Homeಮುಖಪುಟಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ...

ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

- Advertisement -
- Advertisement -

ಚೀನಾದ ಸಂಸ್ಥೆಗಳಿಂದ ಹಣ ಸ್ವೀಕರಿಸುವುದೆಂದರೆ ಉಯ್ಯಾಲೆಯಲ್ಲಿ ಜಾಗ ಹಂಚಿಕೊಳ್ಳುವಷ್ಟೇ ಸಹಜ ಮತ್ತು ಸ್ವೀಕಾರಾರ್ಹ ಎನಿಸಿದ್ದ ಕಾಲವಿತ್ತು. ಹಾಗಿದ್ದರೂ ಬಿಜೆಪಿಯು ಗಾಲ್ವಾನ್ ಪ್ರಮಾದದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಧಾವಂತದಲ್ಲಿ ಒಂದು ಆಡುಮಾತನ್ನು ಮರೆತುಬಿಟ್ಟಿದೆ. ಅದೆಂದರೆ ನೀವು ಬೇರೆಯವರ ಕಡೆಗೆ ಬೆರಳು ತೋರಿಸಿದಾಗ ಮೂರು ಬೆರಳುಗಳು ನಿಮ್ಮನ್ನು ತೋರಿಸುತ್ತವೆ. ಈ ಪ್ರಕರಣದಲ್ಲಿ ಕನಿಷ್ಟ ಎರಡು ಬೆರಳುಗಳು ಬಿಜೆಪಿಯ ಆಂತರಿಕ ವ್ಯವಸ್ಥೆಯತ್ತ ತೋರಿಸುತ್ತಿವೆ.

ವಿದೇಶಾಂಗ ಮಂತ್ರಿ ಎಸ್. ಜೈಶಂಕರ್ ಅವರ ಮಗನ ವಿದೇಶಾಂಗ ಧೋರಣೆಯ ಚಿಂತನಾ ಚಾವಡಿಯಾದ “ದಿ ಒಬ್ಸರ್ವರ್ ರಿಸರ್ಚ್ ಫೌಂಡೇಶನ್” (ಓಆರ್‌ಎಫ್) 2016ರಲ್ಲಿ ಕೋಲ್ಕತ್ತಾದ ಸೇರಿದಂತೆ ಚೀನಾದ ಉಪರಾಯಭಾರ ಕಚೇರಿಗಳಿಂದ (ಕಾನ್ಸ್ಯೂಲೇಟ್) ಹಣಕಾಸು ಪಡೆದಿದೆ. ಅಲ್ಲದೇ ಓಆರ್‌ಎಫ್‌ಗೆ ರಿಲಯನ್ಸ್ ಇಂಡಸ್ಟ್ರೀಸ್‌ನ ಹಣಕಾಸು ಬೆಂಬಲವೂ ಇದೆ.

ಆರೆಸ್ಸೆಸ್‌ಗೆ ಹತ್ತಿರವಾಗಿರುವ ಇನ್ನೊಂದು ಚಿಂತನಾ ಚಾವಡಿಯಾಗಿರುವ ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ತನ್ನ ವೆಬ್‌ಸೈಟಿನಲ್ಲಿ, ತಾನು ವಿದೇಶಾಂಗ ಮತ್ತು ಕಾರ್ಯವ್ಯೂಹಾತ್ಮಕ ಧೋರಣೆಯ ವಿಷಯದಲ್ಲಿ ಒಂಬತ್ತು ಚೀನಿ ಸಂಸ್ಥೆಗಳೊಂದಿಗೆ ವೃತ್ತಿಪರ ಸಂಬಂಧ ಹೊಂದಿರುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ (ವಿಐಎಫ್)ನ ಸ್ಥಾಪಕ ನಿರ್ದೇಶಕರಾಗಿದ್ದು, ಅದು ಬಿಜೆಪಿ ಮತ್ತು ಆರೆಸ್ಸೆಸ್ ಜೊತೆ ನಿಕಟ ನಂಟು ಹೊಂದಿದೆ. ಈ ಎರಡೂ ಸಂಸ್ಥೆಗಳು ಈ ಮಾಹಿತಿಗಳನ್ನು ಸಾರ್ವಜನಿಕ ವೇದಿಕೆಯಲ್ಲಿ ಹೇಳಿಕೊಂಡಿವೆ.

ವಿವೇಕಾನಂದ ಇಂಟರ್‌ನ್ಯಾಷನಲ್ ಫೌಂಡೇಶನ್ ನಲ್ಲಿ ಅಜಿತ್ ದೋವಲ್. (ಬಲದಿಂದ ಮೊದಲನೆಯವರು)

ಒಂದು ವೇಳೆ ಬಿಜೆಪಿಯು 2005-06ರಷ್ಟು ಹಿಂದೆ ಪಡೆದ ಹಣವನ್ನು ಆಧರಿಸಿ ಕಾಂಗ್ರೆಸ್ ಪಕ್ಷವು ಚೀನಾ ನಂಟು ಹೊಂದಿದೆ ಎಂದು ಆರೋಪಿಸಿ ನಗಣ್ಯ ವಿಷಯವನ್ನು ಒಂದು ದೊಡ್ಡ ರಾಷ್ಟ್ರೀಯ ಭದ್ರತಾ ವಿಷಯವನ್ನಾಗಿ ಮಾಡಲು ಹೊರಡದಿದ್ದರೆ, ಈ ಎರಡೂ ಸಂಸ್ಥೆಗೆ ದೇಣಿಗೆ ನೀಡಿದ ದಾನಿಗಳ ಗುರುತು ಪರಿಚಯ ಯಾರ ಗಮನವನ್ನೂ ಸೆಳೆಯುತ್ತಿರಲಿಲ್ಲ. ವಿಶ್ವದಾದ್ಯಂತ ಸಂಸ್ಥೆಗಳು ವಿದೇಶಿ ದೇಣಿಗೆ ಪಡೆಯುವುದು ಸಾಮಾನ್ಯವಾಗಿದೆ.

ವಿದೇಶಾಂಗ ಸಚಿವರ ಮಗ ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಕಳೆದ ವರ್ಷ ಯುಎಸ್‌ಎಗೆ ಸಂಬಂಧಿಸಿದ ವಿಷಯಗಳ ನಿರ್ದೇಶಕರಾದರು. ಚೀನಾ ದೇಶಕ್ಕೆ ಭಾರತದ ಮಾಜಿ ರಾಯಭಾರಿಯೂ ಆಗಿರುವ ವಿದೇಶಾಂಗ ಸಚಿವರು ಓಆರ್‌ಎಫ್‌ಗೆ ನಿಯಮಿತವಾಗಿ ಭೇಟಿ ನೀಡಿ, ವಿದೇಶಾಂಗ ನೀತಿಗಳಿಗೆ ಸಂಬಂಧಿಸಿದ ವಿಷಯಗಳ ಮೇಲೆ ಉಪನ್ಯಾಸಗಳನ್ನು ನೀಡುತ್ತಾರೆ.

ಧ್ರುವ ಜೈಶಂಕರ್ ಒಬ್ಸರ್ವರ್ ರಿಸರ್ಚ್ ಫೌಂಡೇಶನ್‌ನಲ್ಲಿ ಮಾತನಾಡುತ್ತಿರುವುದು

ಜೈಶಂಕರ್ ಅವರ ಓಆರ್‌ಎಫ್‌ನ ವೆಬ್‌ಸೈಟಿನಲ್ಲಿ ವಿದೇಶಿ ದಾನಿಗಳ ಪಟ್ಟಿಯನ್ನು ನೀಡಲಾಗಿದ್ದು, ಅವರಿಂದ ಪಡೆದ ಹಣದ ಮೊತ್ತವನ್ನೂ ನಮೂದಿಸಲಾಗಿದೆ. ಅದರಂತೆ, ಓಆರ್‌ಎಫ್ 2016ಲ್ಲಿ ಚೀನಾದ ಉಪರಾಯಭಾರಿ (ಕಾನ್ಸ್ಯೂಲೇಟ್ ಜನರಲ್)ಯಿಂದ ಒಟ್ಟು 1.25 ಕೋಟಿ ರೂ. ಮೊತ್ತದ ಮೂರು ದೇಣಿಗಳನ್ನು ಮತ್ತು ಮರುವರ್ಷ 50 ಲಕ್ಷ ರೂ.ಗಳ ದೇಣಿಗೆಯನ್ನು ಪಡೆದಿತ್ತು.

ಸಂಸ್ಥೆಯು ಕೊಲ್ಕತ್ತಾದ “ಕಾನ್ಸ್ಯೂಲೇಟ್ ಜನರಲ್ ಆಫ್ ರಿಪಬ್ಲಿಕ್ ಆಫ್ ಚೈನಾ”ದಿಂದ ಎಪ್ರಿಲ್ 29, 2016ರಂದು 7.7 ಲಕ್ಷ ರೂ., ಅದೇ ವರ್ಷ ನವಂಬರ್ 4ರಂದು 11.55 ಲಕ್ಷ ರೂ. ಮತ್ತೊಮ್ಮೆ ಡಿಸೆಂಬರ್ 1, 2017ರಂದು 50 ಲಕ್ಷ ರೂ. ದೇಣಿಗೆ ಪಡೆದಿದೆ.

ವಿವೇಕಾನಂದ ಇಂಟರ್ನ್ಯಾಷನಲ್ ಫೌಂಡೇಶನ್ ತಾನು ಸಂಬಂಧ ಹೊಂದಿರುವ ಚೀನಾದ ಸಂಸ್ಥೆಗಳ ಪಟ್ಟಿ ನೀಡಿದೆ. ಅವುಗಳೆಂದರೆ, ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿಕ್ ಸ್ಟಡೀಸ್; ಬೀಜಿಂಗ್‌ನ ಚೈನಾ ಇನ್ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್  ಸ್ಟಡೀಸ್; ಬೀಜಿಂಗ್‌ನ ಸೆಂಟರ್ ಫಾರ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಪೆಕಿಂಗ್ ಯುನಿವರ್ಸಿಟಿ; ಕುನ್‌ಮಿಂಗ್‌ನ ಯುನಾನ್ ಯುನಿವರ್ಸಿಟಿ ಆಫ್ ಫೈನಾನ್ಸ್ ಎಂಡ್ ಇಕನಾಮಿಕ್ಸ್‌ನ ರಿಸರ್ಚ್ ಇನ್ಸ್ಟಿಟ್ಯೂಟ್ ಫಾರ್ ಇಂಡಿಯನ್ ಓಶನ್ ಸ್ಟಡೀಸ್; ಬೀಜಿಂಗ್‌ನ ಚೈನೀಸ್ ಅಕಾಡೆಮಿ ಆಫ್ ಸೋಷಿಯಲ್ ಸಾಯನ್ಸಸ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಇಂಟರ್ನ್ಯಾಷನಲ್ ಸ್ಟ್ರಾಟಜಿ; ಚೆಂಗ್ಡೂವಿನ ಸೆಂಟರ್ ಫಾರ್ ಸೌತ್ ಏಷ್ಯಾ ಎಂಡ್ ವೆಸ್ಟ್ ಚೈನಾ ಕೊಅಪರೇಷನ್ ಎಂಡ್ ಡೆವಲಪ್‌ಮೆಂಟ್ ಯುನಿವರ್ಸಿಟಿ; ಚೆಂಗ್ಡೂವಿನ ಸಿಚುವಾನ್ ಯುನಿವರ್ಸಿಟಿಯ ಇನ್ಸ್ಟಿಟ್ಯೂಟ್ ಆಫ್ ಸೌತ್ ಏಷ್ಯನ್ ಸ್ಟಡೀಸ್; ಬೀಜಿಂಗ್‌ನ ಸಿಲ್ಕ್ ರೋಡ್ ಥಿಂಕ್ ಟ್ಯಾಂಕ್ ನೆಟ್‌ವರ್ಕ್ ಡೆವಲಪ್‌ಮೆಂಟ್ ರಿಸರ್ಚ್ ಕೌನ್ಸಿಲ್; ಮತ್ತು ಶೆನ್‌ಝೆನ್‌ನ ಸೆಂಟರ್ ಫಾರ್ ಇಂಡಿಯನ್ ಸ್ಟಡೀಸ್.

ಭಾರತದಲ್ಲಿ ಹೂಡಿಕೆಯ ಸಾಧ್ಯತೆಗಳ ಕುರಿತು ಒಆರ್‌ಎಫ್‌ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಚೀನಾದ ಪ್ರತಿನಿಧಿಗಳು ಭಾಗವಹಿಸಿರುವುದು

ರಕ್ಷಣಾ ವಲಯದ ಮೂಲಗಳ ಪ್ರಕಾರ ಈ ಎರಡು ಚಿಂತನಾ ಚಾವಡಿಗಳ ಸದಸ್ಯರಿಗೆ ಆಡಳಿತದ ನಾರ್ಥ್ ಬ್ಲಾಕ್ ಮತ್ತು ಸೌತ್ ಬ್ಲಾಕ್ (ಹಣಕಾಸು ಮತ್ತು ವಿದೇಶಾಂಗ ಸಚಿವಾಲಯಗಳು)ಗಳಿಗೆ ಸಾಕಷ್ಟು ಮುಕ್ತವಾದ ಪ್ರವೇಶವಿದೆ.

ಎರಡೂ ಸಂಸ್ಥೆಗಳನ್ನು ಇ- ಮೈಲ್ ಮತ್ತು ಟ್ವಿಟ್ಟರ್ ಮೂಲಕ ಸಂಪರ್ಕಿಸಿದಾಗ ಯಾವುದೇ ವಿವರಣೆ ಬಂದಿಲ್ಲವಾದರೂ, ಈ ವರದಿಯು ಈ ದೇಣಿಗೆಗಳು ಕಾನೂನುಬದ್ಧವಲ್ಲ ಎಂದು ಸೂಚಿಸುತ್ತಿಲ್ಲ.

ಆದರೆ, ತನ್ನ ವಿದೇಶಾಂಗ ಸಚಿವರು ಮತ್ತು ಸರಕಾರದ ಭದ್ರತಾ ಸಲಹೆಗಾರರು ಭಾಗಿಯಾಗಿರುವ ಮತ್ತು ತನಗೆ ನಿಕಟವಾಗಿರುವ ಸಂಸ್ಥೆಗಳು ಚೀನಾದ ಸರಕಾರ ಮತ್ತು ಸಂಸ್ಥೆಗಳಿಂದ ದೇಣಿಗೆ ಪಡೆದಿರುವಾಗ, ಒಂದೂವರೆ ದಶಕದ ಹಿಂದೆ ಕಾಂಗ್ರೆಸ್ ಪಡೆದುಕೊಂಡ ದೇಣಿಗೆಯನ್ನು  ಹಿಡಿದುಕೊಂಡು ರಾಷ್ಟ್ರೀಯ ಭದ್ರತಾ ಪ್ರಶ್ನೆಯನ್ನು ಎತ್ತಿರುವ ಬಿಜೆಪಿ ನಡೆಯು ತನ್ನ ಬಟ್ಟಲಿನಲ್ಲಿ ಹೆಗ್ಗಣ ಇಟ್ಟುಕೊಂಡು, ಕಾಂಗ್ರೆಸ್ ಬಟ್ಟಲಿನಲ್ಲಿ ನೊಣವನ್ನು ತೋರಿಸಿದಂತಾಗಿದೆ.

ಕೃಪೆ: ಟೆಲಿಗ್ರಾಫ್‌ಇಂಡಿಯಾ

ಅನುವಾದ: ನಿಖಲ್ ಕೋಲ್ಪೆ


ಭಾರತದಲ್ಲಿ ನಿತ್ಯ ಐದು ಕಸ್ಟಡಿ ಸಾವು; ಬಹುತೇಕರು ಮುಸ್ಲಿಮರು, ದಲಿತರು ಮತ್ತು ಅಂಚಿಗೆ ತಳ್ಳಲ್ಪಟ್ಟವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...