Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...