ಪ್ರದೇಶವನ್ನು ಚೀನಾಕ್ಕೆ ಸೇರಿದ್ದೆಂದು ತೋರಿಸಿದವು. ನೆಹರೂ ಅವರ ಆಕ್ಷೇಪಣೆಗೆ ಓಗೊಟ್ಟ ಚೀನಾ ಈ ನಕಾಶೆಗಳು ಲೆಕ್ಕಕ್ಕಿಲ್ಲ ಎಂದು ಆಶ್ವಾಸನೆ ನೀಡಿತು. ಆದರೆ ದಲಾಯಿಲಾಮಾ ಮತ್ತು ಟಿಬೆಟನ್ನರಿಗೆ ಭಾರತ ನೀಡಿದ ಆಶ್ರಯ ಕುರಿತು ತೀವ್ರ ತಪ್ಪು ತಿಳಿವಳಿಕೆಗಳು ಉದ್ಭವಿಸಿದವು. ಟಿಬೆಟ್ ಅನ್ನು ಭಾರತ ವಶಪಡಿಸಿಕೊಂಡು ಮಹಾಸಾಮ್ರಾಜ್ಯ ಕಟ್ಟುವ ಉದ್ದೇಶ ಭಾರತಕ್ಕಿದೆ ಎಂದು ಚೀನಾ ಅನುಮಾನಿಸಿತ್ತು.

ಚೀನಾ ವಶಪಡಿಸಿಕೊಳ್ಳುವ ಮುನ್ನ ಪೂರ್ವಕ್ಕೆ ಚೀನಾ, ದಕ್ಷಿಣಕ್ಕೆ ನೇಪಾಳ, ಭೂತಾನ ಹಾಗೂ ಭಾರತ ಮತ್ತು ಪಶ್ಚಿಮದಲ್ಲಿ ಭಾರತದ ಕಾಶ್ಮೀರ ರಾಜ್ಯಗಳಿಂದ ಸುತ್ತುವರೆಯಲ್ಪಟ್ಟಿತ್ತು ಟಿಬೆಟ್. ಭಾರತ ಉಪಖಂಡ ಮತ್ತು ಟಿಬೆಟನ್ನು ಬೇರ್ಪಡಿಸಿದ್ದು ಹಿಮಾಲಯ ಪರ್ವತಶ್ರೇಣಿಗಳು. ಭಾರತದ ಉತ್ತರ ಮತ್ತು ಈಶಾನ್ಯ ಗಡಿಗಳ ರಕ್ಷಣೋಪಾಯದಲ್ಲಿ ಟಿಬೆಟ್‍ಗೆ ಬಹುಮುಖ್ಯ ಪಾತ್ರವಿತ್ತು. ಹಿಮಾಲಯದ ಆಚೆಗೆ ಜಗತ್ತಿನ ಸಂಪರ್ಕದಿಂದ ಕಡಿದು ಹೋಗಿದ್ದ ಬಂಜರು ವಿಸ್ತಾರವಿತ್ತು. ಹೀಗಾಗಿ ಉತ್ತರದ ಎರಡು ಸಾವಿರ ಮೈಲಿಗಳಷ್ಟು ಗಡಿಯನ್ನು ಕಾಯುವ ಭಾರತದ ಭಾರವನ್ನು ಈ ಬಂಜರು ವಿಸ್ತಾರ ಹಗುರಾಗಿಸಿತ್ತು. ಚೀನೀಯರು ಟಿಬೆಟನ್ನು ಆಕ್ರಮಿಸಿಕೊಳ್ಳುವುದರೊಂದಿಗೆ ಈ ತಟಸ್ಥ ಬಂಜರು ವಿಸ್ತಾರ ಭಾರತದ ಪಾಲಿಗೆ ಕಳೆದು ಹೋಯಿತು. ಹಿಮಾಲಯದಂತಹ ಮಹಾನ್ ರಕ್ಷಣಾ ತಡೆಗೋಡೆಯ ಪ್ರಭಾವ ಕೂಡ ಕುಗ್ಗಿ ಹೋಯಿತು.

ಭಾರತ ಮತ್ತು ನೇಪಾಳದಿಂದ ಟಿಬೆಟ್ ಅನ್ನು ಮುಟ್ಟುವುದು ದುಸ್ಸಾಧ್ಯ. ವರ್ಷದಲ್ಲಿ ಆರರಿಂದ ಎಂಟು ತಿಂಗಳ ಕಾಲ ಹಿಮವನ್ನು ಹೊದ್ದು ನಿಂತ ಕಡಿದಾದ ಉನ್ನತ ಪರ್ವತಶ್ರೇಣಿಗಳನ್ನು ಹಾಯುವುದು ಹಿಮಾಲಯದಷ್ಟೇ ಎತ್ತರದ ಸವಾಲು. ಆದರೆ ಟಿಬೆಟಿನಿಂದ ಭಾರತವನ್ನು ತಲುಪುವುದು ಸುಲಭ. 14,000 ಅಡಿಗಳ ಎತ್ತರದಿಂದ 6000 ಅಡಿಗಳ ತನಕ ಕ್ರಮೇಣ ಇಳಿಜಾರು. ಟಿಬೆಟ್‍ನ ಪಶ್ಚಿಮ ಭೂಭಾಗದ ಮೂರು ವಿಭಾಗಗಳು ಭಾರತದ ಲದ್ದಾಖ್, ಹಿಮಾಚಲ ಪ್ರದೇಶ ಹಾಗೂ ಉತ್ತರಪ್ರದೇಶದ ವಾಯುವ್ಯ ಸರಹದ್ದುಗಳನ್ನು ಮುಟ್ಟುತ್ತವೆ. ಹಿಂದೂಗಳು ಮತ್ತು ಬೌದ್ಧರ ಪಾಲಿಗೆ ಪವಿತ್ರವೆನಿಸಿದ ಕೈಲಾಶ ಮಾನಸ ಸರೋವರ ಇರುವುದು ಈ ಮೂರು ವಿಭಾಗಗಳಲ್ಲಿ ಒಂದಾದ ಎಂಗಾರಿಯಲ್ಲಿ. ಇಂಡಸ್, ಸಟ್ಲೆಜ್, ಬ್ರಹ್ಮಪುತ್ರ ನದಿಗಳ ಉಗಮವೂ ಇದೇ ಮಾನಸ ಸರೋವರ ಸೀಮೆ.ಇತಿಹಾಸಕಾರ ಪ್ರೊ. ಜಾರ್ಜ್ ಜಿನ್ಸ್ ಬರ್ಗ್ ಅವರ ಪ್ರಕಾರ ಟಿಬೆಟ್‍ಅನ್ನು ನಿಯಂತ್ರಿಸುವವರು ಹಿಮಾಲಯದ ತಪ್ಪಲನ್ನು ನಿಯಂತ್ರಿಸುತ್ತಾರೆ, ಹಿಮಾಲಯದ ತಪ್ಪಲನ್ನು ನಿಯಂತ್ರಿಸುವವರು ಭಾರತ ಉಪಖಂಡದ ಭದ್ರತೆಗೆ ಬೆದರಿಕೆ ಒಡ್ಡಬಲ್ಲರು, ಭಾರತದ ಭದ್ರತೆಯನ್ನು ಬಾಧಿಸಬಲ್ಲವರು ಇಡೀ ಆಗ್ನೇಯ ಏಷ್ಯಾವನ್ನು ತಮ್ಮ ತೆಕ್ಕೆಗೆ ತೆಗೆದುಕೊಳ್ಳಬಲ್ಲರು, ಅದರೊಂದಿಗೆ ಅಖಂಡ ಏಷ್ಯಾದ ಮೇಲೆ ನಿಯಂತ್ರಣ ಸಾಧಿಸಬಲ್ಲರು.

ಮಧ್ಯ ಏಷ್ಯಾದ ಗಡಿಸೀಮೆಗಳನ್ನು ರಾಜಕೀಯ ಕ್ರಿಯೆಯ ಆಧಾರವನ್ನಾಗಿ ಮಾಡಿಕೊಳ್ಳಲು ಟಿಬೆಟ್ ಪ್ರಶಸ್ತ ನೆಲ. ಪರಮಾಣು ಯುಗದಲ್ಲಿ ಬಾಂಬರ್ ವಿಮಾನಗಳು ದಾಳಿಗೆ ಮುನ್ನ ಆಗಸಕ್ಕೆ ಚಿಮ್ಮಲು ಮತ್ತು ಕ್ಷಿಪಣಿಗಳನ್ನು ಹಾರಿಸುವ ಅಪಾಯಕಾರಿ ಸಾಮರ್ಥ್ಯ ಹೊಂದಿದ ನೆಲವಿದು ಎಂದು ಮತ್ತೊಬ್ಬ ತಜ್ಞ ಜಾನ್ ರೋಲ್ಯಾಂಡ್ ಹೇಳುತ್ತಾರೆ.

ಮೋದಿ ಮತ್ತು ಝಿನ್ ಪಿಂಗ್ ಇಬ್ಬರೂ ಸದ್ಯಕ್ಕೆ ಯುದ್ಧವನ್ನು ಒಲ್ಲರು. ಇಬ್ಬರಿಗೂ ತಮ್ಮ ದೇಶಗಳ ಅಸಲಿ ಸಮಸ್ಯೆಗಳಿಂದ ಆಂತರಿಕ ಮತ್ತು ಬಾಹ್ಯ ಗಮನವನ್ನು ಬೇರೆಡೆಗೆ ಸೆಳೆಯುವ ಅನಿವಾರ್ಯವಿದೆ. ಗಾಲ್ವಾನ್ ಕಣಿವೆಯ ವಿವಾದ ಇನ್ನೂ ಕೆಲ ತಿಂಗಳುಗಳ ಕಾಲ ಕುದಿಯಲಿದೆ.


ಇದನ್ನು ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್ 
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....